AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಮಾಡ್ತೀನಿ ಅನುಮತಿ ಕೊಡಿ ಎಂದ ಅದಿವಿ ಶೇಷ್​ ಮುಖ ನೋಡಿ ಭಾವುಕರಾದ ಉನ್ನಿಕೃಷ್ಣನ್ ತಾಯಿ

ಹಿಂದಿ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ ‘ಮೇಜರ್’ ಸಿನಿಮಾ... ನಿನ್ನಲ್ಲಿ ನನ್ನ ಮಗ ಕಾಣ್ತಿದ್ದಾನೆ ಎಂದು ಭಾವುಕರಾದ ಸಂದೀಪ್ ಉನ್ನಿಕೃಷ್ಣನ್ ತಾಯಿ.

ಸಿನಿಮಾ ಮಾಡ್ತೀನಿ ಅನುಮತಿ ಕೊಡಿ ಎಂದ ಅದಿವಿ ಶೇಷ್​ ಮುಖ ನೋಡಿ ಭಾವುಕರಾದ ಉನ್ನಿಕೃಷ್ಣನ್ ತಾಯಿ
ಮೇಜರ್ ಸಂದೀಪ್ ಉನ್ನಿಕೃಷ್ಣನ್ ಮತ್ತು ಅದಿವಿ ಶೇಷ್ ನಡುವಿನ ಹೋಲಿಕೆ
Skanda
| Edited By: |

Updated on: Nov 27, 2020 | 4:56 PM

Share

ಹನ್ನೆರೆಡು ವರ್ಷಗಳ ಹಿಂದೆ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ವೀರಮರಣವನ್ನಪ್ಪಿದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಕುರಿತಾದ ‘ಮೇಜರ್’ ಚಿತ್ರ ತೆರೆಯ ಮೇಲೆ ಬರಲು ಸಿದ್ಧವಾಗುತ್ತಿದೆ. ಹಿಂದಿ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ತೆರೆಕಾಣಲಿರುವ ಈ ಚಿತ್ರದಲ್ಲಿ ತೆಲುಗಿನ ಜನಪ್ರಿಯ ನಟ ಅದಿವಿ ಶೇಷ್ ಬಣ್ಣ ಹಚ್ಚಲಿದ್ದು ಮೇಜರ್ ಸಂದೀಪ್ ಉನ್ನಿಕೃಷ್ಣನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮುಂಬೈ ಮೇಲೆ ಉಗ್ರರ ದಾಳಿಯಾದ ಸಂದರ್ಭದಲ್ಲಿ ಅದಿವಿ ಶೇಷ್ ಅಮೆರಿಕಾದಲ್ಲಿ ಇದ್ದರಂತೆ. ಅಂದಿನ ತಮ್ಮ ತೊಳಲಾಟವನ್ನು ಹಂಚಿಕೊಂಡ ಅವರು, ಮೇಜರ್ ಉನ್ನಿ ಕೃಷ್ಣನ್ ಹುತಾತ್ಮರಾದ ಸುದ್ದಿ ಕೇಳಿ ಮನಸ್ಸು ಭಾರವಾಗಿತ್ತು. ಅವರ ಭಾವಚಿತ್ರವನ್ನು ನೋಡಿದಾಗಲಂತೂ ನನಗೆ ನನ್ನ ಹಿರಿಯಣ್ಣನನ್ನು ಕಳೆದುಕೊಂಡಂತೆ ಸಂಕಟವಾಗಿತ್ತು. ಅದಾದ ಮೇಲೆ ಉನ್ನೀಕೃಷ್ಣನ್ ಕುರಿತು ಹೆಚ್ಚು ತಿಳಿದುಕೊಳ್ಳುತ್ತಾ ಹೋದಂತೆ ಅವರ ಕುರಿತು ಸಿನಿಮಾ ಮಾಡಬೇಕೆಂಬ ಆಸೆ ಮೊಳಕೆಯೊಡೆದಿತ್ತು ಎಂದು ಹೇಳಿದ್ದಾರೆ.

ಇಬ್ಬರ ನಡುವಿನ ಸಾಮ್ಯತೆ

ಎರಡು ವರ್ಷಗಳ ಹಿಂದೆ ಸಿನಿಮಾ ಮಾಡಲೇಬೇಕು ಎಂದು ನಿರ್ಧರಿಸಿದಾಗ ಅದಿವಿ ಶೇಷ್​ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಮನೆಯವರನ್ನು ಹಲವು ಬಾರಿ ಭೇಟಿ ಮಾಡಿದ್ದರಂತೆ.

ಆದರೆ, ಅನೇಕ ಜನ ತಾವು ಸಿನಿಮಾ ಮಾಡುವುದಾಗಿ ಮುಂದೆ ಬಂದಾಗ ಅದಿವಿ ಶೇಷ್​ ಧೃಡ ನಿರ್ಧಾರ ಮಾಡಿ ಸಂದೀಪ್ ಉನ್ನಿಕೃಷ್ಣನ್ ಅವರ ಪೋಷಕರ ಬಳಿ ಸಿನಿಮಾ ಆಗಲಿ, ಆಗದೇ ಇರಲಿ ನಿಮ್ಮನ್ನು ಜೀವನ ಪೂರ್ತಿ ನನ್ನ ಪೋಷಕರಂತೆಯೇ ನೋಡುತ್ತೇನೆ. ಇದೊಂದು ಅವಕಾಶ ನೀಡಿ ಎಂದು ಕೇಳಿಕೊಂಡರಂತೆ. ಕೊನೆಗೆ ಐದಾರು ಬಾರಿ ಕೇಳಿದ ನಂತರ ಅವರಿಂದ ಅನುಮತಿ ಸಿಕ್ಕಿತಂತೆ.

ಈ ಕುರಿತು ಮಾತನಾಡುವಾಗ ಭಾವುಕ ಸಂಗತಿಯೊಂದನ್ನು ಹಂಚಿಕೊಂಡ ಅದಿವಿ, ಉನ್ನಿಕೃಷ್ಣನ್ ಅವರ ತಾಯಿ ನನ್ನನ್ನು ಅಪ್ಪಿಕೊಂಡು ನಿನ್ನಲ್ಲಿ ನನ್ನ ಮಗ ಕಾಣುತ್ತಿದ್ದಾನೆ ಎಂದಿದ್ದರು. ಅದನ್ನು ನಾನು ಜೀವನಪೂರ್ತಿ ಮರೆಯಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್