ಮಾಗಡಿ: ಜಗುಲಿ ಮೇಲೆ ಮಲಗಿದ್ದ ವೃದ್ಧೆಯನ್ನು ಹೊತ್ತೊಯ್ದ ಚಿರತೆ!

ರಾಮನಗರ: ಮನೆಯ ಮುಂದೆ‌ ಜಗುಲಿ‌ ಮೇಲೆ‌ ಮಲಗಿದ್ದ ವೃದ್ಧೆಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಮಾಗಡಿ ತಾಲೂಕಿನ‌ ಕೊತ್ತಗಾನಹಳ್ಳಿ ಗ್ರಾಮದ ಬಳಿ ನಡೆದಿದೆ. ಚಿರತೆ ದಾಳಿಗೆ ಕೊತ್ತಗಾನಹಳ್ಳಿ ಗ್ರಾಮದ ನಿವಾಸಿ ಗಂಗಮ್ಮ(72) ಬಲಿಯಾಗಿದ್ದಾರೆ. ಬೇಸಿಗೆ ಹಿನ್ನೆಲೆಯಲ್ಲಿ ಮನೆ ಮುಂದೆ‌ ಇರುವ ಜಗುಲಿ‌ ಮೇಲೆ‌ ವೃದ್ಧೆ ಮಲಗಿದ್ದರು. ಮಧ್ಯರಾತ್ರಿ ದಾಳಿ ನಡೆಸಿ ವೃದ್ಧೆಯನ್ನು ಹೊತ್ತೊಯ್ದಿದೆ. ವಾರದ ಹಿಂದೆಯೂ ಇದೇ ಗ್ರಾಮದ ಸಮೀಪ 3 ವರ್ಷದ ಮಗುವನ್ನ ಚಿರತೆ ಬಲಿ‌ ಪಡೆದಿತ್ತು. ನರಭಕ್ಷಕ‌ ಚಿರತೆ ಹಾವಳಿಯಿಂದ ಜನರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ತಾವರೆಕೆರೆ […]

ಮಾಗಡಿ: ಜಗುಲಿ ಮೇಲೆ ಮಲಗಿದ್ದ ವೃದ್ಧೆಯನ್ನು ಹೊತ್ತೊಯ್ದ ಚಿರತೆ!
ಸಾಧು ಶ್ರೀನಾಥ್​

Updated on: May 16, 2020 | 10:19 AM

ರಾಮನಗರ: ಮನೆಯ ಮುಂದೆ‌ ಜಗುಲಿ‌ ಮೇಲೆ‌ ಮಲಗಿದ್ದ ವೃದ್ಧೆಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಮಾಗಡಿ ತಾಲೂಕಿನ‌ ಕೊತ್ತಗಾನಹಳ್ಳಿ ಗ್ರಾಮದ ಬಳಿ ನಡೆದಿದೆ. ಚಿರತೆ ದಾಳಿಗೆ ಕೊತ್ತಗಾನಹಳ್ಳಿ ಗ್ರಾಮದ ನಿವಾಸಿ ಗಂಗಮ್ಮ(72) ಬಲಿಯಾಗಿದ್ದಾರೆ.

ಬೇಸಿಗೆ ಹಿನ್ನೆಲೆಯಲ್ಲಿ ಮನೆ ಮುಂದೆ‌ ಇರುವ ಜಗುಲಿ‌ ಮೇಲೆ‌ ವೃದ್ಧೆ ಮಲಗಿದ್ದರು. ಮಧ್ಯರಾತ್ರಿ ದಾಳಿ ನಡೆಸಿ ವೃದ್ಧೆಯನ್ನು ಹೊತ್ತೊಯ್ದಿದೆ. ವಾರದ ಹಿಂದೆಯೂ ಇದೇ ಗ್ರಾಮದ ಸಮೀಪ 3 ವರ್ಷದ ಮಗುವನ್ನ ಚಿರತೆ ಬಲಿ‌ ಪಡೆದಿತ್ತು. ನರಭಕ್ಷಕ‌ ಚಿರತೆ ಹಾವಳಿಯಿಂದ ಜನರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 9:05 am, Sat, 16 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us