AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲೂ ಭೂ‘ಸ್ವಾಹಾ’ ಅಧಿಕಾರಿಯಾಗಿದ್ದ ಡಾ. ಸುಧಾ!

ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ ಮೇಲೆ ಎಸಿಬಿ ದಾಳಿ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದ ಹಲವೆಡೆ ಡಾ.ಸುಧಾ ಅವರ ಆಸ್ತಿಯ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳಿಗೆ ಶಾಕ್​ ಮೇಲೆ ಶಾಕ್​ ಎದುರಾಗುತ್ತಿದೆ. ಹೊದಲೆಲ್ಲಾ ಅಕ್ರಮ ಆಸ್ತಿ ಮಾಡೋದೆ ಕಾಯಕ, ಗಂಡನ ಹೆಸರಿನಲ್ಲಿ ಹತ್ತಾರು ಉದ್ಯಮ: ಉಡುಪಿಯಲ್ಲಿರುವ ಡಾ. ಸುಧಾ ಪತಿ ಮನೆಯಲ್ಲೂ ಪರಿಶೀಲನೆ ನಡೆಸಿರುವ ಎಸಿಬಿ ಅಧಿಕಾರಿಗಳಿಗೆ ಅಪಾರ ಪ್ರಮಾಣದ ಆಸ್ತಿಯ ದಾಖಲೆಗಳು ಪತ್ತೆಯಾಗಿವೆ. ಕುಂದಾಪುರದ ಕಂದಾವರದಲ್ಲಿ ಡಾ.ಸುಧಾ ಅವರಿಗೆ ₹1.5 ಕೋಟಿ ಬೆಲೆಯ ಆಸ್ತಿ […]

ಉಡುಪಿಯಲ್ಲೂ ಭೂ‘ಸ್ವಾಹಾ’ ಅಧಿಕಾರಿಯಾಗಿದ್ದ ಡಾ. ಸುಧಾ!
ಪೃಥ್ವಿಶಂಕರ
|

Updated on:Nov 07, 2020 | 1:56 PM

Share

ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ ಮೇಲೆ ಎಸಿಬಿ ದಾಳಿ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದ ಹಲವೆಡೆ ಡಾ.ಸುಧಾ ಅವರ ಆಸ್ತಿಯ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳಿಗೆ ಶಾಕ್​ ಮೇಲೆ ಶಾಕ್​ ಎದುರಾಗುತ್ತಿದೆ.

ಹೊದಲೆಲ್ಲಾ ಅಕ್ರಮ ಆಸ್ತಿ ಮಾಡೋದೆ ಕಾಯಕ, ಗಂಡನ ಹೆಸರಿನಲ್ಲಿ ಹತ್ತಾರು ಉದ್ಯಮ:

ಉಡುಪಿಯಲ್ಲಿರುವ ಡಾ. ಸುಧಾ ಪತಿ ಮನೆಯಲ್ಲೂ ಪರಿಶೀಲನೆ ನಡೆಸಿರುವ ಎಸಿಬಿ ಅಧಿಕಾರಿಗಳಿಗೆ ಅಪಾರ ಪ್ರಮಾಣದ ಆಸ್ತಿಯ ದಾಖಲೆಗಳು ಪತ್ತೆಯಾಗಿವೆ. ಕುಂದಾಪುರದ ಕಂದಾವರದಲ್ಲಿ ಡಾ.ಸುಧಾ ಅವರಿಗೆ ₹1.5 ಕೋಟಿ ಬೆಲೆಯ ಆಸ್ತಿ ಇದೆ ಎಂಬುದು ತಿಳಿದುಬಂದಿದೆ. ಬ್ರಹ್ಮಾವರದ ವಡ್ಡರ್ಸೆಯಲ್ಲಿರುವ ಸೈಟ್ ಬೆಲೆಯೇ 82 ಲಕ್ಷ ರೂ ಆಗಿದೆ.

ಡಾ.ಸುಧಾ ಹೊದಲೆಲ್ಲಾ ಅಕ್ರಮವಾಗಿ ಆಸ್ತಿ ಮಾಡಿರುವುದು ಬೆಳಕಿಗೆ ಬರುತ್ತಿದ್ದು, ಈ ಮೊದಲು ಡಾ.ಸುಧಾ ಉಡುಪಿಯಲ್ಲೂ ಕೆಲಕಾಲ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಆ ವೇಳೆ ಡಾ.ಸುಧಾ ಹಲವಾರು ಕಡೆ ಹಣ ಹೂಡಿಕೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಜೊತೆಗೆ ಗಂಡನ ಹೆಸರಿನಲ್ಲಿ ಹತ್ತಾರು ಉದ್ಯಮ ಹೊಂದಿರುವುದು ಬಹಿರಂಗವಾಗಿದೆ.

ಬೆಂಗಳೂರಿನ ಎಸಿಬಿ ಅಧಿಕಾರಿ ಬಾಲಕೃಷ್ಣ ನೇತೃತ್ವದಲ್ಲಿ ಉಡುಪಿಯಲ್ಲಿ ದಾಳಿ ನಡೆಸಲಾಗಿದ್ದು, ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನಲ್ಲಿರುವ ಚಾಂತಾರಿನ ದೇವದಾಸ್ ಶೆಟ್ಟಿ ಎಂಬವರ ಮನೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ದೇವದಾಸ್ ಶೆಟ್ಟಿ ಡಾ. ಸುಧಾ ಪತಿಯ ಗೆಳೆಯ ಎಂಬುದು ತಿಳಿದುಬಂದಿದೆ. ಈ ತನಿಖೆಗೆ ಉಡುಪಿ ಎಸಿಬಿ ಅಧಿಕಾರಿ ಸತೀಶ್, ಚಂದ್ರಕಲಾ ಸಾಥ್ ನೀಡಿದ್ದಾರೆ.

Published On - 1:54 pm, Sat, 7 November 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!