AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್, ಶಿರಾ ಕ್ಷೇತ್ರದ ಮೇಲೆ ರಾಜಣ್ಣ ಕಣ್ಣು?

ತುಮಕೂರು: ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ್ ಅವರ ಸಾವಿನಿಂದ ತೆರವಾದ ಕ್ಷೇತ್ರದಲ್ಲಿ ಈಗ ರಾಜಕೀಯ ಕಾವು ರಂಗೇರುತ್ತಿದೆ. ಇದಕ್ಕೆ ಕಾರಣ ಕಾಂಗ್ರೆಸ್‌ ಪಕ್ಷದಲ್ಲಿನ ಒಳರಾಜಕೀಯ. ಹೌದು ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ್‌ ಅವರ ಸಾವಿನಿಂದ ಆ ಕ್ಷೇತ್ರದಲ್ಲೀಗ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಬಗ್ಗೆ ಮಧುಗಿರಿಯಲ್ಲಿ ಶಿರಾ ರಾಜಕಾರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್‌ ನಾಯಕ ಕೆ ಎನ್‌ ರಾಜಣ್ಣ, ಸೆಪ್ಟೆಂಬರ್‌ 27 ಕ್ಕೆ ಸತ್ಯನಾರಾಯಣ್ ಅವರ ತಿಥಿ ಇದೆ. ಅದಾದ ನಂತರ ರಾಜಕೀಯ ಚಟುವಟಿಕೆಗಳು […]

ತುಮಕೂರು ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್, ಶಿರಾ ಕ್ಷೇತ್ರದ ಮೇಲೆ ರಾಜಣ್ಣ ಕಣ್ಣು?
Guru
|

Updated on: Aug 19, 2020 | 7:46 PM

Share

ತುಮಕೂರು: ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ್ ಅವರ ಸಾವಿನಿಂದ ತೆರವಾದ ಕ್ಷೇತ್ರದಲ್ಲಿ ಈಗ ರಾಜಕೀಯ ಕಾವು ರಂಗೇರುತ್ತಿದೆ. ಇದಕ್ಕೆ ಕಾರಣ ಕಾಂಗ್ರೆಸ್‌ ಪಕ್ಷದಲ್ಲಿನ ಒಳರಾಜಕೀಯ.

ಹೌದು ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ್‌ ಅವರ ಸಾವಿನಿಂದ ಆ ಕ್ಷೇತ್ರದಲ್ಲೀಗ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಬಗ್ಗೆ ಮಧುಗಿರಿಯಲ್ಲಿ ಶಿರಾ ರಾಜಕಾರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್‌ ನಾಯಕ ಕೆ ಎನ್‌ ರಾಜಣ್ಣ, ಸೆಪ್ಟೆಂಬರ್‌ 27 ಕ್ಕೆ ಸತ್ಯನಾರಾಯಣ್ ಅವರ ತಿಥಿ ಇದೆ. ಅದಾದ ನಂತರ ರಾಜಕೀಯ ಚಟುವಟಿಕೆಗಳು ನಡೆಯುತ್ತವೆ.ತಿಥಿಯಾಗುವ ಮುನ್ನವೇ ರಾಜಕಾರಣ ಮಾಡೋದು ಸರಿಯಲ್ಲ. ನಮ್ಮ ಮುಂದಿನ ನಿರ್ದಾರ ಏನಿದ್ದರೂ ಮುಖಂಡರ ಜೊತೆ ಕೂತು ಮಾತನಾಡಿದ ನಂತರವೇ ಎನ್ನುವ ಮೂಲಕ ಶಿರಾದಲ್ಲಿ ಪರಾಜಿತ ಕೈ ಅಭ್ಯರ್ಥಿ ಟಿ.ಬಿ.ಜಯಚಂದ್ರರಿಗೆ ಟಾಂಗ್ ನೀಡಿದ್ದಾರೆ.

ಒಂದೇ ಪಕ್ಷದಲ್ಲಿದ್ರು ರಾಜಣ್ಣ ಹಾಗೂ ಜಯಚಂದ್ರ ಕಟ್ಟಾ ರಾಜಕೀಯ ವಿರೋಧಿಗಳು‌. ಮಧುಗಿರಿಯಲ್ಲಿ ರಾಜಣ್ಣ ಸೋಲಿಗೆ ಜಯಚಂದ್ರ ಕೂಡಾ ಕಾರಣ ಎನ್ನಲಾಗಿತ್ತು. ಹೀಗಾಗಿ ಮಧುಗಿರಿಯಲ್ಲಿನ ತಮ್ಮ ಸೋಲಿಗೆ ಶಿರಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ರಾಜಣ್ಣ ಸೇಡು ತೀರಿಸಿಕೊಳ್ತಾರಾ ಎನ್ನುವ ಪ್ರಶ್ನೆ ಈಗ ತುಮಕೂರು ರಾಜಕಾರದಲ್ಲಿ ಭಾರೀ ಕುತೂಹಲ ಕೆರಳಿಸಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ