AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿಎಸ್‌ಸಿಯಲ್ಲಿ ವಿಜಯಪತಾಕೆ ಹಾರಿಸಿದ ವಿಜಯಪುರದ ವೀರ ಕುವರಿ

ವಿಜಯಪುರ: ಕೇಂದ್ರ ಲೋಕಸೇವಾ ಆಯೋಗದ 2019ರ ಸಾಲಿನ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಯುವತಿ ದೇಶಕ್ಕೆ 626ನೇ ಱಂಕ್‌ ಬರುವ ಮೂಲಕ ಜಿಲ್ಲೆಯ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಹೌದು ವಿಜಯಪುರದ ಸವಿತಾ ಗೋಟ್ಯಾಳ್ ಈ ಸಾಧನೆ ಮಾಡಿದ ಯುವತಿ. ಸವಿತಾ ಗೋಟ್ಯಾಳರ ಈ ಸಾಧನೆಗೆ ಇಡೀ ಜಿಲ್ಲೆಯ ಜನತೆ ಅಭಿನಂದನೆ ಸಲ್ಲಿಸಿದ್ದಾರೆ. ಸವಿತಾ ಗೋಟ್ಯಾಳ ಅಕ್ಕ ಅಶ್ವಿನಿ ಗೋಟ್ಯಾಳ ಸಹ ಕಳೆದ 2016-17 ರಲ್ಲಿ ಯುಪಿಎಸ್‌ಸಿಯಲ್ಲಿ ಱಂಕ್‌ ಪಡೆದು ಐಪಿಎಸ್ ಆಧಿಕಾರಿಯಾಗಿ ಪಂಜಾಬಿನ ಲುಧಿಯಾನಾದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಬ್ಬರು […]

ಯುಪಿಎಸ್‌ಸಿಯಲ್ಲಿ ವಿಜಯಪತಾಕೆ ಹಾರಿಸಿದ ವಿಜಯಪುರದ ವೀರ ಕುವರಿ
Guru
|

Updated on:Aug 04, 2020 | 4:04 PM

Share

ವಿಜಯಪುರ: ಕೇಂದ್ರ ಲೋಕಸೇವಾ ಆಯೋಗದ 2019ರ ಸಾಲಿನ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಯುವತಿ ದೇಶಕ್ಕೆ 626ನೇ ಱಂಕ್‌ ಬರುವ ಮೂಲಕ ಜಿಲ್ಲೆಯ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಹೌದು ವಿಜಯಪುರದ ಸವಿತಾ ಗೋಟ್ಯಾಳ್ ಈ ಸಾಧನೆ ಮಾಡಿದ ಯುವತಿ. ಸವಿತಾ ಗೋಟ್ಯಾಳರ ಈ ಸಾಧನೆಗೆ ಇಡೀ ಜಿಲ್ಲೆಯ ಜನತೆ ಅಭಿನಂದನೆ ಸಲ್ಲಿಸಿದ್ದಾರೆ. ಸವಿತಾ ಗೋಟ್ಯಾಳ ಅಕ್ಕ ಅಶ್ವಿನಿ ಗೋಟ್ಯಾಳ ಸಹ ಕಳೆದ 2016-17 ರಲ್ಲಿ ಯುಪಿಎಸ್‌ಸಿಯಲ್ಲಿ ಱಂಕ್‌ ಪಡೆದು ಐಪಿಎಸ್ ಆಧಿಕಾರಿಯಾಗಿ ಪಂಜಾಬಿನ ಲುಧಿಯಾನಾದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇಬ್ಬರು ಹೆಣ್ಣು ಮಕ್ಕಳ ಈ ಸಾಧನೆಗೆ ಗೋಟ್ಯಾಳ ಕುಟುಂಬದಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ಸವಿತಾ ಹಾಗೂ ಅಶ್ವಿನಿ ತಂದೆ ಸಿದ್ದಪ್ಪ ಗೋಟ್ಯಾಳ ಬಿಎಸ್ಎನ್ಎಲ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೊದಲ ಮಗಳು ಅಶ್ವಿನಿ ಗೋಟ್ಯಾಳ ಐಪಿಎಸ್ ಅಧಿಕಾರಿಯಾದ ಬಳಿಕ ಸ್ವಯಂ ನಿವೃತ್ತಿ ಪಡೆದಿದ್ದಾರೆ.

ಒಂದೇ ಮನೆಯಲ್ಲಿ ಇಬ್ಬರು ಯುಪಿಎಸ್‌ಸಿ ಱಂಕ್‌ ಬಂದಿದ್ದು ಸಾಧನೆ ಮಾಡಿದ ಸವಿತಾಗೆ ಕುಟುಂಬ ಸದಸ್ಯರು ಸಿಹಿ ತಿನ್ನಿಸಿ ಸಂಭ್ರಮಿಸಿದರು. ಉತ್ತಮವಾಗಿ ಓದು ಹಾಗೂ ಡಿಜಿಟಲ್ ಸಿಲೆಬಸ್ ಜೊತೆಗೆ ಅಕ್ಕನ ಗೈಡನ್ಸ್‌ ಸಹಾಯವಾಯಿತು ಎಂದು ಸವಿತಾ ಸಂತಸ ಹಂಚಿಕೊಂಡಿದ್ದಾರೆ.

ಇನ್ನು ತಂಗಿಯ ಸಾಧನೆಗೆ ಅಕ್ಕ ಅಶ್ವಿನಿ ಸಹ ಸಂತಸ ವ್ಯಕ್ತಪಡಿಸಿದ್ದಾರೆ. ಇದಕ್ಕಿಂತ ಮುಖ್ಯವಾಗಿ ನಮ್ಮ ಮನೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ಯುಪಿಎಸ್‌ಸಿಯಲ್ಲಿ ಱಂಕ್‌ ಪಡೆದಿದ್ದೇವೆ. ನಮ್ಮನ್ನು ನೋಡಿ ಇತರೆ ಜನರು ತಮ್ಮ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ತೀರ್ಮಾಣ ಮಾಡಿದರೆ ಸಾರ್ಥಕವೆನಿಸುತ್ತದೆ ಎನ್ನುತ್ತಾರೆ ಅಶ್ವಿನಿ.-ಅಶೋಕ ಯಡಳ್ಳಿ

Published On - 4:01 pm, Tue, 4 August 20

ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ