ಕೊರೊನಾ ಎಫೆಕ್ಟ್: ಅರಕಲಗೂಡು ಶಾಸಕ AT ರಾಮಸ್ವಾಮಿ ಏಕಾಂಗಿ ಪ್ರತಿಭಟನೆ

ಹಾಸನ:ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ರಾಜ್ಯದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ, ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಅವರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ಕೊರೊನಾ ಹಿನ್ನೆಲೆ ಏಕಾಂಗಿ ಪ್ರತಿಭಟನೆ  ಬಡವರ ವಿರೋಧಿ ಕಾನೂನುಗಳಿಗೆ ಧಿಕ್ಕಾರ ಎಂಬ ನಾಮಫಲಕವನ್ನು ಕೈಯಲ್ಲಿ ಹಿಡಿದು ತಾಲೂಕು ಕಚೇರಿ ಎದುರು ಕುಳಿತಿರುವ ಶಾಸಕ ರಾಮಸ್ವಾಮಿ, ಕೊರೊನಾ ಹಿನ್ನೆಲೆ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. ದೇವರಾಜ ಅರಸು ಜನಪರ ಭೂ […]

ಕೊರೊನಾ ಎಫೆಕ್ಟ್: ಅರಕಲಗೂಡು ಶಾಸಕ AT ರಾಮಸ್ವಾಮಿ ಏಕಾಂಗಿ ಪ್ರತಿಭಟನೆ

Updated on: Sep 28, 2020 | 11:48 AM

ಹಾಸನ:ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ರಾಜ್ಯದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ, ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಅವರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.

ಕೊರೊನಾ ಹಿನ್ನೆಲೆ ಏಕಾಂಗಿ ಪ್ರತಿಭಟನೆ 
ಬಡವರ ವಿರೋಧಿ ಕಾನೂನುಗಳಿಗೆ ಧಿಕ್ಕಾರ ಎಂಬ ನಾಮಫಲಕವನ್ನು ಕೈಯಲ್ಲಿ ಹಿಡಿದು ತಾಲೂಕು ಕಚೇರಿ ಎದುರು ಕುಳಿತಿರುವ ಶಾಸಕ ರಾಮಸ್ವಾಮಿ, ಕೊರೊನಾ ಹಿನ್ನೆಲೆ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

ದೇವರಾಜ ಅರಸು ಜನಪರ ಭೂ ಸುಧಾರಣೆ ಕಾಯ್ದೆ ತಂದಿದ್ದರು. ಆದರೆ ಈ ಸರ್ಕಾರ ಅವರ ಆಶಯ ಬುಡಮೇಲು ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎ.ಟಿ. ರಾಮಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:46 am, Mon, 28 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us