AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿಎಸ್‌ಸಿಯಲ್ಲಿ ವಿಜಯಪತಾಕೆ ಹಾರಿಸಿದ ವಿಜಯಪುರದ ವೀರ ಕುವರಿ

ವಿಜಯಪುರ: ಕೇಂದ್ರ ಲೋಕಸೇವಾ ಆಯೋಗದ 2019ರ ಸಾಲಿನ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಯುವತಿ ದೇಶಕ್ಕೆ 626ನೇ ಱಂಕ್‌ ಬರುವ ಮೂಲಕ ಜಿಲ್ಲೆಯ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಹೌದು ವಿಜಯಪುರದ ಸವಿತಾ ಗೋಟ್ಯಾಳ್ ಈ ಸಾಧನೆ ಮಾಡಿದ ಯುವತಿ. ಸವಿತಾ ಗೋಟ್ಯಾಳರ ಈ ಸಾಧನೆಗೆ ಇಡೀ ಜಿಲ್ಲೆಯ ಜನತೆ ಅಭಿನಂದನೆ ಸಲ್ಲಿಸಿದ್ದಾರೆ. ಸವಿತಾ ಗೋಟ್ಯಾಳ ಅಕ್ಕ ಅಶ್ವಿನಿ ಗೋಟ್ಯಾಳ ಸಹ ಕಳೆದ 2016-17 ರಲ್ಲಿ ಯುಪಿಎಸ್‌ಸಿಯಲ್ಲಿ ಱಂಕ್‌ ಪಡೆದು ಐಪಿಎಸ್ ಆಧಿಕಾರಿಯಾಗಿ ಪಂಜಾಬಿನ ಲುಧಿಯಾನಾದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಬ್ಬರು […]

ಯುಪಿಎಸ್‌ಸಿಯಲ್ಲಿ ವಿಜಯಪತಾಕೆ ಹಾರಿಸಿದ ವಿಜಯಪುರದ ವೀರ ಕುವರಿ
Guru
|

Updated on:Aug 04, 2020 | 4:04 PM

Share

ವಿಜಯಪುರ: ಕೇಂದ್ರ ಲೋಕಸೇವಾ ಆಯೋಗದ 2019ರ ಸಾಲಿನ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಯುವತಿ ದೇಶಕ್ಕೆ 626ನೇ ಱಂಕ್‌ ಬರುವ ಮೂಲಕ ಜಿಲ್ಲೆಯ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಹೌದು ವಿಜಯಪುರದ ಸವಿತಾ ಗೋಟ್ಯಾಳ್ ಈ ಸಾಧನೆ ಮಾಡಿದ ಯುವತಿ. ಸವಿತಾ ಗೋಟ್ಯಾಳರ ಈ ಸಾಧನೆಗೆ ಇಡೀ ಜಿಲ್ಲೆಯ ಜನತೆ ಅಭಿನಂದನೆ ಸಲ್ಲಿಸಿದ್ದಾರೆ. ಸವಿತಾ ಗೋಟ್ಯಾಳ ಅಕ್ಕ ಅಶ್ವಿನಿ ಗೋಟ್ಯಾಳ ಸಹ ಕಳೆದ 2016-17 ರಲ್ಲಿ ಯುಪಿಎಸ್‌ಸಿಯಲ್ಲಿ ಱಂಕ್‌ ಪಡೆದು ಐಪಿಎಸ್ ಆಧಿಕಾರಿಯಾಗಿ ಪಂಜಾಬಿನ ಲುಧಿಯಾನಾದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇಬ್ಬರು ಹೆಣ್ಣು ಮಕ್ಕಳ ಈ ಸಾಧನೆಗೆ ಗೋಟ್ಯಾಳ ಕುಟುಂಬದಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ಸವಿತಾ ಹಾಗೂ ಅಶ್ವಿನಿ ತಂದೆ ಸಿದ್ದಪ್ಪ ಗೋಟ್ಯಾಳ ಬಿಎಸ್ಎನ್ಎಲ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೊದಲ ಮಗಳು ಅಶ್ವಿನಿ ಗೋಟ್ಯಾಳ ಐಪಿಎಸ್ ಅಧಿಕಾರಿಯಾದ ಬಳಿಕ ಸ್ವಯಂ ನಿವೃತ್ತಿ ಪಡೆದಿದ್ದಾರೆ.

ಒಂದೇ ಮನೆಯಲ್ಲಿ ಇಬ್ಬರು ಯುಪಿಎಸ್‌ಸಿ ಱಂಕ್‌ ಬಂದಿದ್ದು ಸಾಧನೆ ಮಾಡಿದ ಸವಿತಾಗೆ ಕುಟುಂಬ ಸದಸ್ಯರು ಸಿಹಿ ತಿನ್ನಿಸಿ ಸಂಭ್ರಮಿಸಿದರು. ಉತ್ತಮವಾಗಿ ಓದು ಹಾಗೂ ಡಿಜಿಟಲ್ ಸಿಲೆಬಸ್ ಜೊತೆಗೆ ಅಕ್ಕನ ಗೈಡನ್ಸ್‌ ಸಹಾಯವಾಯಿತು ಎಂದು ಸವಿತಾ ಸಂತಸ ಹಂಚಿಕೊಂಡಿದ್ದಾರೆ.

ಇನ್ನು ತಂಗಿಯ ಸಾಧನೆಗೆ ಅಕ್ಕ ಅಶ್ವಿನಿ ಸಹ ಸಂತಸ ವ್ಯಕ್ತಪಡಿಸಿದ್ದಾರೆ. ಇದಕ್ಕಿಂತ ಮುಖ್ಯವಾಗಿ ನಮ್ಮ ಮನೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ಯುಪಿಎಸ್‌ಸಿಯಲ್ಲಿ ಱಂಕ್‌ ಪಡೆದಿದ್ದೇವೆ. ನಮ್ಮನ್ನು ನೋಡಿ ಇತರೆ ಜನರು ತಮ್ಮ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ತೀರ್ಮಾಣ ಮಾಡಿದರೆ ಸಾರ್ಥಕವೆನಿಸುತ್ತದೆ ಎನ್ನುತ್ತಾರೆ ಅಶ್ವಿನಿ.-ಅಶೋಕ ಯಡಳ್ಳಿ

Published On - 4:01 pm, Tue, 4 August 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?