Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಮಸೂರಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಪತ್ತೆ ಆರೋಪ; ಸೂಪರ್ ಮಾರ್ಕೆಟ್ ಎದುರು ಗ್ರಾಹಕರ ಧರಣಿ

ಈ ಕುರಿತು ಟಿವಿ9 ಕನ್ನಡ ಡಿಜಿಟಲ್ ಪ್ರತಿನಿಧಿಯ ಜತೆ ಮಾತನಾಡಿದ ಮಂಡ್ಯದ ಗಾಂಧಿನಗರ ನಿವಾಸಿ ಗೋಪಾಲ್, ಖಾಸಗಿ ಸೂಪರ್​ಮಾರ್ಕೆಟ್​ನಿಂದ ಸೋನಾಮಸೂರಿ ಅಕ್ಕಿ ಖರೀದಿಸಿದ್ದೆವು. ಆ ಅಕ್ಕಿಯಿಂದ 3 ದಿನ ಅಡುಗೆ ಮಾಡಿದಾಗ ಮಕ್ಕಳಿಗೆ ಹೊಟ್ಟೆನೋವು ಬಂದಿದೆ ಎಂದು ದುರಿದರು.

ಸೋನಾಮಸೂರಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಪತ್ತೆ ಆರೋಪ; ಸೂಪರ್ ಮಾರ್ಕೆಟ್ ಎದುರು ಗ್ರಾಹಕರ ಧರಣಿ
ಪೊಲೀಸರಿಂದ ಪರಿಶೀಲನೆ
Follow us
TV9 Web
| Updated By: guruganesh bhat

Updated on:Aug 10, 2021 | 6:40 PM

ಮಂಡ್ಯ: ಹೊಸಹಳ್ಳಿ ಸರ್ಕಲ್‌ನಲ್ಲಿರುವ ಖಾಸಗಿ ಸೂಪರ್​ ಮಾರ್ಕೆಟ್ ಒಂದರಲ್ಲಿ ಸೋನಾಮಸೂರಿ ಅಕ್ಕಿ ಮೂಟೆಯಲ್ಲಿ ಪ್ಲ್ಯಾಸ್ಟಿಕ್ ಪತ್ತೆ ಆರೋಪದಡಿ ಸೂಪರ್​ಮಾರ್ಕೆಟ್ ಮಾಲೀಕರ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಗ್ರಾಹಕರಿಗೆ ಮೋಸ ಮಾಡಲು ಹೀಗೆ ಮಾಡ್ತಿದ್ದೀರಾ? ನಾವೇನು ನಿಮಗೆ ಹಣ ಕೊಡಲ್ವಾ? ಎಂದು ಜನರು ಸೂಪರ್ ಮಾರ್ಕೆಟ್ ಮಾಲೀಕರನ್ನು ತರಾಟೆಗೆ ತೆಗೆದುಕೊಂಡು ಸೂಪರ್​ಮಾರ್ಕೆಟ್ ಬಾಗಿಲು ಹಾಕುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಪೂರ್ವ ಸ್ಟೇಶನ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಟಿವಿ9 ಕನ್ನಡ ಡಿಜಿಟಲ್ ಪ್ರತಿನಿಧಿಯ ಜತೆ ಮಾತನಾಡಿದ ಮಂಡ್ಯದ ಗಾಂಧಿನಗರ ನಿವಾಸಿ ಗೋಪಾಲ್, ಖಾಸಗಿ ಸೂಪರ್​ಮಾರ್ಕೆಟ್​ನಿಂದ ಸೋನಾಮಸೂರಿ ಅಕ್ಕಿ ಖರೀದಿಸಿದ್ದೆವು. ಆ ಅಕ್ಕಿಯಿಂದ 3 ದಿನ ಅಡುಗೆ ಮಾಡಿದಾಗ ಮಕ್ಕಳಿಗೆ ಹೊಟ್ಟೆನೋವು ಬಂದಿದೆ.  ನಂತರ ಅಕ್ಕಿ ಮತ್ತು ಅನ್ನವನ್ನು ಪರಿಶೀಲಿಸಿದಾಗ ಅದರಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಇರುವುದು ಕಂಡುಬಂತು’ ಎಂದು ಆರೋಪಿಸಿದರು.

ಈ ಕುರಿತು ಟಿವಿ9 ಕನ್ನಡ ಡಿಜಿಟಲ್ ಪ್ರತಿನಿಧಿ ಬಳಿ ಖಾಸಗಿ ಸೂಪರ್​ಮಾರ್ಕೆಟ್ ಮ್ಯಾನೇಜರ್ ಮೋಹನ್  ಮಾತನಾಡಿ, ‘ನಾವು ಗುಣಮಟ್ಟದ ವಸ್ತುಗಳನ್ನು ಪೂರೈಕೆ ಮಾಡುತಿದ್ದೇವೆ. ಎಲ್ಲೋ ಒಂದೆರಡರಲ್ಲಿ ವ್ಯತ್ಯಾಸ ಆಗಿರಬಹುದು. ಆದರೆ ಅದನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಉತ್ತಮ ಸೇವೆ ನೀಡುತ್ತೇವೆ’ ಎಂದರು.

ಇದನ್ನೂ ಓದಿ: 

ನಮ್ಮ ಎಂಪಿಗೆ ಮಂಡ್ಯ ಸಂಸ್ಕೃತಿ ಗೊತ್ತಿಲ್ಲ; ಎಲ್ರಿಗೂ ತೊಂದರೆ ಕೊಟ್ಟು, ಜಿಲ್ಲಾ ವ್ಯವಸ್ಥೆ ಅಲ್ಲೋಲಕಲ್ಲೋಲ ಮಾಡಿದ್ದಾರೆ: ಶಾಸಕ ರವೀಂದ್ರ

ಮಂಡ್ಯ: ಅಕ್ರಮ ಕಲ್ಲು ಗಣಿಗಾರಿಕೆ ನಿಯಂತ್ರಣಕ್ಕೆ ಕ್ರಮ; 11 ಕಲ್ಲು ಗಣಿ ಗುತ್ತಿಗೆಗಳ ರದ್ದು, 11 ಹೊಸ ಚೆಕ್‌ಪೋಸ್ಟ್ ಸ್ಥಾಪನೆ

(Accused of finding Plastic in Sonamasuri Rice Customers who put in the supermarket door)

Published On - 6:13 pm, Tue, 10 August 21

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್