AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚಕ್ಕೆ ಕೈಯೊಡ್ಡಿದ FDA ಎಸಿಬಿ ಬಲೆಗೆ ಬಿದ್ದ

ಹಾವೇರಿ: ಪರಿಶಿಷ್ಟ ಜಾತಿಯವರಿಗೆ ಸರಕಾರದಿಂದ ನೀಡುವ ಜಮೀನು ಮಂಜೂರಾತಿ ಮಾಡಲು ಫಲಾನುಭವಿಯಿಂದ ಪ್ರಥಮ ದರ್ಜೆ ಸಹಾಯಕ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾನೆ. ಹಾವೇರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಎಪ್ಪತ್ತೈದು ಸಾವಿರ ರುಪಾಯಿ ಲಂಚಕ್ಕೆ ಬೇಡಿಕೆ.. ತಿಪ್ಪೇಸ್ವಾಮಿ ಎಂಬುವರೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಪ್ರಥಮ ದರ್ಜೆ ಸಹಾಯಕ ಎಂದು ಗುರುತಿಸಲಾಗಿದೆ. ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ವಸಂತಕುಮಾರ, ಫೀಲ್ಡ್ ಆಫೀಸರ ದಾಮೋದರ ಹಾಗೂ […]

ಲಂಚಕ್ಕೆ ಕೈಯೊಡ್ಡಿದ FDA ಎಸಿಬಿ ಬಲೆಗೆ ಬಿದ್ದ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 12, 2020 | 7:09 AM

Share

ಹಾವೇರಿ: ಪರಿಶಿಷ್ಟ ಜಾತಿಯವರಿಗೆ ಸರಕಾರದಿಂದ ನೀಡುವ ಜಮೀನು ಮಂಜೂರಾತಿ ಮಾಡಲು ಫಲಾನುಭವಿಯಿಂದ ಪ್ರಥಮ ದರ್ಜೆ ಸಹಾಯಕ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾನೆ. ಹಾವೇರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಈ ಘಟನೆ ನಡೆದಿದೆ.

ಎಪ್ಪತ್ತೈದು ಸಾವಿರ ರುಪಾಯಿ ಲಂಚಕ್ಕೆ ಬೇಡಿಕೆ.. ತಿಪ್ಪೇಸ್ವಾಮಿ ಎಂಬುವರೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಪ್ರಥಮ ದರ್ಜೆ ಸಹಾಯಕ ಎಂದು ಗುರುತಿಸಲಾಗಿದೆ. ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ವಸಂತಕುಮಾರ, ಫೀಲ್ಡ್ ಆಫೀಸರ ದಾಮೋದರ ಹಾಗೂ ಕಚೇರಿಯ ಮತ್ತೋರ್ವ ಪ್ರಥಮ ದರ್ಜೆ ಸಹಾಯಕ ರಘು ಊರ್ಫ್ ರಾಘವೇಂದ್ರ ಸೇರಿಕೊಂಡು 75 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಪದ್ಮಾವತಿಪುರದ‌ ಸಿದ್ದಪ್ಪ ಲಮಾಣಿ ಎಂಬ ಫಲಾನುಭವಿಗೆ ನಿಗಮದ‌ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ನಾಲ್ವರು ಸೇರಿಕೊಂಡು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ 25 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಪ್ರಥಮ ದರ್ಜೆ ಸಹಾಯಕ ತಿಪ್ಪೇಸ್ವಾಮಿ ಮಾತ್ರ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳ ಕೈಗೆ ತಗ್ಲಾಕ್ಕೊಂಡಿದ್ದಾನೆ. ಉಳಿದ ಮೂವರು ಎಸಿಬಿ ದಾಳಿಯ ವೇಳೆ ಕಚೇರಿಯಲ್ಲಿ ಇರಲಿಲ್ಲ. ಬಂಧಿತ ಓರ್ವ ಎಫ್ ಡಿಎ ಸೇರಿ ನಾಲ್ವರ ವಿರುದ್ಧ ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸಿಬಿ ಡಿವೈಎಸ್ಪಿ ಸೋಮಲಿಂಗ ಕುಂಬಾರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಎಸಿಬಿ ಸಿಪಿಐ ಶ್ರೀಶೈಲ ಚೌಗಲಾ ಹಾಗೂ ಎಸಿಬಿ ಪೊಲೀಸ್ ಠಾಣೆಯ ಸಿಬ್ಬಂದಿ ಭಾಗವಹಿಸಿದ್ದರು. -ಪ್ರಭುಗೌಡ.ಎನ್.ಪಾಟೀಲ

Published On - 6:56 am, Sat, 12 September 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್