ಕೊರೊನಾ ಸೋಂಕಿಗೆ ಸ್ವಾಮೀಜಿ ಬಲಿ, ಶಾಕ್‌ನಲ್ಲಿ ಭಕ್ತ ಗಣ

ಬಳ್ಳಾರಿ: ಕೊರೊನಾ ಸೋಂಕಿನಿಂದಾಗಿ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದ 44 ವರ್ಷದ ಸ್ವಾಮೀಜಿಯೊಬ್ಬರು ನಿಧನರಾದ ಘಟನೆ ಬಳ್ಳಾರಿಯಲ್ಲಿ ಸಂಭವಿಸಿದೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದ ಸಂಸ್ಥಾನ ಹಿರೇಮಠದ 44 ವರ್ಷದ ಮರಿಸಿದ್ದಲಿಂಗ ಮಹಾಸ್ವಾಮಿ ಕೊರೊನಾ ಸೋಂಕಿನಿಂದಾಗಿ ಬಳ್ಳಾರಿಯ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ. ರಾಯಚೂರು, ಬಳ್ಳಾರಿ ಸೇರಿದಂತೆ ನೆರೆಯ ಆಂಧ್ರಪ್ರದೇಶದಲ್ಲಿ ಸ್ವಾಮೀಜಿ ಸಾವಿರಾರು ಭಕ್ತರನ್ನು ಹೊಂದಿದ್ದರು. ಸ್ವಾಮೀಜಿಯ ಸಾವಿನಿಂದ ರೌಡಕುಂದಾ ಗ್ರಾಮದ ಸಂಸ್ಥಾನ ಹಿರೇಮಠದಲ್ಲಿ ನೀರವ ಮೌನ ಆವರಿಸಿದೆ.

ಕೊರೊನಾ ಸೋಂಕಿಗೆ ಸ್ವಾಮೀಜಿ ಬಲಿ, ಶಾಕ್‌ನಲ್ಲಿ ಭಕ್ತ ಗಣ
Edited By:

Updated on: Jul 25, 2020 | 8:25 PM

ಬಳ್ಳಾರಿ: ಕೊರೊನಾ ಸೋಂಕಿನಿಂದಾಗಿ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದ 44 ವರ್ಷದ ಸ್ವಾಮೀಜಿಯೊಬ್ಬರು ನಿಧನರಾದ ಘಟನೆ ಬಳ್ಳಾರಿಯಲ್ಲಿ ಸಂಭವಿಸಿದೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದ ಸಂಸ್ಥಾನ ಹಿರೇಮಠದ 44 ವರ್ಷದ ಮರಿಸಿದ್ದಲಿಂಗ ಮಹಾಸ್ವಾಮಿ ಕೊರೊನಾ ಸೋಂಕಿನಿಂದಾಗಿ ಬಳ್ಳಾರಿಯ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ.

ರಾಯಚೂರು, ಬಳ್ಳಾರಿ ಸೇರಿದಂತೆ ನೆರೆಯ ಆಂಧ್ರಪ್ರದೇಶದಲ್ಲಿ ಸ್ವಾಮೀಜಿ ಸಾವಿರಾರು ಭಕ್ತರನ್ನು ಹೊಂದಿದ್ದರು. ಸ್ವಾಮೀಜಿಯ ಸಾವಿನಿಂದ ರೌಡಕುಂದಾ ಗ್ರಾಮದ ಸಂಸ್ಥಾನ ಹಿರೇಮಠದಲ್ಲಿ ನೀರವ ಮೌನ ಆವರಿಸಿದೆ.

Published On - 3:16 pm, Fri, 24 July 20

Follow Us