AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿನಾಯಿಲ್ ಮಾರುವ ಯುವತಿ, ಮನೆ ದರೋಡೆಗೆ ಮುನ್ನ ಮಾಡಿದ ಹೇಯ ಕೃತ್ಯವೇನು?

ವಿಜಯಪುರ: ಮನೆಮನೆಗೆ ಫಿನಾಯಿಲ್ ಮಾರಾಟ ಮಾಡಲು ಬಂದ ಯುವತಿ ಮನೆಯ ಸದಸ್ಯರಿಗೆಲ್ಲ ಮಂಪರು ಬರಿಸುವ ಔಷಧ ಸಿಂಪಡಣೆ ಮಾಡಿ ಪ್ರಜ್ಞೆ ತಪ್ಪಿಸಿ ಮನೆಯಲ್ಲಿ ಕಳ್ಳತನ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಶಾಂತಿನಗರದ ಜಿಲ್ಲಾ ಮಕ್ಕಳ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ ಸುನಂದಾ ತೋಳಬಂದಿ ಅವರ ಮನೆಯಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 2.20 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆಯಾಗಿದೆ ಎಂದು ತಿಳಿದುಬಂದಿದೆ. ನಿನ್ನೆ ಮಧ್ಯಾಹ್ನ ಮನೆ ಮನೆಗೆ ಫಿನಾಯಿಲ್ ಮಾರಾಟ ಮಾಡಲು ಬಂದಿದ್ದ ಯುವತಿ […]

ಫಿನಾಯಿಲ್ ಮಾರುವ ಯುವತಿ, ಮನೆ ದರೋಡೆಗೆ ಮುನ್ನ ಮಾಡಿದ ಹೇಯ ಕೃತ್ಯವೇನು?
ಸಾಧು ಶ್ರೀನಾಥ್​
|

Updated on:Dec 23, 2020 | 9:54 AM

Share

ವಿಜಯಪುರ: ಮನೆಮನೆಗೆ ಫಿನಾಯಿಲ್ ಮಾರಾಟ ಮಾಡಲು ಬಂದ ಯುವತಿ ಮನೆಯ ಸದಸ್ಯರಿಗೆಲ್ಲ ಮಂಪರು ಬರಿಸುವ ಔಷಧ ಸಿಂಪಡಣೆ ಮಾಡಿ ಪ್ರಜ್ಞೆ ತಪ್ಪಿಸಿ ಮನೆಯಲ್ಲಿ ಕಳ್ಳತನ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಶಾಂತಿನಗರದ ಜಿಲ್ಲಾ ಮಕ್ಕಳ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ ಸುನಂದಾ ತೋಳಬಂದಿ ಅವರ ಮನೆಯಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 2.20 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆಯಾಗಿದೆ ಎಂದು ತಿಳಿದುಬಂದಿದೆ.

ನಿನ್ನೆ ಮಧ್ಯಾಹ್ನ ಮನೆ ಮನೆಗೆ ಫಿನಾಯಿಲ್ ಮಾರಾಟ ಮಾಡಲು ಬಂದಿದ್ದ ಯುವತಿ ಮೊದಲು ಕೇಶವ ತೋಳಬಂದಿಗೆ ಫೆನಾಯಿಲ್ ವಾಸನೆ ತೋರಿಸುವ ನೆಪದಲ್ಲಿ ಪ್ರಜ್ಞೆ ತಪ್ಪಿಸಿದ್ದಾಳೆ. ನಂತರ ಸುನಂದ ತೋಳಬಂದಿ ಹಾಗೂ ಅವರ ಪತಿ ವಾಸುದೇವ ತೋಳಬಂದಿಗೂ ಮಂಪರು ಬರಿಸುವ ಸ್ಪ್ರೇ ಸಿಂಪಡಣೆ ಮಾಡಿ ಅವರ ಮನೆಯಲ್ಲಿದ್ದ 40 ಗ್ರಾಂ ಚಿನ್ನಾಭರಣ, 220 ಗ್ರಾಂ ಬೆಳ್ಳಿಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ನಾಯಿಗೆ ಆಹಾರದಲ್ಲಿ ವಿಷವುಣಿಸಿ ಕೊಂದಿದ್ದಾಳೆ ಈ ದರೋಡೆಗೆ ಮೊದಲೇ ತಯಾರಿ ನಡೆಸಿದ್ದ ಯುವತಿ ಕೃತ್ಯಕ್ಕೂ ಮೊದಲು ಮನೆಯ ಆವರಣದಲ್ಲಿದ್ದ ನಾಯಿಗೆ ಆಹಾರದಲ್ಲಿ ವಿಷವುಣಿಸಿ ಕೊಂದಿದ್ದಾಳೆ ಎನ್ನಲಾಗಿದೆ. ಸದ್ಯ ವಿಜಯಪುರ ನಗರದ ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Published On - 1:57 pm, Mon, 3 August 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ