AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ಞೆ ತಪ್ಪಿಸಿ ಲೈಂಗಿಕ ಕಿರುಕುಳ ಆರೋಪ; ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಮಹಿಳೆ

ಜಿಸಸ್ ರಕ್ತ ಕುಡಿದರೆ ಒಳ್ಳೆಯದಾಗುತ್ತದೆ ಎಂದು ನಂಬಿಸಿ ಮಹಿಳೆಗೆ ಪ್ರಜ್ಞೆ ತಪ್ಪಿಸಿದ್ದಾರಂತೆ. ನಂತರ ಆರೋಪಿ ಖಾಸಗಿ ಅಂಗಗಳನ್ನ ಮುಟ್ಟಿ ಮೊಬೈಲ್​ನಲ್ಲಿ ವಿಡಿಯೋ ಮಾಡಿ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಅಂತ ಮಹಿಳೆ ಆರೋಪಿಸಿದ್ದಾರೆ.

ಪ್ರಜ್ಞೆ ತಪ್ಪಿಸಿ ಲೈಂಗಿಕ ಕಿರುಕುಳ ಆರೋಪ; ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಮಹಿಳೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 27, 2021 | 3:28 PM

Share

ಬೆಂಗಳೂರು: ಮಹಿಳೆಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಲೈಂಗಿಕ ಕಿರುಕುಳ ನೀಡಿದ ವಿಷಯ ಬೇರೆಯವರಿಗೆ ತಿಳಿಸಿದರೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸುತ್ತಿರುವ ಮಹಿಳೆ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ಮಹಿಳೆ ಪಾದ್ರಿ ಅಲ್ಬರ್ಟ್ ವಿರುದ್ಧ ಆರೋಪ ಮಾಡುತ್ತಿದ್ದಾರೆ. 2 ವರ್ಷದಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಅಂತ ವಕೀಲರೊಬ್ಬರ ಸಹಾಯದಿಂದ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಜಿಸಸ್ ರಕ್ತ ಕುಡಿದರೆ ಒಳ್ಳೆಯದಾಗುತ್ತದೆ ಎಂದು ನಂಬಿಸಿ ಮಹಿಳೆಗೆ ಪ್ರಜ್ಞೆ ತಪ್ಪಿಸಿದ್ದಾರಂತೆ. ನಂತರ ಆರೋಪಿ ಖಾಸಗಿ ಅಂಗಗಳನ್ನ ಮುಟ್ಟಿ ಮೊಬೈಲ್​ನಲ್ಲಿ ವಿಡಿಯೋ ಮಾಡಿ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಅಂತ ಮಹಿಳೆ ಆರೋಪಿಸಿದ್ದಾರೆ. ಸದ್ಯ ಈ ಪ್ರಕರಣ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಾದ್ರಿ ಅಲ್ಬರ್ಟ್​ಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ನಾಗ ದೇವರ ಮೂರ್ತಿಗಳ ಧ್ವಂಸ ಪ್ರಕರಣ ಭೇದಿಸಿದ ಪೊಲೀಸರು ನಾಗ ದೇವರ ಮೂರ್ತಿಗಳ ಧ್ವಂಸ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮಂಗಳೂರಿನ ಉರ್ವಾದ ಕೋಡಿಕಲ್, ಕಾವೂರು, ಪಣಂಬೂರು ಎಂಬಲ್ಲಿ ನಾಗ ದೇವರ ಮೂರ್ತಿಗಳನ್ನು ಭಗ್ನಗೊಳಿಸಿದ್ದರು. ಸರಣಿ ನಾಗದೇವರ ಮೂರ್ತಿಗಳ ಧ್ವಂಸ ಪ್ರಕರಣಗಳು ಮಂಗಳೂರು ಪೊಲೀಸರಿಗೆ ಸವಾಲಾಗಿತ್ತು. ಆದರೆ ಮಹತ್ವದ ಕಾರ್ಯಾಚರಣೆಯಲ್ಲಿ 8 ಮಂದಿ ಆರೋಪಿಗಳನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಕಾವೂರು ನಿವಾಸಿ ಸಫ್ವಾನ್, ಮೊಹಮ್ಮದ್ ಸುಹೈಲ್, ಪ್ರವೀಣ್ ಅನಿಲ್ ಮೊಂತೆರೊ, ನಿಖಿಲೇಶ್, ಸುರತ್ಕಲ್​ನ ಜಯಂತ್ ಕುಮಾರ್, ಬಂಟ್ವಾಳದ ಪ್ರತೀಕ್, ಕೂಳೂರಿನ ಮಂಜುನಾಥ್, ಹಾಸನ ನಿವಾಸಿ ನೌಷಾದ್ ಬಂಧಿತ ಆರೋಪಿಗಳು.

ಇದನ್ನೂ ಓದಿ

ಬಿಜೆಪಿಗೆ ಬೆಂಬಲ ನೀಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ: ಹೆಚ್​ಡಿ ಕುಮಾರಸ್ವಾಮಿ ಸ್ಪಷ್ಟನೆ

ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಬೀಜಿಂಗ್​ ಏರ್​ಪೋರ್ಟ್​ ಫೋಟೋ ಹಂಚಿಕೊಂಡ ಬಿಜೆಪಿ ನಾಯಕರು !; ಚೀನಾ ತಗಾದೆ

Follow Us
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್