AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಷೇರು ಮಾರ್ಕೆಟ್​ನ ಈ 8 ಕಂಪೆನಿಗಳ ಮೌಲ್ಯ ಒಂದೇ ವಾರದಲ್ಲಿ 1.94 ಲಕ್ಷ ಕೋಟಿ ರೂ. ಹೆಚ್ಚಳ

ಭಾರತದ ಷೇರು ಮಾರ್ಕೆಟ್​ನ ಅತ್ಯಂತ ಮೌಲ್ಯಯುತ 10 ಕಂಪೆನಿಗಳ ಪೈಕಿ 8ರ ಮಾರುಕಟ್ಟೆ ಮೌಲ್ಯ 1.94 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ. ಇನ್ನು ಮಾರ್ಚ್ 1ರಿಂದ 5ನೇ ತಾರೀಕಿನ ಮಧ್ಯೆ ಎಫ್​ಪಿಐನಿಂದ 5156 ಕೋಟಿ ರೂ. ನಿವ್ವಳವಾಗಿ ಹಿಂಪಡೆಯಲಾಗಿದೆ.

ಭಾರತದ ಷೇರು ಮಾರ್ಕೆಟ್​ನ ಈ 8 ಕಂಪೆನಿಗಳ ಮೌಲ್ಯ ಒಂದೇ ವಾರದಲ್ಲಿ 1.94 ಲಕ್ಷ ಕೋಟಿ ರೂ. ಹೆಚ್ಚಳ
ಸಾಂದರ್ಭಿಕ ಚಿತ್ರ
Srinivas Mata
| Edited By: |

Updated on: Mar 07, 2021 | 1:40 PM

Share

ಭಾರತದ ಅತ್ಯಂತ ಮೌಲ್ಯಯುತ ಹತ್ತು ಕಂಪೆನಿಗಳ ಪೈಕಿ ಎಂಟರ ಮಾರುಕಟ್ಟೆ ಮೌಲ್ಯ ಕಳೆದ ವಾರ 1.94 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆ ಕಂಡಿರುವುದು ರಿಲಯನ್ಸ್ ಇಂಡಸ್ಟ್ರೀಸ್ ಲಿ. ಇನ್ನು ಇದಕ್ಕೆ ವ್ಯತಿರಿಕ್ತವಾಗಿ ಎಚ್​​ಡಿಎಫ್​ಸಿ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) ಮಾರುಕಟ್ಟೆ ಮೌಲ್ಯ ಇಳಿಕೆ ಕಂಡಿದೆ. ಇದರಲ್ಲಿ ರಿಲಯನ್ಸ್ ಕಂಪೆನಿಯ ಮೌಲ್ಯದಲ್ಲಿ ರೂ. 60,034.51 ಕೋಟಿ ಹೆಚ್ಚಳವಾಗಿ, ಒಟ್ಟಾರೆ ಮಾರುಕಟ್ಟೆ ಮೌಲ್ಯವು ರೂ. 13,81,078.86 ಕೋಟಿಯನ್ನು ಮುಟ್ಟಿದೆ.

ಕಳೆದ ವಾರ ಯಾವ ಕಂಪೆನಿಗಳ ಮಾರುಕಟ್ಟೆ ಮೌಲ್ಯ ಎಷ್ಟು ಹೆಚ್ಚಾಗಿದೆ ಎಂಬ ವಿವರ ಹೀಗಿದೆ: 1. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ರೂ. 41,048.98 ಕೋಟಿ 2. ಕೊಟಕ್ ಮಹೀಂದ್ರಾ ಬ್ಯಾಂಕ್ ರೂ.28,011.19 ಕೋಟಿ 3. ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ (ಎಚ್​ಯುಎಲ್) ರೂ. 16,388 ಕೋಟಿ 4. ಇನ್ಫೋಸಿಸ್ ರೂ. 27,114.19 ಕೋಟಿ 5. ಐಸಿಐಸಿಐ ಬ್ಯಾಂಕ್ ರೂ. 8,424.22 ಕೋಟಿ 6. ಎಚ್​ಡಿಎಫ್​ಸಿ ರೂ. 1038 ಕೋಟಿ 7. ಬಜಾಜ್ ಫೈನಾನ್ಸ್ 12,419.32 ಕೋಟಿ

ಇನ್ನು ಎಚ್​ಡಿಎಫ್​​ಸಿ ಬ್ಯಾಂಕ್ ಮೌಲ್ಯವು ರೂ. 2590.08 ಕೋಟಿ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಾರುಕಟ್ಟೆ ಮೌಲ್ಯವು ರೂ. 5711.75 ಕೋಟಿ ಇಳಿಕೆ ಆಗಿದೆ.

ಭಾರತ ಅತ್ಯಂತ ಮೌಲ್ಯಯುತ ಕಂಪೆನಿಗಳು ಹೀಗಿವೆ: ರಿಲಯನ್ಸ್ ಇಂಡಸ್ಟ್ರೀಸ್, ಟಿಸಿಎಸ್, ಎಚ್​ಡಿಎಫ್​ಸಿ ಬ್ಯಾಂಕ್, ಇನ್ಫೋಸಿಸ್, ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್, ಎಚ್​ಡಿಎಫ್​ಸಿ, ಐಸಿಐಸಿಐ ಬ್ಯಾಂಕ್, ಕೊಟಕ್ ಮಹೀಂದ್ರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಬಜಾಜ್ ಫೈನಾನ್ಸ್.

ಎಫ್​ಪಿಐನಿಂದ 5,156 ಕೋಟಿ ರೂ. ವಾಪಸ್: ಮಾರ್ಚ್ 1ರಿಂದ 5ನೇ ತಾರೀಕಿನ ಮಧ್ಯೆ ಫಾರಿನ್ ಪೋರ್ಟ್​​ಫೋಲಿಯೋ ಇನ್ವೆಸ್ಟರ್ಸ್ ಈಕ್ವಿಟಿಯಿಂದ ನಿವ್ವಳವಾಗಿ ರೂ. 881 ಕೋಟಿ ಹಾಗೂ ಡೆಟ್ ಸೆಗ್ಮಟ್​ನಿಂದ ರೂ. 4,275 ಕೋಟಿ ಹಿಂಪಡೆದಿದ್ದಾರೆ. ಒಟ್ಟಾರೆಯಾಗಿ 5,156 ಕೋಟಿ ರೂಪಾಯಿ ಹಿಂತೆಗೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಫೆಬ್ರವರಿಯಲ್ಲಿ ಎಫ್​ಪಿಐನಿಂದ ರೂ. 23,663 ಕೋಟಿ ಹಾಗೂ ಜನವರಿಯಲ್ಲಿ 14,649 ಕೋಟಿ ರೂಪಾಯಿ ಹೂಡಲಾಗಿತ್ತು.

ಇದನ್ನೂ ಓದಿ: ಷೇರು ಮಾರ್ಕೆಟ್​ನಲ್ಲಿ ಹಣ ಮಾಡುವುದು ಹೇಗೆ ಎಂಬುದಕ್ಕೆ ಇಲ್ಲಿವೆ 10 ಸಿಂಪಲ್ ಟಿಪ್ಸ್

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ