ಬರ್ತ್​ ಡೇ ಮರುದಿನವೇ ಸೋಷಿಯಲ್ ಮೀಡಿಯಾಗಳಿಗೆ ಗುಡ್​ ಬೈ ಹೇಳಿದ ಆಮೀರ್ ಖಾನ್​; ನೆಪ ಹೇಳುವುದನ್ನು ಬಿಡಲು ನಿರ್ಧರಿಸಿದ್ದಾರಂತೆ ಮಿ.ಪರ್ಫೆಕ್ಷನಿಸ್ಟ್‌ ​

ಕಳೆದ ವರ್ಷ ಫೆಬ್ರವರಿಯಲ್ಲಿ ಆಮೀರ್​ ಖಾನ್​ ಇಂಥದ್ದೇ ಒಂದು ನಿರ್ಧಾರ ಮಾಡಿದ್ದರು. ತಮ್ಮ ಮುಂದಿನ ಚಿತ್ರ ಲಾಲ್​ ಸಿಂಗ್​ ಚಡ್ಡಾ ಬಿಡುಗಡೆಯಾಗುವವರೆಗೂ ನನ್ನ ಮೊಬೈಲ್​ ಸ್ವಿಚ್​ ಆನ್​​ ಮಾಡೋದಿಲ್ಲ ಎಂದು ಹೇಳಿದ್ದರು.

ಬರ್ತ್​ ಡೇ ಮರುದಿನವೇ ಸೋಷಿಯಲ್ ಮೀಡಿಯಾಗಳಿಗೆ ಗುಡ್​ ಬೈ ಹೇಳಿದ ಆಮೀರ್ ಖಾನ್​; ನೆಪ ಹೇಳುವುದನ್ನು ಬಿಡಲು ನಿರ್ಧರಿಸಿದ್ದಾರಂತೆ ಮಿ.ಪರ್ಫೆಕ್ಷನಿಸ್ಟ್‌ ​
ಆಮೀರ್​ ಖಾನ್​
Follow us
|

Updated on:Mar 15, 2021 | 8:03 PM

ನಿನ್ನೆ ಭಾನುವಾರ (ಮಾರ್ಚ್​ 14)ವಷ್ಟೇ 56ನೇ ಜನ್ಮದಿನ ಆಚರಿಸಿಕೊಂಡಿದ್ದ ಬಾಲಿವುಡ್ ನಟ ಆಮೀರ್ ಖಾನ್ (Aamir Khan)​ ಇಂದು ಏಕಾಏಕಿ ತಮ್ಮ ಅಭಿಮಾನಿಗಳಿಗೆ ಅಚ್ಚರಿ ಉಂಟುಮಾಡಿಸಿದ್ದಾರೆ. ನಾನಿನ್ನು ವೈಯಕ್ತಿಕವಾಗಿ ಯಾವುದೇ ಸಾಮಾಜಿಕ ಜಾಲತಾಣಗಳನ್ನೂ ಉಪಯೋಗಿಸುವುದಿಲ್ಲ. ನಿನ್ನೆ ನನ್ನ ಜನ್ಮದಿನಕ್ಕೆ ಪ್ರೀತಿಯಿಂದ ಹಾರೈಸಿದ ಎಲ್ಲರಿಗೂ ಕೃತಜ್ಞತೆಗಳು. ನಿಮ್ಮ ಹಾರೈಕೆ, ಪ್ರೀತಿ-ವಿಶ್ವಾಸ ನೋಡಿ ನನ್ನ ಹೃದಯ ತುಂಬಿಬಂತು. ಇದೇ ನನ್ನ ಕೊನೆಯ ಪೋಸ್ಟ್ ಎಂದು ಹೇಳಿದ್ದಾರೆ.

ಮಿ.ಪರ್ಫೆಕ್ಷನಿಸ್ಟ್‌ ಎಂದೇ ಹೆಸರಾಗಿರುವ ಆಮೀರ್ ಖಾನ್ ಇಂದು ತಮ್ಮ ಕೊನೇ ಸೋಷಿಯಲ್ ಮೀಡಿಯಾ ಪೋಸ್ಟ್​​ನಲ್ಲಿ ಹೀಗೆಂದು ಬರೆದುಕೊಂಡಿದ್ದಾರೆ..ಇದೇ ನನ್ನ ಕೊನೇ ಪೋಸ್ಟ್ ಆಗಲಿದೆ. ಬೇರೆ ಹೇಗಾದರೂ ನಾನು ಸಕ್ರಿಯನಾಗಿ ಇರುತ್ತೇನೆ. ಯಾವುದೇ ನೆಪ, ಸೋಗು ಹಾಕುವುದನ್ನು ಬಿಡಬೇಕು ಎಂದು ನಿರ್ಧರಿಸಿದ್ದೇನೆ. ನನ್ನ ಸಿನಿಮಾ ಕೆಲಸಗಳ ಮೇಲೆ ಪೂರ್ತಿಯಾಗಿ ಗಮನ ಹರಿಸಬೇಕಾಗಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಲ್ಲಿಸುತ್ತಿದ್ದೇನೆ. ನಿಮ್ಮೊಂದಿಗೆ ಖಂಡಿತ ಬೇರೆ ದಾರಿಯಲ್ಲಿ ಸಂವಹನ ನಡೆಸುತ್ತೇನೆ. ಇನ್ನೊಂದು ಮುಖ್ಯವಿಷಯವೆಂದರೆ ಆಮೀರ್​ಖಾನ್ ಪ್ರೊಡಕ್ಷನ್ ತನ್ನ ಅಧಿಕೃತ ಚಾನಲ್​ ಪ್ರಾರಂಭ ಮಾಡುತ್ತಿದ್ದು, ನನ್ನ ಮುಂದಿನ ಸಿನಿಮಾಗಳ ಕುರಿತಾದ ಎಲ್ಲ ಮಾಹಿತಿಯೂ ಅದರಲ್ಲಿ ಶೇರ್ ಆಗಲಿದೆ ಎಂದು ಆಮೀರ್ ಖಾನ್​ ಹೇಳಿದ್ದಾರೆ.

ಇಂಥ ನಿರ್ಧಾರಗಳು ಮೊದಲಲ್ಲ ! ಕಳೆದ ವರ್ಷ ಫೆಬ್ರವರಿಯಲ್ಲಿ ಆಮೀರ್​ ಖಾನ್​ ಇಂಥದ್ದೇ ಒಂದು ನಿರ್ಧಾರ ಮಾಡಿದ್ದರು. ತಮ್ಮ ಮುಂದಿನ ಚಿತ್ರ ಲಾಲ್​ ಸಿಂಗ್​ ಚಡ್ಡಾ ಬಿಡುಗಡೆಯಾಗುವವರೆಗೂ ನನ್ನ ಮೊಬೈಲ್​ ಸ್ವಿಚ್​ ಆನ್​​ ಮಾಡೋದಿಲ್ಲ ಎಂದು ಹೇಳಿದ್ದರು. ಲಾಲ್​ ಸಿಂಗ್​ ಚಡ್ಡಾ ಶೂಟಿಂಗ್​ನಲ್ಲಿ ಬಿಜಿಯಾಗಿದ್ದರಿಂದ ಹೀಗೆ ನಿರ್ಧಾರ ಮಾಡಿದ್ದಾಗಿ ಹೇಳಿಕೊಂಡಿದ್ದರು. ಲಾಲ್​ ಸಿಂಗ್​ ಚಡ್ಡಾ ಕೆಲಸಗಳು ಬಹುತೇಕ ಮುಗಿದಿದ್ದು, ಈ ವರ್ಷದ ಡಿಸೆಂಬರ್​ ಹೊತ್ತಿಗೆ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ:  ಬಾಂಗ್ಲಾದೇಶದ ಮೊದಲ ಮಂಗಳಮುಖಿ ಸುದ್ದಿ ನಿರೂಪಕಿ ತಶ್ನುವಾ; ಮಹಿಳಾ ದಿನಾಚರಣೆಯಂದೇ ಕೆಲಸ ಪ್ರಾರಂಭ

‘ಕೊರೊನಾ ಹಬ್ಬಲು ಮುಖ್ಯ ಕಾರಣವೆಂದರೆ…’: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

Published On - 8:00 pm, Mon, 15 March 21

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್