ಬಹಿರ್ದೆಸೆಗೆ ನದಿ ತೀರಕ್ಕೆ ಹೋದವ ಮೊಸಳೆಗೆ ತುತ್ತಾದ, ಎಲ್ಲಿ?

ಮೈಸೂರು: ಕಪಿಲಾ ನದಿ ದಡದಲ್ಲಿ ಬಹಿರ್ದೆಸೆಗೆಂದು ಹೋಗಿದ್ದ ವ್ಯಕ್ತಿಯನ್ನು ಮೊಸಳೆಯೊಂದು ಎಳೆದುಕೊಂಡು ಹೋಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕೆ ಬೆಳತೂರು ಗ್ರಾಮದ ಹೊರವಲಯದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ಶಂಕರ್ ನಾಯಕ್ (43) ಎಂಬ ವ್ಯಕ್ತಿ ಕಪಿಲ ನದಿ ದಡದಲ್ಲಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಮೊಸಳೆಯೊಂದು ವ್ಯಕ್ತಿಯನ್ನು ಎಳೆದುಕೊಂಡು ಹೋಗಿದೆ ಎಂಬ ಮಾಹಿತಿಯನ್ನು ಪ್ರತ್ಯಕ್ಷದರ್ಶಿಯೊಬ್ಬರು ತಿಳಿದ್ದಾರೆ. ಸ್ಥಳೀಯರಿಂದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಎಚ್ ಡಿ […]

ಬಹಿರ್ದೆಸೆಗೆ ನದಿ ತೀರಕ್ಕೆ ಹೋದವ ಮೊಸಳೆಗೆ ತುತ್ತಾದ, ಎಲ್ಲಿ?

Updated on: Aug 03, 2020 | 5:33 PM

ಮೈಸೂರು: ಕಪಿಲಾ ನದಿ ದಡದಲ್ಲಿ ಬಹಿರ್ದೆಸೆಗೆಂದು ಹೋಗಿದ್ದ ವ್ಯಕ್ತಿಯನ್ನು ಮೊಸಳೆಯೊಂದು ಎಳೆದುಕೊಂಡು ಹೋಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕೆ ಬೆಳತೂರು ಗ್ರಾಮದ ಹೊರವಲಯದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ಶಂಕರ್ ನಾಯಕ್ (43) ಎಂಬ ವ್ಯಕ್ತಿ ಕಪಿಲ ನದಿ ದಡದಲ್ಲಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಮೊಸಳೆಯೊಂದು ವ್ಯಕ್ತಿಯನ್ನು ಎಳೆದುಕೊಂಡು ಹೋಗಿದೆ ಎಂಬ ಮಾಹಿತಿಯನ್ನು ಪ್ರತ್ಯಕ್ಷದರ್ಶಿಯೊಬ್ಬರು ತಿಳಿದ್ದಾರೆ.

ಸ್ಥಳೀಯರಿಂದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಎಚ್ ಡಿ ಕೋಟೆ ಪೊಲೀಸರು ಹಾಗೂ ನುರಿತ ಈಜುಗಾರರಿಂದ ಕಪಿಲಾ ನದಿಯಲ್ಲಿ ಶಂಕರ್ ನಾಯಕನಿಗಾಗಿ ಹುಡುಕಾಟ ಶುರುವಾಗಿದೆ.

Published On - 5:33 pm, Mon, 3 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us