AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ ಡೇ ಮರುದಿನವೇ ಸೋಷಿಯಲ್ ಮೀಡಿಯಾಗಳಿಗೆ ಗುಡ್​ ಬೈ ಹೇಳಿದ ಆಮೀರ್ ಖಾನ್​; ನೆಪ ಹೇಳುವುದನ್ನು ಬಿಡಲು ನಿರ್ಧರಿಸಿದ್ದಾರಂತೆ ಮಿ.ಪರ್ಫೆಕ್ಷನಿಸ್ಟ್‌ ​

ಕಳೆದ ವರ್ಷ ಫೆಬ್ರವರಿಯಲ್ಲಿ ಆಮೀರ್​ ಖಾನ್​ ಇಂಥದ್ದೇ ಒಂದು ನಿರ್ಧಾರ ಮಾಡಿದ್ದರು. ತಮ್ಮ ಮುಂದಿನ ಚಿತ್ರ ಲಾಲ್​ ಸಿಂಗ್​ ಚಡ್ಡಾ ಬಿಡುಗಡೆಯಾಗುವವರೆಗೂ ನನ್ನ ಮೊಬೈಲ್​ ಸ್ವಿಚ್​ ಆನ್​​ ಮಾಡೋದಿಲ್ಲ ಎಂದು ಹೇಳಿದ್ದರು.

ಬರ್ತ್​ ಡೇ ಮರುದಿನವೇ ಸೋಷಿಯಲ್ ಮೀಡಿಯಾಗಳಿಗೆ ಗುಡ್​ ಬೈ ಹೇಳಿದ ಆಮೀರ್ ಖಾನ್​; ನೆಪ ಹೇಳುವುದನ್ನು ಬಿಡಲು ನಿರ್ಧರಿಸಿದ್ದಾರಂತೆ ಮಿ.ಪರ್ಫೆಕ್ಷನಿಸ್ಟ್‌ ​
ಆಮೀರ್​ ಖಾನ್​
Lakshmi Hegde
|

Updated on:Mar 15, 2021 | 8:03 PM

Share

ನಿನ್ನೆ ಭಾನುವಾರ (ಮಾರ್ಚ್​ 14)ವಷ್ಟೇ 56ನೇ ಜನ್ಮದಿನ ಆಚರಿಸಿಕೊಂಡಿದ್ದ ಬಾಲಿವುಡ್ ನಟ ಆಮೀರ್ ಖಾನ್ (Aamir Khan)​ ಇಂದು ಏಕಾಏಕಿ ತಮ್ಮ ಅಭಿಮಾನಿಗಳಿಗೆ ಅಚ್ಚರಿ ಉಂಟುಮಾಡಿಸಿದ್ದಾರೆ. ನಾನಿನ್ನು ವೈಯಕ್ತಿಕವಾಗಿ ಯಾವುದೇ ಸಾಮಾಜಿಕ ಜಾಲತಾಣಗಳನ್ನೂ ಉಪಯೋಗಿಸುವುದಿಲ್ಲ. ನಿನ್ನೆ ನನ್ನ ಜನ್ಮದಿನಕ್ಕೆ ಪ್ರೀತಿಯಿಂದ ಹಾರೈಸಿದ ಎಲ್ಲರಿಗೂ ಕೃತಜ್ಞತೆಗಳು. ನಿಮ್ಮ ಹಾರೈಕೆ, ಪ್ರೀತಿ-ವಿಶ್ವಾಸ ನೋಡಿ ನನ್ನ ಹೃದಯ ತುಂಬಿಬಂತು. ಇದೇ ನನ್ನ ಕೊನೆಯ ಪೋಸ್ಟ್ ಎಂದು ಹೇಳಿದ್ದಾರೆ.

ಮಿ.ಪರ್ಫೆಕ್ಷನಿಸ್ಟ್‌ ಎಂದೇ ಹೆಸರಾಗಿರುವ ಆಮೀರ್ ಖಾನ್ ಇಂದು ತಮ್ಮ ಕೊನೇ ಸೋಷಿಯಲ್ ಮೀಡಿಯಾ ಪೋಸ್ಟ್​​ನಲ್ಲಿ ಹೀಗೆಂದು ಬರೆದುಕೊಂಡಿದ್ದಾರೆ..ಇದೇ ನನ್ನ ಕೊನೇ ಪೋಸ್ಟ್ ಆಗಲಿದೆ. ಬೇರೆ ಹೇಗಾದರೂ ನಾನು ಸಕ್ರಿಯನಾಗಿ ಇರುತ್ತೇನೆ. ಯಾವುದೇ ನೆಪ, ಸೋಗು ಹಾಕುವುದನ್ನು ಬಿಡಬೇಕು ಎಂದು ನಿರ್ಧರಿಸಿದ್ದೇನೆ. ನನ್ನ ಸಿನಿಮಾ ಕೆಲಸಗಳ ಮೇಲೆ ಪೂರ್ತಿಯಾಗಿ ಗಮನ ಹರಿಸಬೇಕಾಗಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಲ್ಲಿಸುತ್ತಿದ್ದೇನೆ. ನಿಮ್ಮೊಂದಿಗೆ ಖಂಡಿತ ಬೇರೆ ದಾರಿಯಲ್ಲಿ ಸಂವಹನ ನಡೆಸುತ್ತೇನೆ. ಇನ್ನೊಂದು ಮುಖ್ಯವಿಷಯವೆಂದರೆ ಆಮೀರ್​ಖಾನ್ ಪ್ರೊಡಕ್ಷನ್ ತನ್ನ ಅಧಿಕೃತ ಚಾನಲ್​ ಪ್ರಾರಂಭ ಮಾಡುತ್ತಿದ್ದು, ನನ್ನ ಮುಂದಿನ ಸಿನಿಮಾಗಳ ಕುರಿತಾದ ಎಲ್ಲ ಮಾಹಿತಿಯೂ ಅದರಲ್ಲಿ ಶೇರ್ ಆಗಲಿದೆ ಎಂದು ಆಮೀರ್ ಖಾನ್​ ಹೇಳಿದ್ದಾರೆ.

ಇಂಥ ನಿರ್ಧಾರಗಳು ಮೊದಲಲ್ಲ ! ಕಳೆದ ವರ್ಷ ಫೆಬ್ರವರಿಯಲ್ಲಿ ಆಮೀರ್​ ಖಾನ್​ ಇಂಥದ್ದೇ ಒಂದು ನಿರ್ಧಾರ ಮಾಡಿದ್ದರು. ತಮ್ಮ ಮುಂದಿನ ಚಿತ್ರ ಲಾಲ್​ ಸಿಂಗ್​ ಚಡ್ಡಾ ಬಿಡುಗಡೆಯಾಗುವವರೆಗೂ ನನ್ನ ಮೊಬೈಲ್​ ಸ್ವಿಚ್​ ಆನ್​​ ಮಾಡೋದಿಲ್ಲ ಎಂದು ಹೇಳಿದ್ದರು. ಲಾಲ್​ ಸಿಂಗ್​ ಚಡ್ಡಾ ಶೂಟಿಂಗ್​ನಲ್ಲಿ ಬಿಜಿಯಾಗಿದ್ದರಿಂದ ಹೀಗೆ ನಿರ್ಧಾರ ಮಾಡಿದ್ದಾಗಿ ಹೇಳಿಕೊಂಡಿದ್ದರು. ಲಾಲ್​ ಸಿಂಗ್​ ಚಡ್ಡಾ ಕೆಲಸಗಳು ಬಹುತೇಕ ಮುಗಿದಿದ್ದು, ಈ ವರ್ಷದ ಡಿಸೆಂಬರ್​ ಹೊತ್ತಿಗೆ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ:  ಬಾಂಗ್ಲಾದೇಶದ ಮೊದಲ ಮಂಗಳಮುಖಿ ಸುದ್ದಿ ನಿರೂಪಕಿ ತಶ್ನುವಾ; ಮಹಿಳಾ ದಿನಾಚರಣೆಯಂದೇ ಕೆಲಸ ಪ್ರಾರಂಭ

‘ಕೊರೊನಾ ಹಬ್ಬಲು ಮುಖ್ಯ ಕಾರಣವೆಂದರೆ…’: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

Published On - 8:00 pm, Mon, 15 March 21

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ