AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಷೇರು ಮಾರ್ಕೆಟ್​ನ ಈ 8 ಕಂಪೆನಿಗಳ ಮೌಲ್ಯ ಒಂದೇ ವಾರದಲ್ಲಿ 1.94 ಲಕ್ಷ ಕೋಟಿ ರೂ. ಹೆಚ್ಚಳ

ಭಾರತದ ಷೇರು ಮಾರ್ಕೆಟ್​ನ ಅತ್ಯಂತ ಮೌಲ್ಯಯುತ 10 ಕಂಪೆನಿಗಳ ಪೈಕಿ 8ರ ಮಾರುಕಟ್ಟೆ ಮೌಲ್ಯ 1.94 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ. ಇನ್ನು ಮಾರ್ಚ್ 1ರಿಂದ 5ನೇ ತಾರೀಕಿನ ಮಧ್ಯೆ ಎಫ್​ಪಿಐನಿಂದ 5156 ಕೋಟಿ ರೂ. ನಿವ್ವಳವಾಗಿ ಹಿಂಪಡೆಯಲಾಗಿದೆ.

ಭಾರತದ ಷೇರು ಮಾರ್ಕೆಟ್​ನ ಈ 8 ಕಂಪೆನಿಗಳ ಮೌಲ್ಯ ಒಂದೇ ವಾರದಲ್ಲಿ 1.94 ಲಕ್ಷ ಕೋಟಿ ರೂ. ಹೆಚ್ಚಳ
ಸಾಂದರ್ಭಿಕ ಚಿತ್ರ
Srinivas Mata
| Edited By: |

Updated on: Mar 07, 2021 | 1:40 PM

Share

ಭಾರತದ ಅತ್ಯಂತ ಮೌಲ್ಯಯುತ ಹತ್ತು ಕಂಪೆನಿಗಳ ಪೈಕಿ ಎಂಟರ ಮಾರುಕಟ್ಟೆ ಮೌಲ್ಯ ಕಳೆದ ವಾರ 1.94 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆ ಕಂಡಿರುವುದು ರಿಲಯನ್ಸ್ ಇಂಡಸ್ಟ್ರೀಸ್ ಲಿ. ಇನ್ನು ಇದಕ್ಕೆ ವ್ಯತಿರಿಕ್ತವಾಗಿ ಎಚ್​​ಡಿಎಫ್​ಸಿ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) ಮಾರುಕಟ್ಟೆ ಮೌಲ್ಯ ಇಳಿಕೆ ಕಂಡಿದೆ. ಇದರಲ್ಲಿ ರಿಲಯನ್ಸ್ ಕಂಪೆನಿಯ ಮೌಲ್ಯದಲ್ಲಿ ರೂ. 60,034.51 ಕೋಟಿ ಹೆಚ್ಚಳವಾಗಿ, ಒಟ್ಟಾರೆ ಮಾರುಕಟ್ಟೆ ಮೌಲ್ಯವು ರೂ. 13,81,078.86 ಕೋಟಿಯನ್ನು ಮುಟ್ಟಿದೆ.

ಕಳೆದ ವಾರ ಯಾವ ಕಂಪೆನಿಗಳ ಮಾರುಕಟ್ಟೆ ಮೌಲ್ಯ ಎಷ್ಟು ಹೆಚ್ಚಾಗಿದೆ ಎಂಬ ವಿವರ ಹೀಗಿದೆ: 1. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ರೂ. 41,048.98 ಕೋಟಿ 2. ಕೊಟಕ್ ಮಹೀಂದ್ರಾ ಬ್ಯಾಂಕ್ ರೂ.28,011.19 ಕೋಟಿ 3. ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ (ಎಚ್​ಯುಎಲ್) ರೂ. 16,388 ಕೋಟಿ 4. ಇನ್ಫೋಸಿಸ್ ರೂ. 27,114.19 ಕೋಟಿ 5. ಐಸಿಐಸಿಐ ಬ್ಯಾಂಕ್ ರೂ. 8,424.22 ಕೋಟಿ 6. ಎಚ್​ಡಿಎಫ್​ಸಿ ರೂ. 1038 ಕೋಟಿ 7. ಬಜಾಜ್ ಫೈನಾನ್ಸ್ 12,419.32 ಕೋಟಿ

ಇನ್ನು ಎಚ್​ಡಿಎಫ್​​ಸಿ ಬ್ಯಾಂಕ್ ಮೌಲ್ಯವು ರೂ. 2590.08 ಕೋಟಿ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಾರುಕಟ್ಟೆ ಮೌಲ್ಯವು ರೂ. 5711.75 ಕೋಟಿ ಇಳಿಕೆ ಆಗಿದೆ.

ಭಾರತ ಅತ್ಯಂತ ಮೌಲ್ಯಯುತ ಕಂಪೆನಿಗಳು ಹೀಗಿವೆ: ರಿಲಯನ್ಸ್ ಇಂಡಸ್ಟ್ರೀಸ್, ಟಿಸಿಎಸ್, ಎಚ್​ಡಿಎಫ್​ಸಿ ಬ್ಯಾಂಕ್, ಇನ್ಫೋಸಿಸ್, ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್, ಎಚ್​ಡಿಎಫ್​ಸಿ, ಐಸಿಐಸಿಐ ಬ್ಯಾಂಕ್, ಕೊಟಕ್ ಮಹೀಂದ್ರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಬಜಾಜ್ ಫೈನಾನ್ಸ್.

ಎಫ್​ಪಿಐನಿಂದ 5,156 ಕೋಟಿ ರೂ. ವಾಪಸ್: ಮಾರ್ಚ್ 1ರಿಂದ 5ನೇ ತಾರೀಕಿನ ಮಧ್ಯೆ ಫಾರಿನ್ ಪೋರ್ಟ್​​ಫೋಲಿಯೋ ಇನ್ವೆಸ್ಟರ್ಸ್ ಈಕ್ವಿಟಿಯಿಂದ ನಿವ್ವಳವಾಗಿ ರೂ. 881 ಕೋಟಿ ಹಾಗೂ ಡೆಟ್ ಸೆಗ್ಮಟ್​ನಿಂದ ರೂ. 4,275 ಕೋಟಿ ಹಿಂಪಡೆದಿದ್ದಾರೆ. ಒಟ್ಟಾರೆಯಾಗಿ 5,156 ಕೋಟಿ ರೂಪಾಯಿ ಹಿಂತೆಗೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಫೆಬ್ರವರಿಯಲ್ಲಿ ಎಫ್​ಪಿಐನಿಂದ ರೂ. 23,663 ಕೋಟಿ ಹಾಗೂ ಜನವರಿಯಲ್ಲಿ 14,649 ಕೋಟಿ ರೂಪಾಯಿ ಹೂಡಲಾಗಿತ್ತು.

ಇದನ್ನೂ ಓದಿ: ಷೇರು ಮಾರ್ಕೆಟ್​ನಲ್ಲಿ ಹಣ ಮಾಡುವುದು ಹೇಗೆ ಎಂಬುದಕ್ಕೆ ಇಲ್ಲಿವೆ 10 ಸಿಂಪಲ್ ಟಿಪ್ಸ್

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್