AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಕಲ್ಯಾಣ್ ದಾಂಪತ್ಯ ಕಲಹ: 5 ಕೋಟಿ ಆಸ್ತಿ ನುಂಗಿದ್ದ ಶಿವಾನಂದ ವಾಲಿ, ತನಿಖೆ ವೇಳೆ ಮಾಹಿತಿ ಬಹಿರಂಗ

ಬೆಳಗಾವಿ: ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ‌ ಶಿವಾನಂದ ವಿಚಾರಣೆ ವೇಳೆ ಹಲವು ಮಹತ್ವದ ಮಾಹಿತಿಗಳು ಲಭ್ಯವಾಗಿದೆ. ಕೆ.ಕಲ್ಯಾಣ್ ಪತ್ನಿ ಅಶ್ವಿನಿ, ಅತ್ತೆ, ಮಾವ ಹೆಸರಿನಲ್ಲಿದ್ದ ಅಪಾರ ಆಸ್ತಿಯನ್ನು ಆರೋಪಿ ಶಿವಾನಂದ ವಾಲಿ ವರ್ಗಾವಣೆ ಮಾಡಿಕೊಂಡಿದ್ದಾನೆ. ಸುಮಾರು 5 ಕೋಟಿಯಷ್ಟು ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾವಣೆ ಮಾಡಿಕೊಂಡಿದ್ದಾನಂತೆ. ಹಾಗೂ ಕೆ.ಕಲ್ಯಾಣ್‌ ಪತ್ನಿ ಅಶ್ವಿನಿ, ಅತ್ತೆ, ಮಾವ ಅಕೌಂಟ್‌ನಿಂದ 45 ಲಕ್ಷ ಹಣ ತನ್ನ ಅಕೌಂಟ್‌ಗೆ ವರ್ಗಾಯಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಅಥಣಿ, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ […]

ಕೆ.ಕಲ್ಯಾಣ್ ದಾಂಪತ್ಯ ಕಲಹ: 5 ಕೋಟಿ ಆಸ್ತಿ ನುಂಗಿದ್ದ ಶಿವಾನಂದ ವಾಲಿ, ತನಿಖೆ ವೇಳೆ ಮಾಹಿತಿ ಬಹಿರಂಗ
ಆಯೇಷಾ ಬಾನು
| Edited By: |

Updated on: Oct 08, 2020 | 10:11 AM

Share

ಬೆಳಗಾವಿ: ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ‌ ಶಿವಾನಂದ ವಿಚಾರಣೆ ವೇಳೆ ಹಲವು ಮಹತ್ವದ ಮಾಹಿತಿಗಳು ಲಭ್ಯವಾಗಿದೆ. ಕೆ.ಕಲ್ಯಾಣ್ ಪತ್ನಿ ಅಶ್ವಿನಿ, ಅತ್ತೆ, ಮಾವ ಹೆಸರಿನಲ್ಲಿದ್ದ ಅಪಾರ ಆಸ್ತಿಯನ್ನು ಆರೋಪಿ ಶಿವಾನಂದ ವಾಲಿ ವರ್ಗಾವಣೆ ಮಾಡಿಕೊಂಡಿದ್ದಾನೆ.

ಸುಮಾರು 5 ಕೋಟಿಯಷ್ಟು ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾವಣೆ ಮಾಡಿಕೊಂಡಿದ್ದಾನಂತೆ. ಹಾಗೂ ಕೆ.ಕಲ್ಯಾಣ್‌ ಪತ್ನಿ ಅಶ್ವಿನಿ, ಅತ್ತೆ, ಮಾವ ಅಕೌಂಟ್‌ನಿಂದ 45 ಲಕ್ಷ ಹಣ ತನ್ನ ಅಕೌಂಟ್‌ಗೆ ವರ್ಗಾಯಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಅಥಣಿ, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಸೇರಿದಂತೆ ವಿವಿಧೆಡೆ ಇದ್ದ ಆಸ್ತಿಗಳನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾನೆ. ಅಥಣಿ ತಾಲೂಕಿನ ಶಿರಹಟ್ಟಿ ಬಳಿಯ ತೋಟ, ಅಶ್ವಿನಿಯಿಂದ ಅಪಾರ ಪ್ರಮಾಣದ ಚಿನ್ನಾಭರಣ ಸಹ ಪಡೆದುಕೊಂಡಿದ್ದಾನೆ.

ಶಿವಾನಂದ ವಾಲಿ, ಗಂಗಾ ಕುಲಕರ್ಣಿ ವಿರುದ್ಧ ಆರೋಪಿಸಿ ಕೆ.ಕಲ್ಯಾಣ್ ತನ್ನ ಪತ್ನಿ ಅಶ್ವಿನಿ, ಅತ್ತೆ, ಮಾವ ಅಪಹರಣವಾಗಿದೆ ಎಂದು ದೂರು ನೀಡಿದ್ದರು. ಕೆ.ಕಲ್ಯಾಣ್ ದೂರಿನ ಮೇರೆಗೆ ಮಾಳಮಾರುತಿ ಠಾಣೆಯಲ್ಲಿ FIR ದಾಖಲಾಗಿತ್ತು. ತನಿಖೆ ಕೈಗೊಂಡು ಆರೋಪಿ ಶಿವಾನಂದ ವಾಲಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ನಿನ್ನೆ ಹೆಚ್ಚಿನ ವಿಚಾರಣೆಗಾಗಿ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಈಗ ಮಾಳಮಾರುತಿ ಪೊಲೀಸರು ಶಿವಾನಂದ ವಾಲಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ