AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಮಾಡ್ತೀನಿ ಅನುಮತಿ ಕೊಡಿ ಎಂದ ಅದಿವಿ ಶೇಷ್​ ಮುಖ ನೋಡಿ ಭಾವುಕರಾದ ಉನ್ನಿಕೃಷ್ಣನ್ ತಾಯಿ

ಹಿಂದಿ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ ‘ಮೇಜರ್’ ಸಿನಿಮಾ... ನಿನ್ನಲ್ಲಿ ನನ್ನ ಮಗ ಕಾಣ್ತಿದ್ದಾನೆ ಎಂದು ಭಾವುಕರಾದ ಸಂದೀಪ್ ಉನ್ನಿಕೃಷ್ಣನ್ ತಾಯಿ.

ಸಿನಿಮಾ ಮಾಡ್ತೀನಿ ಅನುಮತಿ ಕೊಡಿ ಎಂದ ಅದಿವಿ ಶೇಷ್​ ಮುಖ ನೋಡಿ ಭಾವುಕರಾದ ಉನ್ನಿಕೃಷ್ಣನ್ ತಾಯಿ
ಮೇಜರ್ ಸಂದೀಪ್ ಉನ್ನಿಕೃಷ್ಣನ್ ಮತ್ತು ಅದಿವಿ ಶೇಷ್ ನಡುವಿನ ಹೋಲಿಕೆ
Skanda
| Edited By: |

Updated on: Nov 27, 2020 | 4:56 PM

Share

ಹನ್ನೆರೆಡು ವರ್ಷಗಳ ಹಿಂದೆ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ವೀರಮರಣವನ್ನಪ್ಪಿದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಕುರಿತಾದ ‘ಮೇಜರ್’ ಚಿತ್ರ ತೆರೆಯ ಮೇಲೆ ಬರಲು ಸಿದ್ಧವಾಗುತ್ತಿದೆ. ಹಿಂದಿ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ತೆರೆಕಾಣಲಿರುವ ಈ ಚಿತ್ರದಲ್ಲಿ ತೆಲುಗಿನ ಜನಪ್ರಿಯ ನಟ ಅದಿವಿ ಶೇಷ್ ಬಣ್ಣ ಹಚ್ಚಲಿದ್ದು ಮೇಜರ್ ಸಂದೀಪ್ ಉನ್ನಿಕೃಷ್ಣನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮುಂಬೈ ಮೇಲೆ ಉಗ್ರರ ದಾಳಿಯಾದ ಸಂದರ್ಭದಲ್ಲಿ ಅದಿವಿ ಶೇಷ್ ಅಮೆರಿಕಾದಲ್ಲಿ ಇದ್ದರಂತೆ. ಅಂದಿನ ತಮ್ಮ ತೊಳಲಾಟವನ್ನು ಹಂಚಿಕೊಂಡ ಅವರು, ಮೇಜರ್ ಉನ್ನಿ ಕೃಷ್ಣನ್ ಹುತಾತ್ಮರಾದ ಸುದ್ದಿ ಕೇಳಿ ಮನಸ್ಸು ಭಾರವಾಗಿತ್ತು. ಅವರ ಭಾವಚಿತ್ರವನ್ನು ನೋಡಿದಾಗಲಂತೂ ನನಗೆ ನನ್ನ ಹಿರಿಯಣ್ಣನನ್ನು ಕಳೆದುಕೊಂಡಂತೆ ಸಂಕಟವಾಗಿತ್ತು. ಅದಾದ ಮೇಲೆ ಉನ್ನೀಕೃಷ್ಣನ್ ಕುರಿತು ಹೆಚ್ಚು ತಿಳಿದುಕೊಳ್ಳುತ್ತಾ ಹೋದಂತೆ ಅವರ ಕುರಿತು ಸಿನಿಮಾ ಮಾಡಬೇಕೆಂಬ ಆಸೆ ಮೊಳಕೆಯೊಡೆದಿತ್ತು ಎಂದು ಹೇಳಿದ್ದಾರೆ.

ಇಬ್ಬರ ನಡುವಿನ ಸಾಮ್ಯತೆ

ಎರಡು ವರ್ಷಗಳ ಹಿಂದೆ ಸಿನಿಮಾ ಮಾಡಲೇಬೇಕು ಎಂದು ನಿರ್ಧರಿಸಿದಾಗ ಅದಿವಿ ಶೇಷ್​ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಮನೆಯವರನ್ನು ಹಲವು ಬಾರಿ ಭೇಟಿ ಮಾಡಿದ್ದರಂತೆ.

ಆದರೆ, ಅನೇಕ ಜನ ತಾವು ಸಿನಿಮಾ ಮಾಡುವುದಾಗಿ ಮುಂದೆ ಬಂದಾಗ ಅದಿವಿ ಶೇಷ್​ ಧೃಡ ನಿರ್ಧಾರ ಮಾಡಿ ಸಂದೀಪ್ ಉನ್ನಿಕೃಷ್ಣನ್ ಅವರ ಪೋಷಕರ ಬಳಿ ಸಿನಿಮಾ ಆಗಲಿ, ಆಗದೇ ಇರಲಿ ನಿಮ್ಮನ್ನು ಜೀವನ ಪೂರ್ತಿ ನನ್ನ ಪೋಷಕರಂತೆಯೇ ನೋಡುತ್ತೇನೆ. ಇದೊಂದು ಅವಕಾಶ ನೀಡಿ ಎಂದು ಕೇಳಿಕೊಂಡರಂತೆ. ಕೊನೆಗೆ ಐದಾರು ಬಾರಿ ಕೇಳಿದ ನಂತರ ಅವರಿಂದ ಅನುಮತಿ ಸಿಕ್ಕಿತಂತೆ.

ಈ ಕುರಿತು ಮಾತನಾಡುವಾಗ ಭಾವುಕ ಸಂಗತಿಯೊಂದನ್ನು ಹಂಚಿಕೊಂಡ ಅದಿವಿ, ಉನ್ನಿಕೃಷ್ಣನ್ ಅವರ ತಾಯಿ ನನ್ನನ್ನು ಅಪ್ಪಿಕೊಂಡು ನಿನ್ನಲ್ಲಿ ನನ್ನ ಮಗ ಕಾಣುತ್ತಿದ್ದಾನೆ ಎಂದಿದ್ದರು. ಅದನ್ನು ನಾನು ಜೀವನಪೂರ್ತಿ ಮರೆಯಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

Follow Us
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ