AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ.. ಸಮಾಜ ದ್ರೋಹಿಗಳು; ಇವರಿಗೆ ಪರಿಹಾರ ನೀಡಬೇಡಿ -ಆಯನೂರು ಮಂಜುನಾಥ್

ಈ ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ. ಈ ಸ್ಪೋಟದಲ್ಲಿ ತೀರಿಹೋದವರು ಪಾಲುದಾರರು. ಹೀಗಾಗಿ ಇವರಿಗೆ ಪರಿಹಾರ ನೀಡಬೇಡಿ. ಇವರೆಲ್ಲಾ ಸಮಾಜ ದ್ರೋಹಿಗಳು

ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ.. ಸಮಾಜ ದ್ರೋಹಿಗಳು; ಇವರಿಗೆ ಪರಿಹಾರ ನೀಡಬೇಡಿ -ಆಯನೂರು ಮಂಜುನಾಥ್
ಆಯನೂರು ಮಂಜುನಾಥ್
ಪೃಥ್ವಿಶಂಕರ
|

Updated on:Feb 01, 2021 | 6:05 PM

Share

ಬೆಂಗಳೂರು: ಶಿವಮೊಗ್ಗ ತಾಲೂಕಿನ ಹುಣಸೋಡು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್​ನಲ್ಲಿ ಆಯನೂರು ಮಂಜುನಾಥ್ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಈ ಅಕ್ರಮ ಗಣಿ ಇಷ್ಟು ವರ್ಷ ಯಾಕೆ ಗಮನಕ್ಕೆ ಬಂದಿಲ್ಲ? ಇದರ ಹೊಣೆ ಯಾರು ಹೊತ್ತುಕೊಳ್ಳಬೇಕು ಎಂದೂ ಆಯನೂರು ಮಂಜುನಾಥ್ ವಿಧಾನಪರಿಷತ್​ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಇದು ಇತ್ತೀಚೆಗೆ ನಡೆಯುತ್ತಿರುವ ದಂಧೆ ಅಲ್ಲ. ಎಲ್ಲ ಸರಕಾರಗಳು ಇದ್ದ ಸಂದರ್ಭದಲ್ಲೂ ಅವ್ಯಾಹತವಾಗಿ ನಡೆದುಕೊಂಡು ಬಂದಿದೆ. ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಅರಣ್ಯಾಧಿಕಾರಿಗಳು, ಕಂದಾಯ ಸೇರಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಈ ಅಕ್ರಮ ಗಣಿ ಇಷ್ಟು ವರ್ಷ ಯಾಕೆ ಗಮನಕ್ಕೆ ಬಂದಿಲ್ಲ? ಇದರ ಹೊಣೆ ಯಾರು ಹೊತ್ತುಕೊಳ್ಳಬೇಕು? ಎಂದು ಪ್ರಶ್ನಿಸಿದರು.

ಈ ಸ್ಪೋಟದಲ್ಲಿ ತೀರಿಹೋದವರು ಕಾರ್ಮಿಕರಲ್ಲ.. ಯಾರೊ ಎಂಜಲು ಕಾಸು ತಿಂದು ಇಂತಹ ಅಕ್ರಮಕ್ಕೆ ಅವಕಾಶ ನೀಡಿ, ನಾವೆಲ್ಲಾ ಜೀವ ತ್ಯಾಗ ಮಾಡಬೇಕಿತ್ತಾ? ಈ ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ. ಈ ಸ್ಪೋಟದಲ್ಲಿ ತೀರಿಹೋದವರು ಪಾಲುದಾರರು. ಹೀಗಾಗಿ ಇವರಿಗೆ ಪರಿಹಾರ ನೀಡಬೇಡಿ. ಇವರೆಲ್ಲಾ ಸಮಾಜ ದ್ರೋಹಿಗಳು ಎಂದು ಸದನದಲ್ಲಿ ಆಕ್ರೋಶಭರಿತವಾಗಿ ಆಯನೂರು ಮಂಜುನಾಥ್ ಮಾತನಾಡಿದರು.

ಕ್ರಷರ್ ನಡೆಸೋಕೆ ನಾವು ಪರ್ಮಿಶನ್ ಕೊಟ್ಟಿಲ್ಲ ಅಂತಾರೆ. ಹಾಗಾದರೆ ಈಗಲೂ ಅಲ್ಲಿ ನಡೆಯುತ್ತಾ ಇದೆಯಲ್ಲ. ಈ ಐದು ಇಲಾಖೆಯ ಅಧಿಕಾರಿಗಳನ್ನು ( ಕಂದಾಯ-ಪರಿಸರ-ಗಣಿ-ಗೃಹ-ಅರಣ್ಯ) ತನಿಖೆಗೆ ಒಳಪಡಿಸಬೇಕು. ಗೃಹ ಇಲಾಖೆ ಏನ್ ಮಾಡ್ತಿದೆ? ಇದನ್ನು ಪಕ್ಷದ ದೃಷ್ಟಿಯಿಂದ ನೋಡೊದು ಬೇಡ, ಎಲ್ಲರ ಕಾಲದಲ್ಲೂ ಇದು ನಡೆದಿದೆ ಎಂದು ಎಲ್ಲಾ ರಾಜಕೀಯ ಪಕ್ಷಗಳನ್ನು ದೂಷಿಸಿ ಅವರು ಮಾತಾನಾಡಿದರು.

ಬಿಳಿಕಲ್ಲು ಕ್ವಾರಿಯಲ್ಲಿ ಸ್ಪೋಟ: ಕಾರ್ಮಿಕ ದುರ್ಮರಣ

Published On - 5:48 pm, Mon, 1 February 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ