AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಮಾಡ್ತೀನಿ ಅನುಮತಿ ಕೊಡಿ ಎಂದ ಅದಿವಿ ಶೇಷ್​ ಮುಖ ನೋಡಿ ಭಾವುಕರಾದ ಉನ್ನಿಕೃಷ್ಣನ್ ತಾಯಿ

ಹಿಂದಿ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ ‘ಮೇಜರ್’ ಸಿನಿಮಾ... ನಿನ್ನಲ್ಲಿ ನನ್ನ ಮಗ ಕಾಣ್ತಿದ್ದಾನೆ ಎಂದು ಭಾವುಕರಾದ ಸಂದೀಪ್ ಉನ್ನಿಕೃಷ್ಣನ್ ತಾಯಿ.

ಸಿನಿಮಾ ಮಾಡ್ತೀನಿ ಅನುಮತಿ ಕೊಡಿ ಎಂದ ಅದಿವಿ ಶೇಷ್​ ಮುಖ ನೋಡಿ ಭಾವುಕರಾದ ಉನ್ನಿಕೃಷ್ಣನ್ ತಾಯಿ
ಮೇಜರ್ ಸಂದೀಪ್ ಉನ್ನಿಕೃಷ್ಣನ್ ಮತ್ತು ಅದಿವಿ ಶೇಷ್ ನಡುವಿನ ಹೋಲಿಕೆ
Skanda
| Edited By: |

Updated on: Nov 27, 2020 | 4:56 PM

Share

ಹನ್ನೆರೆಡು ವರ್ಷಗಳ ಹಿಂದೆ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ವೀರಮರಣವನ್ನಪ್ಪಿದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಕುರಿತಾದ ‘ಮೇಜರ್’ ಚಿತ್ರ ತೆರೆಯ ಮೇಲೆ ಬರಲು ಸಿದ್ಧವಾಗುತ್ತಿದೆ. ಹಿಂದಿ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ತೆರೆಕಾಣಲಿರುವ ಈ ಚಿತ್ರದಲ್ಲಿ ತೆಲುಗಿನ ಜನಪ್ರಿಯ ನಟ ಅದಿವಿ ಶೇಷ್ ಬಣ್ಣ ಹಚ್ಚಲಿದ್ದು ಮೇಜರ್ ಸಂದೀಪ್ ಉನ್ನಿಕೃಷ್ಣನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮುಂಬೈ ಮೇಲೆ ಉಗ್ರರ ದಾಳಿಯಾದ ಸಂದರ್ಭದಲ್ಲಿ ಅದಿವಿ ಶೇಷ್ ಅಮೆರಿಕಾದಲ್ಲಿ ಇದ್ದರಂತೆ. ಅಂದಿನ ತಮ್ಮ ತೊಳಲಾಟವನ್ನು ಹಂಚಿಕೊಂಡ ಅವರು, ಮೇಜರ್ ಉನ್ನಿ ಕೃಷ್ಣನ್ ಹುತಾತ್ಮರಾದ ಸುದ್ದಿ ಕೇಳಿ ಮನಸ್ಸು ಭಾರವಾಗಿತ್ತು. ಅವರ ಭಾವಚಿತ್ರವನ್ನು ನೋಡಿದಾಗಲಂತೂ ನನಗೆ ನನ್ನ ಹಿರಿಯಣ್ಣನನ್ನು ಕಳೆದುಕೊಂಡಂತೆ ಸಂಕಟವಾಗಿತ್ತು. ಅದಾದ ಮೇಲೆ ಉನ್ನೀಕೃಷ್ಣನ್ ಕುರಿತು ಹೆಚ್ಚು ತಿಳಿದುಕೊಳ್ಳುತ್ತಾ ಹೋದಂತೆ ಅವರ ಕುರಿತು ಸಿನಿಮಾ ಮಾಡಬೇಕೆಂಬ ಆಸೆ ಮೊಳಕೆಯೊಡೆದಿತ್ತು ಎಂದು ಹೇಳಿದ್ದಾರೆ.

ಇಬ್ಬರ ನಡುವಿನ ಸಾಮ್ಯತೆ

ಎರಡು ವರ್ಷಗಳ ಹಿಂದೆ ಸಿನಿಮಾ ಮಾಡಲೇಬೇಕು ಎಂದು ನಿರ್ಧರಿಸಿದಾಗ ಅದಿವಿ ಶೇಷ್​ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಮನೆಯವರನ್ನು ಹಲವು ಬಾರಿ ಭೇಟಿ ಮಾಡಿದ್ದರಂತೆ.

ಆದರೆ, ಅನೇಕ ಜನ ತಾವು ಸಿನಿಮಾ ಮಾಡುವುದಾಗಿ ಮುಂದೆ ಬಂದಾಗ ಅದಿವಿ ಶೇಷ್​ ಧೃಡ ನಿರ್ಧಾರ ಮಾಡಿ ಸಂದೀಪ್ ಉನ್ನಿಕೃಷ್ಣನ್ ಅವರ ಪೋಷಕರ ಬಳಿ ಸಿನಿಮಾ ಆಗಲಿ, ಆಗದೇ ಇರಲಿ ನಿಮ್ಮನ್ನು ಜೀವನ ಪೂರ್ತಿ ನನ್ನ ಪೋಷಕರಂತೆಯೇ ನೋಡುತ್ತೇನೆ. ಇದೊಂದು ಅವಕಾಶ ನೀಡಿ ಎಂದು ಕೇಳಿಕೊಂಡರಂತೆ. ಕೊನೆಗೆ ಐದಾರು ಬಾರಿ ಕೇಳಿದ ನಂತರ ಅವರಿಂದ ಅನುಮತಿ ಸಿಕ್ಕಿತಂತೆ.

ಈ ಕುರಿತು ಮಾತನಾಡುವಾಗ ಭಾವುಕ ಸಂಗತಿಯೊಂದನ್ನು ಹಂಚಿಕೊಂಡ ಅದಿವಿ, ಉನ್ನಿಕೃಷ್ಣನ್ ಅವರ ತಾಯಿ ನನ್ನನ್ನು ಅಪ್ಪಿಕೊಂಡು ನಿನ್ನಲ್ಲಿ ನನ್ನ ಮಗ ಕಾಣುತ್ತಿದ್ದಾನೆ ಎಂದಿದ್ದರು. ಅದನ್ನು ನಾನು ಜೀವನಪೂರ್ತಿ ಮರೆಯಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ