AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಕೊಲೆಮಾಡಿ.. ಶವದ ಪಕ್ಕದಲ್ಲೇ ಕೂತ ಆರೋಪಿ

ಹಾಸನ: ಕುಡಿದ ಅಮಲಿನಲ್ಲಿ ಬೈಕ್ ತೊಳೆಯುತ್ತಿದ್ದ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದಿರುವ ಘಟನೆ ಹಾಸನ ಹೊರವಲಯದ ನಿಂಗೆಗೌಡನಕೊಪ್ಪಲು ಬಳಿ ನಡೆದಿದೆ. ಹಾಲುವಾಗಿಲು ಗ್ರಾಮದ ನಿವಾಸಿ ಕುಮಾರ್ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಅದೇ ಗ್ರಾಮದ ಗೋವಿಂದ ಗೌಡ ಎಂಬಾತನು ಕುಮಾರ್​ನ ಕೊಲೆಗೈದಿದ್ದಾನೆ ಎಂದು ಹೇಳಲಾಗಿದೆ. ಹಬ್ಬದ ಪ್ರಯುಕ್ತ ಪೂಜೆಗೆಂದು ಬೈಕ್ ತೊಳೆಯಲು ಕೋಡಿ ಒಡೆದು ಹರಿಯುತ್ತಿದ್ದ ಕೆರೆಯ ಬಳಿ ಬಂದಿದ್ದ ಕುಮಾರ್​ನನ್ನು ಕಂಠಪೂರ್ತಿ ಕುಡಿದಿದ್ದ ಗೋವಿಂದ ಗೌಡ ಹಿಂಬದಿಯಿಂದ ಬಂದು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ವಿಷಯ ತಿಳಿದ […]

ಕುಡಿದ ಮತ್ತಿನಲ್ಲಿ ಕೊಲೆಮಾಡಿ.. ಶವದ ಪಕ್ಕದಲ್ಲೇ ಕೂತ ಆರೋಪಿ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
| Edited By: |

Updated on: Aug 22, 2020 | 1:55 PM

Share

ಹಾಸನ: ಕುಡಿದ ಅಮಲಿನಲ್ಲಿ ಬೈಕ್ ತೊಳೆಯುತ್ತಿದ್ದ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದಿರುವ ಘಟನೆ ಹಾಸನ ಹೊರವಲಯದ ನಿಂಗೆಗೌಡನಕೊಪ್ಪಲು ಬಳಿ ನಡೆದಿದೆ. ಹಾಲುವಾಗಿಲು ಗ್ರಾಮದ ನಿವಾಸಿ ಕುಮಾರ್ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಅದೇ ಗ್ರಾಮದ ಗೋವಿಂದ ಗೌಡ ಎಂಬಾತನು ಕುಮಾರ್​ನ ಕೊಲೆಗೈದಿದ್ದಾನೆ ಎಂದು ಹೇಳಲಾಗಿದೆ. ಹಬ್ಬದ ಪ್ರಯುಕ್ತ ಪೂಜೆಗೆಂದು ಬೈಕ್ ತೊಳೆಯಲು ಕೋಡಿ ಒಡೆದು ಹರಿಯುತ್ತಿದ್ದ ಕೆರೆಯ ಬಳಿ ಬಂದಿದ್ದ ಕುಮಾರ್​ನನ್ನು ಕಂಠಪೂರ್ತಿ ಕುಡಿದಿದ್ದ ಗೋವಿಂದ ಗೌಡ ಹಿಂಬದಿಯಿಂದ ಬಂದು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಹಾಸನ ಗ್ರಾಮಾಂತರ ಠಾಣೆಯ ಪೊಲೀಸರು, ಕೊಲೆ ಮಾಡಿ ಶವದ ಪಕ್ಕದಲ್ಲೇ ಕೂತಿದ್ದ ಆರೋಪಿ ಗೋವಿಂದ ಗೌಡನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ ಪೊಲೀಸರು, ಕೃತ್ಯಕ್ಕೆ ಅಸಲಿ ಕಾರಣ ಏನೆಂಬುದನ್ನು ಪತ್ತೆಹಚ್ಚುವಲ್ಲಿ ನಿರತರಾಗಿದ್ದಾರೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?