AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಷೇರು ಮಾರ್ಕೆಟ್​ನ ಈ 8 ಕಂಪೆನಿಗಳ ಮೌಲ್ಯ ಒಂದೇ ವಾರದಲ್ಲಿ 1.94 ಲಕ್ಷ ಕೋಟಿ ರೂ. ಹೆಚ್ಚಳ

ಭಾರತದ ಷೇರು ಮಾರ್ಕೆಟ್​ನ ಅತ್ಯಂತ ಮೌಲ್ಯಯುತ 10 ಕಂಪೆನಿಗಳ ಪೈಕಿ 8ರ ಮಾರುಕಟ್ಟೆ ಮೌಲ್ಯ 1.94 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ. ಇನ್ನು ಮಾರ್ಚ್ 1ರಿಂದ 5ನೇ ತಾರೀಕಿನ ಮಧ್ಯೆ ಎಫ್​ಪಿಐನಿಂದ 5156 ಕೋಟಿ ರೂ. ನಿವ್ವಳವಾಗಿ ಹಿಂಪಡೆಯಲಾಗಿದೆ.

ಭಾರತದ ಷೇರು ಮಾರ್ಕೆಟ್​ನ ಈ 8 ಕಂಪೆನಿಗಳ ಮೌಲ್ಯ ಒಂದೇ ವಾರದಲ್ಲಿ 1.94 ಲಕ್ಷ ಕೋಟಿ ರೂ. ಹೆಚ್ಚಳ
ಸಾಂದರ್ಭಿಕ ಚಿತ್ರ
Srinivas Mata
| Edited By: |

Updated on: Mar 07, 2021 | 1:40 PM

Share

ಭಾರತದ ಅತ್ಯಂತ ಮೌಲ್ಯಯುತ ಹತ್ತು ಕಂಪೆನಿಗಳ ಪೈಕಿ ಎಂಟರ ಮಾರುಕಟ್ಟೆ ಮೌಲ್ಯ ಕಳೆದ ವಾರ 1.94 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆ ಕಂಡಿರುವುದು ರಿಲಯನ್ಸ್ ಇಂಡಸ್ಟ್ರೀಸ್ ಲಿ. ಇನ್ನು ಇದಕ್ಕೆ ವ್ಯತಿರಿಕ್ತವಾಗಿ ಎಚ್​​ಡಿಎಫ್​ಸಿ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) ಮಾರುಕಟ್ಟೆ ಮೌಲ್ಯ ಇಳಿಕೆ ಕಂಡಿದೆ. ಇದರಲ್ಲಿ ರಿಲಯನ್ಸ್ ಕಂಪೆನಿಯ ಮೌಲ್ಯದಲ್ಲಿ ರೂ. 60,034.51 ಕೋಟಿ ಹೆಚ್ಚಳವಾಗಿ, ಒಟ್ಟಾರೆ ಮಾರುಕಟ್ಟೆ ಮೌಲ್ಯವು ರೂ. 13,81,078.86 ಕೋಟಿಯನ್ನು ಮುಟ್ಟಿದೆ.

ಕಳೆದ ವಾರ ಯಾವ ಕಂಪೆನಿಗಳ ಮಾರುಕಟ್ಟೆ ಮೌಲ್ಯ ಎಷ್ಟು ಹೆಚ್ಚಾಗಿದೆ ಎಂಬ ವಿವರ ಹೀಗಿದೆ: 1. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ರೂ. 41,048.98 ಕೋಟಿ 2. ಕೊಟಕ್ ಮಹೀಂದ್ರಾ ಬ್ಯಾಂಕ್ ರೂ.28,011.19 ಕೋಟಿ 3. ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ (ಎಚ್​ಯುಎಲ್) ರೂ. 16,388 ಕೋಟಿ 4. ಇನ್ಫೋಸಿಸ್ ರೂ. 27,114.19 ಕೋಟಿ 5. ಐಸಿಐಸಿಐ ಬ್ಯಾಂಕ್ ರೂ. 8,424.22 ಕೋಟಿ 6. ಎಚ್​ಡಿಎಫ್​ಸಿ ರೂ. 1038 ಕೋಟಿ 7. ಬಜಾಜ್ ಫೈನಾನ್ಸ್ 12,419.32 ಕೋಟಿ

ಇನ್ನು ಎಚ್​ಡಿಎಫ್​​ಸಿ ಬ್ಯಾಂಕ್ ಮೌಲ್ಯವು ರೂ. 2590.08 ಕೋಟಿ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಾರುಕಟ್ಟೆ ಮೌಲ್ಯವು ರೂ. 5711.75 ಕೋಟಿ ಇಳಿಕೆ ಆಗಿದೆ.

ಭಾರತ ಅತ್ಯಂತ ಮೌಲ್ಯಯುತ ಕಂಪೆನಿಗಳು ಹೀಗಿವೆ: ರಿಲಯನ್ಸ್ ಇಂಡಸ್ಟ್ರೀಸ್, ಟಿಸಿಎಸ್, ಎಚ್​ಡಿಎಫ್​ಸಿ ಬ್ಯಾಂಕ್, ಇನ್ಫೋಸಿಸ್, ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್, ಎಚ್​ಡಿಎಫ್​ಸಿ, ಐಸಿಐಸಿಐ ಬ್ಯಾಂಕ್, ಕೊಟಕ್ ಮಹೀಂದ್ರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಬಜಾಜ್ ಫೈನಾನ್ಸ್.

ಎಫ್​ಪಿಐನಿಂದ 5,156 ಕೋಟಿ ರೂ. ವಾಪಸ್: ಮಾರ್ಚ್ 1ರಿಂದ 5ನೇ ತಾರೀಕಿನ ಮಧ್ಯೆ ಫಾರಿನ್ ಪೋರ್ಟ್​​ಫೋಲಿಯೋ ಇನ್ವೆಸ್ಟರ್ಸ್ ಈಕ್ವಿಟಿಯಿಂದ ನಿವ್ವಳವಾಗಿ ರೂ. 881 ಕೋಟಿ ಹಾಗೂ ಡೆಟ್ ಸೆಗ್ಮಟ್​ನಿಂದ ರೂ. 4,275 ಕೋಟಿ ಹಿಂಪಡೆದಿದ್ದಾರೆ. ಒಟ್ಟಾರೆಯಾಗಿ 5,156 ಕೋಟಿ ರೂಪಾಯಿ ಹಿಂತೆಗೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಫೆಬ್ರವರಿಯಲ್ಲಿ ಎಫ್​ಪಿಐನಿಂದ ರೂ. 23,663 ಕೋಟಿ ಹಾಗೂ ಜನವರಿಯಲ್ಲಿ 14,649 ಕೋಟಿ ರೂಪಾಯಿ ಹೂಡಲಾಗಿತ್ತು.

ಇದನ್ನೂ ಓದಿ: ಷೇರು ಮಾರ್ಕೆಟ್​ನಲ್ಲಿ ಹಣ ಮಾಡುವುದು ಹೇಗೆ ಎಂಬುದಕ್ಕೆ ಇಲ್ಲಿವೆ 10 ಸಿಂಪಲ್ ಟಿಪ್ಸ್

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ