AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ.. ಸಮಾಜ ದ್ರೋಹಿಗಳು; ಇವರಿಗೆ ಪರಿಹಾರ ನೀಡಬೇಡಿ -ಆಯನೂರು ಮಂಜುನಾಥ್

ಈ ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ. ಈ ಸ್ಪೋಟದಲ್ಲಿ ತೀರಿಹೋದವರು ಪಾಲುದಾರರು. ಹೀಗಾಗಿ ಇವರಿಗೆ ಪರಿಹಾರ ನೀಡಬೇಡಿ. ಇವರೆಲ್ಲಾ ಸಮಾಜ ದ್ರೋಹಿಗಳು

ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ.. ಸಮಾಜ ದ್ರೋಹಿಗಳು; ಇವರಿಗೆ ಪರಿಹಾರ ನೀಡಬೇಡಿ -ಆಯನೂರು ಮಂಜುನಾಥ್
ಆಯನೂರು ಮಂಜುನಾಥ್
Follow us
ಪೃಥ್ವಿಶಂಕರ
|

Updated on:Feb 01, 2021 | 6:05 PM

ಬೆಂಗಳೂರು: ಶಿವಮೊಗ್ಗ ತಾಲೂಕಿನ ಹುಣಸೋಡು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್​ನಲ್ಲಿ ಆಯನೂರು ಮಂಜುನಾಥ್ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಈ ಅಕ್ರಮ ಗಣಿ ಇಷ್ಟು ವರ್ಷ ಯಾಕೆ ಗಮನಕ್ಕೆ ಬಂದಿಲ್ಲ? ಇದರ ಹೊಣೆ ಯಾರು ಹೊತ್ತುಕೊಳ್ಳಬೇಕು ಎಂದೂ ಆಯನೂರು ಮಂಜುನಾಥ್ ವಿಧಾನಪರಿಷತ್​ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಇದು ಇತ್ತೀಚೆಗೆ ನಡೆಯುತ್ತಿರುವ ದಂಧೆ ಅಲ್ಲ. ಎಲ್ಲ ಸರಕಾರಗಳು ಇದ್ದ ಸಂದರ್ಭದಲ್ಲೂ ಅವ್ಯಾಹತವಾಗಿ ನಡೆದುಕೊಂಡು ಬಂದಿದೆ. ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಅರಣ್ಯಾಧಿಕಾರಿಗಳು, ಕಂದಾಯ ಸೇರಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಈ ಅಕ್ರಮ ಗಣಿ ಇಷ್ಟು ವರ್ಷ ಯಾಕೆ ಗಮನಕ್ಕೆ ಬಂದಿಲ್ಲ? ಇದರ ಹೊಣೆ ಯಾರು ಹೊತ್ತುಕೊಳ್ಳಬೇಕು? ಎಂದು ಪ್ರಶ್ನಿಸಿದರು.

ಈ ಸ್ಪೋಟದಲ್ಲಿ ತೀರಿಹೋದವರು ಕಾರ್ಮಿಕರಲ್ಲ.. ಯಾರೊ ಎಂಜಲು ಕಾಸು ತಿಂದು ಇಂತಹ ಅಕ್ರಮಕ್ಕೆ ಅವಕಾಶ ನೀಡಿ, ನಾವೆಲ್ಲಾ ಜೀವ ತ್ಯಾಗ ಮಾಡಬೇಕಿತ್ತಾ? ಈ ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ. ಈ ಸ್ಪೋಟದಲ್ಲಿ ತೀರಿಹೋದವರು ಪಾಲುದಾರರು. ಹೀಗಾಗಿ ಇವರಿಗೆ ಪರಿಹಾರ ನೀಡಬೇಡಿ. ಇವರೆಲ್ಲಾ ಸಮಾಜ ದ್ರೋಹಿಗಳು ಎಂದು ಸದನದಲ್ಲಿ ಆಕ್ರೋಶಭರಿತವಾಗಿ ಆಯನೂರು ಮಂಜುನಾಥ್ ಮಾತನಾಡಿದರು.

ಕ್ರಷರ್ ನಡೆಸೋಕೆ ನಾವು ಪರ್ಮಿಶನ್ ಕೊಟ್ಟಿಲ್ಲ ಅಂತಾರೆ. ಹಾಗಾದರೆ ಈಗಲೂ ಅಲ್ಲಿ ನಡೆಯುತ್ತಾ ಇದೆಯಲ್ಲ. ಈ ಐದು ಇಲಾಖೆಯ ಅಧಿಕಾರಿಗಳನ್ನು ( ಕಂದಾಯ-ಪರಿಸರ-ಗಣಿ-ಗೃಹ-ಅರಣ್ಯ) ತನಿಖೆಗೆ ಒಳಪಡಿಸಬೇಕು. ಗೃಹ ಇಲಾಖೆ ಏನ್ ಮಾಡ್ತಿದೆ? ಇದನ್ನು ಪಕ್ಷದ ದೃಷ್ಟಿಯಿಂದ ನೋಡೊದು ಬೇಡ, ಎಲ್ಲರ ಕಾಲದಲ್ಲೂ ಇದು ನಡೆದಿದೆ ಎಂದು ಎಲ್ಲಾ ರಾಜಕೀಯ ಪಕ್ಷಗಳನ್ನು ದೂಷಿಸಿ ಅವರು ಮಾತಾನಾಡಿದರು.

ಬಿಳಿಕಲ್ಲು ಕ್ವಾರಿಯಲ್ಲಿ ಸ್ಪೋಟ: ಕಾರ್ಮಿಕ ದುರ್ಮರಣ

Published On - 5:48 pm, Mon, 1 February 21

VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು