AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಇದೇಂಥಾ ಅವಘಡ?

ತಿರುಪತಿ: ಮೊದಲೇ ಕೊರೊನಾದಿಂದ ತತ್ತರಿಸಿದ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಭಾರೀ ಅವಘಡವಾಗೋದು ಸ್ವಲ್ಪದರಲ್ಲೇ ತಪ್ಪಿದೆ. ಹೌದು ಪ್ರಖ್ಯಾತ ತಿರುಪತಿ ತಿಮ್ಮಪ್ಪನ ಸನ್ನಿಧಿ ತಿರುಪತಿಯ ತಿರುಪತಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಅವಘಢವೊಂದು ಸ್ವಲ್ಪದರಲ್ಲೇ ತಪ್ಪಿದೆ. ತಿರುಪತಿಯಲ್ಲಿರುವ ತಿರುಪತಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಅವಘಢವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೆಲವೇ ಕ್ಷಣಗಳಲ್ಲಿ ಹೈದರಾಬಾದ್‌ನಿಂದ ಆಗಮಿಸುತ್ತಿದ್ದ ವಿಮಾನ ತಿರುಪತಿಯಲ್ಲಿ ಲ್ಯಾಂಡ್‌ ಆಗಬೇಕಿತ್ತು. ಹೀಗಾಗಿ ಮಾಮೂಲಿನಂತೆ ರನ್‌ವೇಗಳಲ್ಲಿ ವಿಮಾನ ಲ್ಯಾಂಡ್‌ ಆದ ತಕ್ಷಣವೇ ನೀರು ಸಿಂಪಡಿಸುವ ಅಗ್ನಿಶಾಮಕ ವಾಹನ ರನ್‌ವೇನಲ್ಲಿ ತನ್ನ […]

ಅಯ್ಯೋ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಇದೇಂಥಾ ಅವಘಡ?
Guru
|

Updated on: Jul 19, 2020 | 6:49 PM

Share

ತಿರುಪತಿ: ಮೊದಲೇ ಕೊರೊನಾದಿಂದ ತತ್ತರಿಸಿದ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಭಾರೀ ಅವಘಡವಾಗೋದು ಸ್ವಲ್ಪದರಲ್ಲೇ ತಪ್ಪಿದೆ. ಹೌದು ಪ್ರಖ್ಯಾತ ತಿರುಪತಿ ತಿಮ್ಮಪ್ಪನ ಸನ್ನಿಧಿ ತಿರುಪತಿಯ ತಿರುಪತಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಅವಘಢವೊಂದು ಸ್ವಲ್ಪದರಲ್ಲೇ ತಪ್ಪಿದೆ.

ತಿರುಪತಿಯಲ್ಲಿರುವ ತಿರುಪತಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಅವಘಢವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೆಲವೇ ಕ್ಷಣಗಳಲ್ಲಿ ಹೈದರಾಬಾದ್‌ನಿಂದ ಆಗಮಿಸುತ್ತಿದ್ದ ವಿಮಾನ ತಿರುಪತಿಯಲ್ಲಿ ಲ್ಯಾಂಡ್‌ ಆಗಬೇಕಿತ್ತು. ಹೀಗಾಗಿ ಮಾಮೂಲಿನಂತೆ ರನ್‌ವೇಗಳಲ್ಲಿ ವಿಮಾನ ಲ್ಯಾಂಡ್‌ ಆದ ತಕ್ಷಣವೇ ನೀರು ಸಿಂಪಡಿಸುವ ಅಗ್ನಿಶಾಮಕ ವಾಹನ ರನ್‌ವೇನಲ್ಲಿ ತನ್ನ ನಿಗದಿತ ಸ್ಥಳಕ್ಕೆ ಹೋಗುತ್ತಿತ್ತು. ಆದ್ರೆ ಅದೇನಾಯಿತೋ ಏನೋ ಅಗ್ನಿಶಾಮಕ ವಾಹನ ಅಚಾನಕ್‌ ಆಗಿ ಪಲ್ಟಿಯಾಗಿ ರನ್‌ವೇನಲ್ಲಿ ಬಿದ್ದಿದೆ.

ಇದರಿಂದ ಗಾಬರಿಯಾದರೂ, ತಕ್ಷಣವೇ ಕಾರ್ಯಪ್ರವೃತ್ತರಾದ ಏರ್‌ಪೋರ್ಟ್‌ ಸಿಬ್ಬಂದಿ ಲ್ಯಾಂಡ್‌ ಆಗಬೇಕಿದ್ದ ವಿಮಾನವನ್ನು ತಡೆ ಹಿಡಿದಿದ್ದಾರೆ. ನಂತರ ಸಮಯದ ಚೌಕಾಸಿ ಮಾಡಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡೈವರ್ಟ್‌ ಮಾಡಿದ್ದಾರೆ. ಇದಾದ ನಂತರ ಅಫಘಾತಕ್ಕೀಡಾದ ಅಗ್ಮಿಶಾಮಕ ವಾಹನವನ್ನ ಅಲ್ಲಿಂದ ತೆರವು ಮಾಡಬೇಕಾದರೆ ಬರೋಬ್ಬರಿ ಎರಡುವರೆ ಗಂಟೆ ಹಿಡಿದಿದೆ. ಅದೃಷ್ಟವಶಾತ್‌ ಯಾವುದೇ ಜೀವಹಾನಿಯಾಗಿಲ್ಲ. ವಿಷಯ ತಿಳಿದ ವಿಮಾನ ಪ್ರಯಾಣಿಕರು ತಮ್ಮನ್ನು ಆ ತಿರುಪತಿ ತಿಮ್ಮಪ್ಪನೇ ಕಾಪಾಡಿದ ಅಂತಾ ಕುಳಿತಲ್ಲೇ ಕೈಮುಗಿದಿದ್ದಾರೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ