AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚಕ್ಕೆ ಕೈಯೊಡ್ಡಿದ FDA ಎಸಿಬಿ ಬಲೆಗೆ ಬಿದ್ದ

ಹಾವೇರಿ: ಪರಿಶಿಷ್ಟ ಜಾತಿಯವರಿಗೆ ಸರಕಾರದಿಂದ ನೀಡುವ ಜಮೀನು ಮಂಜೂರಾತಿ ಮಾಡಲು ಫಲಾನುಭವಿಯಿಂದ ಪ್ರಥಮ ದರ್ಜೆ ಸಹಾಯಕ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾನೆ. ಹಾವೇರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಎಪ್ಪತ್ತೈದು ಸಾವಿರ ರುಪಾಯಿ ಲಂಚಕ್ಕೆ ಬೇಡಿಕೆ.. ತಿಪ್ಪೇಸ್ವಾಮಿ ಎಂಬುವರೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಪ್ರಥಮ ದರ್ಜೆ ಸಹಾಯಕ ಎಂದು ಗುರುತಿಸಲಾಗಿದೆ. ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ವಸಂತಕುಮಾರ, ಫೀಲ್ಡ್ ಆಫೀಸರ ದಾಮೋದರ ಹಾಗೂ […]

ಲಂಚಕ್ಕೆ ಕೈಯೊಡ್ಡಿದ FDA ಎಸಿಬಿ ಬಲೆಗೆ ಬಿದ್ದ
ಸಾಧು ಶ್ರೀನಾಥ್​
|

Updated on:Sep 12, 2020 | 7:09 AM

Share

ಹಾವೇರಿ: ಪರಿಶಿಷ್ಟ ಜಾತಿಯವರಿಗೆ ಸರಕಾರದಿಂದ ನೀಡುವ ಜಮೀನು ಮಂಜೂರಾತಿ ಮಾಡಲು ಫಲಾನುಭವಿಯಿಂದ ಪ್ರಥಮ ದರ್ಜೆ ಸಹಾಯಕ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾನೆ. ಹಾವೇರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಈ ಘಟನೆ ನಡೆದಿದೆ.

ಎಪ್ಪತ್ತೈದು ಸಾವಿರ ರುಪಾಯಿ ಲಂಚಕ್ಕೆ ಬೇಡಿಕೆ.. ತಿಪ್ಪೇಸ್ವಾಮಿ ಎಂಬುವರೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಪ್ರಥಮ ದರ್ಜೆ ಸಹಾಯಕ ಎಂದು ಗುರುತಿಸಲಾಗಿದೆ. ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ವಸಂತಕುಮಾರ, ಫೀಲ್ಡ್ ಆಫೀಸರ ದಾಮೋದರ ಹಾಗೂ ಕಚೇರಿಯ ಮತ್ತೋರ್ವ ಪ್ರಥಮ ದರ್ಜೆ ಸಹಾಯಕ ರಘು ಊರ್ಫ್ ರಾಘವೇಂದ್ರ ಸೇರಿಕೊಂಡು 75 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಪದ್ಮಾವತಿಪುರದ‌ ಸಿದ್ದಪ್ಪ ಲಮಾಣಿ ಎಂಬ ಫಲಾನುಭವಿಗೆ ನಿಗಮದ‌ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ನಾಲ್ವರು ಸೇರಿಕೊಂಡು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ 25 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಪ್ರಥಮ ದರ್ಜೆ ಸಹಾಯಕ ತಿಪ್ಪೇಸ್ವಾಮಿ ಮಾತ್ರ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳ ಕೈಗೆ ತಗ್ಲಾಕ್ಕೊಂಡಿದ್ದಾನೆ. ಉಳಿದ ಮೂವರು ಎಸಿಬಿ ದಾಳಿಯ ವೇಳೆ ಕಚೇರಿಯಲ್ಲಿ ಇರಲಿಲ್ಲ. ಬಂಧಿತ ಓರ್ವ ಎಫ್ ಡಿಎ ಸೇರಿ ನಾಲ್ವರ ವಿರುದ್ಧ ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸಿಬಿ ಡಿವೈಎಸ್ಪಿ ಸೋಮಲಿಂಗ ಕುಂಬಾರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಎಸಿಬಿ ಸಿಪಿಐ ಶ್ರೀಶೈಲ ಚೌಗಲಾ ಹಾಗೂ ಎಸಿಬಿ ಪೊಲೀಸ್ ಠಾಣೆಯ ಸಿಬ್ಬಂದಿ ಭಾಗವಹಿಸಿದ್ದರು. -ಪ್ರಭುಗೌಡ.ಎನ್.ಪಾಟೀಲ

Published On - 6:56 am, Sat, 12 September 20

ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ಶಿರಸಿ: ಐತಿಹಾಸಿಕ ಬಂಗಾರೇಶ್ವರ ದೇವಾಲಯ ಸಂಪೂರ್ಣ ಜಲಾವೃತ
ಶಿರಸಿ: ಐತಿಹಾಸಿಕ ಬಂಗಾರೇಶ್ವರ ದೇವಾಲಯ ಸಂಪೂರ್ಣ ಜಲಾವೃತ
ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ: ಯತೀಂದ್ರ
ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ: ಯತೀಂದ್ರ