AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ.. ಸಮಾಜ ದ್ರೋಹಿಗಳು; ಇವರಿಗೆ ಪರಿಹಾರ ನೀಡಬೇಡಿ -ಆಯನೂರು ಮಂಜುನಾಥ್

ಈ ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ. ಈ ಸ್ಪೋಟದಲ್ಲಿ ತೀರಿಹೋದವರು ಪಾಲುದಾರರು. ಹೀಗಾಗಿ ಇವರಿಗೆ ಪರಿಹಾರ ನೀಡಬೇಡಿ. ಇವರೆಲ್ಲಾ ಸಮಾಜ ದ್ರೋಹಿಗಳು

ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ.. ಸಮಾಜ ದ್ರೋಹಿಗಳು; ಇವರಿಗೆ ಪರಿಹಾರ ನೀಡಬೇಡಿ -ಆಯನೂರು ಮಂಜುನಾಥ್
ಆಯನೂರು ಮಂಜುನಾಥ್
ಪೃಥ್ವಿಶಂಕರ
|

Updated on:Feb 01, 2021 | 6:05 PM

Share

ಬೆಂಗಳೂರು: ಶಿವಮೊಗ್ಗ ತಾಲೂಕಿನ ಹುಣಸೋಡು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್​ನಲ್ಲಿ ಆಯನೂರು ಮಂಜುನಾಥ್ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಈ ಅಕ್ರಮ ಗಣಿ ಇಷ್ಟು ವರ್ಷ ಯಾಕೆ ಗಮನಕ್ಕೆ ಬಂದಿಲ್ಲ? ಇದರ ಹೊಣೆ ಯಾರು ಹೊತ್ತುಕೊಳ್ಳಬೇಕು ಎಂದೂ ಆಯನೂರು ಮಂಜುನಾಥ್ ವಿಧಾನಪರಿಷತ್​ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಇದು ಇತ್ತೀಚೆಗೆ ನಡೆಯುತ್ತಿರುವ ದಂಧೆ ಅಲ್ಲ. ಎಲ್ಲ ಸರಕಾರಗಳು ಇದ್ದ ಸಂದರ್ಭದಲ್ಲೂ ಅವ್ಯಾಹತವಾಗಿ ನಡೆದುಕೊಂಡು ಬಂದಿದೆ. ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಅರಣ್ಯಾಧಿಕಾರಿಗಳು, ಕಂದಾಯ ಸೇರಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಈ ಅಕ್ರಮ ಗಣಿ ಇಷ್ಟು ವರ್ಷ ಯಾಕೆ ಗಮನಕ್ಕೆ ಬಂದಿಲ್ಲ? ಇದರ ಹೊಣೆ ಯಾರು ಹೊತ್ತುಕೊಳ್ಳಬೇಕು? ಎಂದು ಪ್ರಶ್ನಿಸಿದರು.

ಈ ಸ್ಪೋಟದಲ್ಲಿ ತೀರಿಹೋದವರು ಕಾರ್ಮಿಕರಲ್ಲ.. ಯಾರೊ ಎಂಜಲು ಕಾಸು ತಿಂದು ಇಂತಹ ಅಕ್ರಮಕ್ಕೆ ಅವಕಾಶ ನೀಡಿ, ನಾವೆಲ್ಲಾ ಜೀವ ತ್ಯಾಗ ಮಾಡಬೇಕಿತ್ತಾ? ಈ ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ. ಈ ಸ್ಪೋಟದಲ್ಲಿ ತೀರಿಹೋದವರು ಪಾಲುದಾರರು. ಹೀಗಾಗಿ ಇವರಿಗೆ ಪರಿಹಾರ ನೀಡಬೇಡಿ. ಇವರೆಲ್ಲಾ ಸಮಾಜ ದ್ರೋಹಿಗಳು ಎಂದು ಸದನದಲ್ಲಿ ಆಕ್ರೋಶಭರಿತವಾಗಿ ಆಯನೂರು ಮಂಜುನಾಥ್ ಮಾತನಾಡಿದರು.

ಕ್ರಷರ್ ನಡೆಸೋಕೆ ನಾವು ಪರ್ಮಿಶನ್ ಕೊಟ್ಟಿಲ್ಲ ಅಂತಾರೆ. ಹಾಗಾದರೆ ಈಗಲೂ ಅಲ್ಲಿ ನಡೆಯುತ್ತಾ ಇದೆಯಲ್ಲ. ಈ ಐದು ಇಲಾಖೆಯ ಅಧಿಕಾರಿಗಳನ್ನು ( ಕಂದಾಯ-ಪರಿಸರ-ಗಣಿ-ಗೃಹ-ಅರಣ್ಯ) ತನಿಖೆಗೆ ಒಳಪಡಿಸಬೇಕು. ಗೃಹ ಇಲಾಖೆ ಏನ್ ಮಾಡ್ತಿದೆ? ಇದನ್ನು ಪಕ್ಷದ ದೃಷ್ಟಿಯಿಂದ ನೋಡೊದು ಬೇಡ, ಎಲ್ಲರ ಕಾಲದಲ್ಲೂ ಇದು ನಡೆದಿದೆ ಎಂದು ಎಲ್ಲಾ ರಾಜಕೀಯ ಪಕ್ಷಗಳನ್ನು ದೂಷಿಸಿ ಅವರು ಮಾತಾನಾಡಿದರು.

ಬಿಳಿಕಲ್ಲು ಕ್ವಾರಿಯಲ್ಲಿ ಸ್ಪೋಟ: ಕಾರ್ಮಿಕ ದುರ್ಮರಣ

Published On - 5:48 pm, Mon, 1 February 21

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್