AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ ಡೇ ಮರುದಿನವೇ ಸೋಷಿಯಲ್ ಮೀಡಿಯಾಗಳಿಗೆ ಗುಡ್​ ಬೈ ಹೇಳಿದ ಆಮೀರ್ ಖಾನ್​; ನೆಪ ಹೇಳುವುದನ್ನು ಬಿಡಲು ನಿರ್ಧರಿಸಿದ್ದಾರಂತೆ ಮಿ.ಪರ್ಫೆಕ್ಷನಿಸ್ಟ್‌ ​

ಕಳೆದ ವರ್ಷ ಫೆಬ್ರವರಿಯಲ್ಲಿ ಆಮೀರ್​ ಖಾನ್​ ಇಂಥದ್ದೇ ಒಂದು ನಿರ್ಧಾರ ಮಾಡಿದ್ದರು. ತಮ್ಮ ಮುಂದಿನ ಚಿತ್ರ ಲಾಲ್​ ಸಿಂಗ್​ ಚಡ್ಡಾ ಬಿಡುಗಡೆಯಾಗುವವರೆಗೂ ನನ್ನ ಮೊಬೈಲ್​ ಸ್ವಿಚ್​ ಆನ್​​ ಮಾಡೋದಿಲ್ಲ ಎಂದು ಹೇಳಿದ್ದರು.

ಬರ್ತ್​ ಡೇ ಮರುದಿನವೇ ಸೋಷಿಯಲ್ ಮೀಡಿಯಾಗಳಿಗೆ ಗುಡ್​ ಬೈ ಹೇಳಿದ ಆಮೀರ್ ಖಾನ್​; ನೆಪ ಹೇಳುವುದನ್ನು ಬಿಡಲು ನಿರ್ಧರಿಸಿದ್ದಾರಂತೆ ಮಿ.ಪರ್ಫೆಕ್ಷನಿಸ್ಟ್‌ ​
ಆಮೀರ್​ ಖಾನ್​
Lakshmi Hegde
|

Updated on:Mar 15, 2021 | 8:03 PM

Share

ನಿನ್ನೆ ಭಾನುವಾರ (ಮಾರ್ಚ್​ 14)ವಷ್ಟೇ 56ನೇ ಜನ್ಮದಿನ ಆಚರಿಸಿಕೊಂಡಿದ್ದ ಬಾಲಿವುಡ್ ನಟ ಆಮೀರ್ ಖಾನ್ (Aamir Khan)​ ಇಂದು ಏಕಾಏಕಿ ತಮ್ಮ ಅಭಿಮಾನಿಗಳಿಗೆ ಅಚ್ಚರಿ ಉಂಟುಮಾಡಿಸಿದ್ದಾರೆ. ನಾನಿನ್ನು ವೈಯಕ್ತಿಕವಾಗಿ ಯಾವುದೇ ಸಾಮಾಜಿಕ ಜಾಲತಾಣಗಳನ್ನೂ ಉಪಯೋಗಿಸುವುದಿಲ್ಲ. ನಿನ್ನೆ ನನ್ನ ಜನ್ಮದಿನಕ್ಕೆ ಪ್ರೀತಿಯಿಂದ ಹಾರೈಸಿದ ಎಲ್ಲರಿಗೂ ಕೃತಜ್ಞತೆಗಳು. ನಿಮ್ಮ ಹಾರೈಕೆ, ಪ್ರೀತಿ-ವಿಶ್ವಾಸ ನೋಡಿ ನನ್ನ ಹೃದಯ ತುಂಬಿಬಂತು. ಇದೇ ನನ್ನ ಕೊನೆಯ ಪೋಸ್ಟ್ ಎಂದು ಹೇಳಿದ್ದಾರೆ.

ಮಿ.ಪರ್ಫೆಕ್ಷನಿಸ್ಟ್‌ ಎಂದೇ ಹೆಸರಾಗಿರುವ ಆಮೀರ್ ಖಾನ್ ಇಂದು ತಮ್ಮ ಕೊನೇ ಸೋಷಿಯಲ್ ಮೀಡಿಯಾ ಪೋಸ್ಟ್​​ನಲ್ಲಿ ಹೀಗೆಂದು ಬರೆದುಕೊಂಡಿದ್ದಾರೆ..ಇದೇ ನನ್ನ ಕೊನೇ ಪೋಸ್ಟ್ ಆಗಲಿದೆ. ಬೇರೆ ಹೇಗಾದರೂ ನಾನು ಸಕ್ರಿಯನಾಗಿ ಇರುತ್ತೇನೆ. ಯಾವುದೇ ನೆಪ, ಸೋಗು ಹಾಕುವುದನ್ನು ಬಿಡಬೇಕು ಎಂದು ನಿರ್ಧರಿಸಿದ್ದೇನೆ. ನನ್ನ ಸಿನಿಮಾ ಕೆಲಸಗಳ ಮೇಲೆ ಪೂರ್ತಿಯಾಗಿ ಗಮನ ಹರಿಸಬೇಕಾಗಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಲ್ಲಿಸುತ್ತಿದ್ದೇನೆ. ನಿಮ್ಮೊಂದಿಗೆ ಖಂಡಿತ ಬೇರೆ ದಾರಿಯಲ್ಲಿ ಸಂವಹನ ನಡೆಸುತ್ತೇನೆ. ಇನ್ನೊಂದು ಮುಖ್ಯವಿಷಯವೆಂದರೆ ಆಮೀರ್​ಖಾನ್ ಪ್ರೊಡಕ್ಷನ್ ತನ್ನ ಅಧಿಕೃತ ಚಾನಲ್​ ಪ್ರಾರಂಭ ಮಾಡುತ್ತಿದ್ದು, ನನ್ನ ಮುಂದಿನ ಸಿನಿಮಾಗಳ ಕುರಿತಾದ ಎಲ್ಲ ಮಾಹಿತಿಯೂ ಅದರಲ್ಲಿ ಶೇರ್ ಆಗಲಿದೆ ಎಂದು ಆಮೀರ್ ಖಾನ್​ ಹೇಳಿದ್ದಾರೆ.

ಇಂಥ ನಿರ್ಧಾರಗಳು ಮೊದಲಲ್ಲ ! ಕಳೆದ ವರ್ಷ ಫೆಬ್ರವರಿಯಲ್ಲಿ ಆಮೀರ್​ ಖಾನ್​ ಇಂಥದ್ದೇ ಒಂದು ನಿರ್ಧಾರ ಮಾಡಿದ್ದರು. ತಮ್ಮ ಮುಂದಿನ ಚಿತ್ರ ಲಾಲ್​ ಸಿಂಗ್​ ಚಡ್ಡಾ ಬಿಡುಗಡೆಯಾಗುವವರೆಗೂ ನನ್ನ ಮೊಬೈಲ್​ ಸ್ವಿಚ್​ ಆನ್​​ ಮಾಡೋದಿಲ್ಲ ಎಂದು ಹೇಳಿದ್ದರು. ಲಾಲ್​ ಸಿಂಗ್​ ಚಡ್ಡಾ ಶೂಟಿಂಗ್​ನಲ್ಲಿ ಬಿಜಿಯಾಗಿದ್ದರಿಂದ ಹೀಗೆ ನಿರ್ಧಾರ ಮಾಡಿದ್ದಾಗಿ ಹೇಳಿಕೊಂಡಿದ್ದರು. ಲಾಲ್​ ಸಿಂಗ್​ ಚಡ್ಡಾ ಕೆಲಸಗಳು ಬಹುತೇಕ ಮುಗಿದಿದ್ದು, ಈ ವರ್ಷದ ಡಿಸೆಂಬರ್​ ಹೊತ್ತಿಗೆ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ:  ಬಾಂಗ್ಲಾದೇಶದ ಮೊದಲ ಮಂಗಳಮುಖಿ ಸುದ್ದಿ ನಿರೂಪಕಿ ತಶ್ನುವಾ; ಮಹಿಳಾ ದಿನಾಚರಣೆಯಂದೇ ಕೆಲಸ ಪ್ರಾರಂಭ

‘ಕೊರೊನಾ ಹಬ್ಬಲು ಮುಖ್ಯ ಕಾರಣವೆಂದರೆ…’: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

Published On - 8:00 pm, Mon, 15 March 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ