ಸ್ಮಶಾನ ಜಾಗದಲ್ಲಿ ಗಿಡ ನೆಡಲು ಹೋಗಿದ್ದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದನೆ..

ನೆಲಮಂಗಲ: ಅಂತ್ಯಕ್ರಿಯೆ ಸಮಯದಲ್ಲಿ ಬಂದ ಜನರಿಗೆ ನೆರಳಾಗಿರಲಿ ಎಂದು, ಊರಿನ ಸ್ಮಶಾನ ಜಾಗದಲ್ಲಿ ಗಿಡ ನೆಡಲು ಹೋಗಿದ್ದ, ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೌರಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅದೇ ಗ್ರಾಮದ ರುದ್ರೇಶ್ ಎಂಬ ವ್ಯಕ್ತಿ ತಮ್ಮ ಸ್ವಂತ ಖರ್ಚಿನಲ್ಲಿ 30 ಹೊಂಗೆ ಸಸಿಗಳನ್ನು ಖರೀದಿ ಮಾಡಿ, ಊರ ಹೊರಗಿದ್ದ ಸ್ಮಶಾನದಲ್ಲಿ, ಆ ಗಿಡಗಳನ್ನು ನೆಡಲು ತೆರಳಿದ್ದರು. ಈ ವೇಳೆ ಅದೇ ಗ್ರಾಮದ […]

ಸ್ಮಶಾನ ಜಾಗದಲ್ಲಿ ಗಿಡ ನೆಡಲು ಹೋಗಿದ್ದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದನೆ..
ಸಾಧು ಶ್ರೀನಾಥ್​

Updated on: Aug 24, 2020 | 1:06 PM

ನೆಲಮಂಗಲ: ಅಂತ್ಯಕ್ರಿಯೆ ಸಮಯದಲ್ಲಿ ಬಂದ ಜನರಿಗೆ ನೆರಳಾಗಿರಲಿ ಎಂದು, ಊರಿನ ಸ್ಮಶಾನ ಜಾಗದಲ್ಲಿ ಗಿಡ ನೆಡಲು ಹೋಗಿದ್ದ, ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೌರಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅದೇ ಗ್ರಾಮದ ರುದ್ರೇಶ್ ಎಂಬ ವ್ಯಕ್ತಿ ತಮ್ಮ ಸ್ವಂತ ಖರ್ಚಿನಲ್ಲಿ 30 ಹೊಂಗೆ ಸಸಿಗಳನ್ನು ಖರೀದಿ ಮಾಡಿ, ಊರ ಹೊರಗಿದ್ದ ಸ್ಮಶಾನದಲ್ಲಿ, ಆ ಗಿಡಗಳನ್ನು ನೆಡಲು ತೆರಳಿದ್ದರು.

ಈ ವೇಳೆ ಅದೇ ಗ್ರಾಮದ ನಂಜಪ್ಪ ಹಾಗೂ ಆತನ ಕುಟುಂಬಸ್ಥರು, ರುದ್ರೇಶ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಗಿಡ ನೆಡುವುದನ್ನು ತಡೆಹಿಡಿದಿದ್ದಾರೆ. ಈ ಹಿನ್ನೆಲೆಯಿಂದಾಗಿ ರುದ್ರೇಶ್ ಅವರು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ನಂಜಪ್ಪ ಹಾಗೂ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Published On - 12:00 pm, Mon, 24 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us