AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಮಸೂರಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಪತ್ತೆ ಆರೋಪ; ಸೂಪರ್ ಮಾರ್ಕೆಟ್ ಎದುರು ಗ್ರಾಹಕರ ಧರಣಿ

ಈ ಕುರಿತು ಟಿವಿ9 ಕನ್ನಡ ಡಿಜಿಟಲ್ ಪ್ರತಿನಿಧಿಯ ಜತೆ ಮಾತನಾಡಿದ ಮಂಡ್ಯದ ಗಾಂಧಿನಗರ ನಿವಾಸಿ ಗೋಪಾಲ್, ಖಾಸಗಿ ಸೂಪರ್​ಮಾರ್ಕೆಟ್​ನಿಂದ ಸೋನಾಮಸೂರಿ ಅಕ್ಕಿ ಖರೀದಿಸಿದ್ದೆವು. ಆ ಅಕ್ಕಿಯಿಂದ 3 ದಿನ ಅಡುಗೆ ಮಾಡಿದಾಗ ಮಕ್ಕಳಿಗೆ ಹೊಟ್ಟೆನೋವು ಬಂದಿದೆ ಎಂದು ದುರಿದರು.

ಸೋನಾಮಸೂರಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಪತ್ತೆ ಆರೋಪ; ಸೂಪರ್ ಮಾರ್ಕೆಟ್ ಎದುರು ಗ್ರಾಹಕರ ಧರಣಿ
ಪೊಲೀಸರಿಂದ ಪರಿಶೀಲನೆ
TV9 Web
| Edited By: |

Updated on:Aug 10, 2021 | 6:40 PM

Share

ಮಂಡ್ಯ: ಹೊಸಹಳ್ಳಿ ಸರ್ಕಲ್‌ನಲ್ಲಿರುವ ಖಾಸಗಿ ಸೂಪರ್​ ಮಾರ್ಕೆಟ್ ಒಂದರಲ್ಲಿ ಸೋನಾಮಸೂರಿ ಅಕ್ಕಿ ಮೂಟೆಯಲ್ಲಿ ಪ್ಲ್ಯಾಸ್ಟಿಕ್ ಪತ್ತೆ ಆರೋಪದಡಿ ಸೂಪರ್​ಮಾರ್ಕೆಟ್ ಮಾಲೀಕರ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಗ್ರಾಹಕರಿಗೆ ಮೋಸ ಮಾಡಲು ಹೀಗೆ ಮಾಡ್ತಿದ್ದೀರಾ? ನಾವೇನು ನಿಮಗೆ ಹಣ ಕೊಡಲ್ವಾ? ಎಂದು ಜನರು ಸೂಪರ್ ಮಾರ್ಕೆಟ್ ಮಾಲೀಕರನ್ನು ತರಾಟೆಗೆ ತೆಗೆದುಕೊಂಡು ಸೂಪರ್​ಮಾರ್ಕೆಟ್ ಬಾಗಿಲು ಹಾಕುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಪೂರ್ವ ಸ್ಟೇಶನ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಟಿವಿ9 ಕನ್ನಡ ಡಿಜಿಟಲ್ ಪ್ರತಿನಿಧಿಯ ಜತೆ ಮಾತನಾಡಿದ ಮಂಡ್ಯದ ಗಾಂಧಿನಗರ ನಿವಾಸಿ ಗೋಪಾಲ್, ಖಾಸಗಿ ಸೂಪರ್​ಮಾರ್ಕೆಟ್​ನಿಂದ ಸೋನಾಮಸೂರಿ ಅಕ್ಕಿ ಖರೀದಿಸಿದ್ದೆವು. ಆ ಅಕ್ಕಿಯಿಂದ 3 ದಿನ ಅಡುಗೆ ಮಾಡಿದಾಗ ಮಕ್ಕಳಿಗೆ ಹೊಟ್ಟೆನೋವು ಬಂದಿದೆ.  ನಂತರ ಅಕ್ಕಿ ಮತ್ತು ಅನ್ನವನ್ನು ಪರಿಶೀಲಿಸಿದಾಗ ಅದರಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಇರುವುದು ಕಂಡುಬಂತು’ ಎಂದು ಆರೋಪಿಸಿದರು.

ಈ ಕುರಿತು ಟಿವಿ9 ಕನ್ನಡ ಡಿಜಿಟಲ್ ಪ್ರತಿನಿಧಿ ಬಳಿ ಖಾಸಗಿ ಸೂಪರ್​ಮಾರ್ಕೆಟ್ ಮ್ಯಾನೇಜರ್ ಮೋಹನ್  ಮಾತನಾಡಿ, ‘ನಾವು ಗುಣಮಟ್ಟದ ವಸ್ತುಗಳನ್ನು ಪೂರೈಕೆ ಮಾಡುತಿದ್ದೇವೆ. ಎಲ್ಲೋ ಒಂದೆರಡರಲ್ಲಿ ವ್ಯತ್ಯಾಸ ಆಗಿರಬಹುದು. ಆದರೆ ಅದನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಉತ್ತಮ ಸೇವೆ ನೀಡುತ್ತೇವೆ’ ಎಂದರು.

ಇದನ್ನೂ ಓದಿ: 

ನಮ್ಮ ಎಂಪಿಗೆ ಮಂಡ್ಯ ಸಂಸ್ಕೃತಿ ಗೊತ್ತಿಲ್ಲ; ಎಲ್ರಿಗೂ ತೊಂದರೆ ಕೊಟ್ಟು, ಜಿಲ್ಲಾ ವ್ಯವಸ್ಥೆ ಅಲ್ಲೋಲಕಲ್ಲೋಲ ಮಾಡಿದ್ದಾರೆ: ಶಾಸಕ ರವೀಂದ್ರ

ಮಂಡ್ಯ: ಅಕ್ರಮ ಕಲ್ಲು ಗಣಿಗಾರಿಕೆ ನಿಯಂತ್ರಣಕ್ಕೆ ಕ್ರಮ; 11 ಕಲ್ಲು ಗಣಿ ಗುತ್ತಿಗೆಗಳ ರದ್ದು, 11 ಹೊಸ ಚೆಕ್‌ಪೋಸ್ಟ್ ಸ್ಥಾಪನೆ

(Accused of finding Plastic in Sonamasuri Rice Customers who put in the supermarket door)

Published On - 6:13 pm, Tue, 10 August 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್