AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIADB ವಿಶೇಷ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ

ಮಂಗಳೂರು: KIADB ವಿಶೇಷ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಮಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಕಡೆ ಏಕಕಾಲಕ್ಕೆ ಮಂಗಳೂರು ಎಸಿಬಿ ಎಸ್ಪಿ ಉಮಾಪ್ರಶಾಂತ್, ಡಿವೈಎಸ್ಪಿ ಮಂಜುನಾಥ್, ಇನ್ಸ್ ಪೆಕ್ಟರ್ ಯೋಗೀಶ್ ನಾಯ್ಕ್ ನೇತೃತ್ವದ ತಂಡ ದಾಳಿ ಮಾಡಿದೆ. ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಮನೆಗಳಲ್ಲಿ ಎಸಿಬಿ ಶೋಧ ಕಾರ್ಯ ಮುಂದುವರೆಸಿದೆ. ಮಂಗಳೂರಿನಲ್ಲಿ ಡಿಸೆಂಬರ್ 19 ರಂದು 5 ಲಕ್ಷ ಲಂಚ ಸ್ವೀಕರಿಸಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಎಸಿಬಿ ಬಲೆಗೆ ಬಿದ್ದಿದ್ದರು. ಕೊರೊನಾದಿಂದ ಕಾರ್ಯಾಚರಣೆ ಮುಂದೂಡಲಾಗಿತ್ತು. […]

KIADB ವಿಶೇಷ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ
ಆಯೇಷಾ ಬಾನು
|

Updated on:Jun 12, 2020 | 2:18 PM

Share

ಮಂಗಳೂರು: KIADB ವಿಶೇಷ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಮಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಕಡೆ ಏಕಕಾಲಕ್ಕೆ ಮಂಗಳೂರು ಎಸಿಬಿ ಎಸ್ಪಿ ಉಮಾಪ್ರಶಾಂತ್, ಡಿವೈಎಸ್ಪಿ ಮಂಜುನಾಥ್, ಇನ್ಸ್ ಪೆಕ್ಟರ್ ಯೋಗೀಶ್ ನಾಯ್ಕ್ ನೇತೃತ್ವದ ತಂಡ ದಾಳಿ ಮಾಡಿದೆ. ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಮನೆಗಳಲ್ಲಿ ಎಸಿಬಿ ಶೋಧ ಕಾರ್ಯ ಮುಂದುವರೆಸಿದೆ.

ಮಂಗಳೂರಿನಲ್ಲಿ ಡಿಸೆಂಬರ್ 19 ರಂದು 5 ಲಕ್ಷ ಲಂಚ ಸ್ವೀಕರಿಸಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಎಸಿಬಿ ಬಲೆಗೆ ಬಿದ್ದಿದ್ದರು. ಕೊರೊನಾದಿಂದ ಕಾರ್ಯಾಚರಣೆ ಮುಂದೂಡಲಾಗಿತ್ತು. ಹೀಗಾಗಿ ಅಕ್ರಮ ಆಸ್ತಿಗಳಿಕೆ ಆರೋಪದಡಿ ಎಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದೆ. ಈ ವೇಳೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆಯಾಗಿದೆ.

ಸದ್ಯ ಲಂಚ ಸ್ವೀಕಾರ ಆರೋಪದಡಿ ದಾಸೇಗೌಡ ಅಮಾನತಿನಲ್ಲಿದ್ದಾರೆ. ಮಂಗಳೂರಿನಲ್ಲಿ 1 ಫ್ಲ್ಯಾಟ್​ ಸೇರಿ ಮೂರ್ನಾಲ್ಕು ಮನೆಯಲ್ಲಿ ಶೋಧ ಕಾರ್ಯ ನಡೆದಿದೆ. ಬೆಂಗಳೂರು ಸೇರಿ ವಿವಿಧ ಕಡೆ 11 ಸೈಟ್, ಚಿನ್ನಾಭರಣ ಪತ್ತೆಯಾಗಿದೆ. ಹಾಗೂ ಮಂಡ್ಯದ ಕಾವೇರಿ ನಗರದ ನಿವಾಸದ ಮೇಲೂ ಎಸಿಬಿ ದಾಳಿ ನಡೆಸಿದೆ. ಅಲ್ಲದೆ ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿರುವ ದಾಸೇಗೌಡ ಆಡಿಟರ್ ಕುಮಾರ್ ಮನೆಯ ಮೇಲೆ ದಾಳಿ ನಡೆದಿದೆ.

Published On - 10:05 am, Fri, 12 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್