AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಣ ನೀಡಿ: ಅಭಿಮಾನಿಗಳ ಬಳಿ ಅಕ್ಷಯ್​ ಕುಮಾರ್ ಮನವಿ

ಅಳಿಲಿನಂತೆ ನಾನೂ ಕೂಡ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನನ್ನ ಅಳಿಲು ಸೇವೆ ನೀಡುತ್ತಿದ್ದೇನೆ. ನಿಮ್ಮ ಕೈಲಾದಷ್ಟು ಹಣ ನೀಡಿ ಎಂದು ಅಭಿಮಾನಿಗಳ ಬಳಿ ಅಕ್ಷಯ್​ ಕೋರಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಣ ನೀಡಿ: ಅಭಿಮಾನಿಗಳ ಬಳಿ ಅಕ್ಷಯ್​ ಕುಮಾರ್ ಮನವಿ
ಅಕ್ಷಯ್​ ಕುಮಾರ್
ರಾಜೇಶ್ ದುಗ್ಗುಮನೆ
| Edited By: |

Updated on: Jan 17, 2021 | 7:02 PM

Share

ಮುಂಬೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಅಡಿಗಲ್ಲು ಹಾಕಿದ್ದರು. ಸದ್ಯ, ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಇತ್ತ,  ರಾಮ ಮಂದಿರ ನಿರ್ಮಾಣಕ್ಕೆ ಧನ ಸಹಾಯ ಮಾಡುವಂತೆ ನಟ ಅಕ್ಷಯ್​ ಕುಮಾರ್ ಅಭಿಮಾನಿಗಳ ಬಳಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಅಕ್ಷಯ್​ ಕುಮಾರ್​ ಟ್ವಿಟರ್​ನಲ್ಲಿ ವಿಡಿಯೋ ಒಂದನ್ನು ಮಾಡಿ ಹಾಕಿದ್ದಾರೆ. ನಿನ್ನೆ ರಾತ್ರಿ ನನ್ನ ಮಗಳಿಗೆ ಕಥೆಯೊಂದನ್ನು ಹೇಳಿದ್ದೆ ಎಂದು ಅಕ್ಷಯ್​ ಕುಮಾರ್ ಮಾತು ಆರಂಭಿಸಿದ್ದಾರೆ. ಒಂದು ಕಡೆ ವಾನರ ಸೇನೆ. ಮತ್ತೊಂದು ಕಡೆಯಲ್ಲಿ ಲಂಕೆ. ಇಬ್ಬರ ನಡುವೆ ಮಹಾ ಸಾಗರ. ವಾನರ ಸೇನೆ ದೊಡ್ಡದೊಡ್ಡ ಕಲ್ಲುಗಳನ್ನು ಎತ್ತಿಕೊಂಡು ಸಮುದ್ರಕ್ಕೆ ಹಾಕುತ್ತಿತ್ತು. ಶ್ರೀ ರಾಮ ಚಂದ್ರ ದಂಡೆಯಲ್ಲಿ ನಿಂತು ಎಲ್ಲವನ್ನೂ ನೋಡುತ್ತಿದ್ದರು. ಈ ವೇಳೆ ರಾಮನ ಕಣ್ಣಿಗೆ ಒಂದು ಅಳಿಲು ಬಿದ್ದಿತ್ತು.

ಈ ಅಳಿಲು ನೀರಿಗೆ ತೆರಳುತ್ತಿತ್ತು. ಮತ್ತೆ ದಡಕ್ಕೆ ಬಂದು ಮರಳಿನಲ್ಲಿ ಹೊರಳಾಡುತ್ತಿತ್ತು. ರಾಮ ಸೇತುವೆಗೆ ಹಾಕಿದ ಕಲ್ಲುಗಳ ಮೇಲೆ ಓಡಾಡಿ ಮರಳನ್ನು ಕೆಡವುತ್ತಿತ್ತು. ಇದರಿಂದ ಅಚ್ಚರಿಗೊಂಡ ರಾಮ, ಅಳಿಲಿನ ಬಳಿ ತೆರಳಿ ಏನು ಮಾಡುತ್ತಿದ್ದೀಯಾ ಎಂದು ಪ್ರಶ್ನೆ ಮಾಡಿದ್ದ. ಆಗ ಅಳಿಲು ತನ್ನ ಚಿಕ್ಕ ಸೇವೆಯ ಬಗ್ಗೆ ಹೇಳಿಕೊಂಡಿತ್ತು. ಅದೇ ರೀತಿ ನಾನು ಕೂಡ ಅಯೋಧ್ಯೆ ನಿರ್ಮಾಣಕ್ಕೆ ನನ್ನ ಅಳಿಲು ಸೇವೆ ನೀಡುತ್ತಿದ್ದೇನೆ. ನಿಮ್ಮ ಕೈಲಾದಷ್ಟು ಹಣ ನೀಡಿ ಎಂದು ಅಭಿಮಾನಿಗಳ ಬಳಿ ಅಕ್ಷಯ್​ ಕೋರಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ದೇಶದ 5,25,000 ಗ್ರಾಮಗಳಲ್ಲಿ ಹಣ ಸಂಗ್ರಹ ಮಾಡುವ ಕಾರ್ಯ ಆರಂಭಗೊಂಡಿದೆ. ಜನವರಿ 15ರಿಂದ ಫೆಬ್ರವರಿ 27ರ ವರೆಗೆ ಹಣ ಸಂಗ್ರಹಣೆ ಕಾರ್ಯ ನಡೆಯಲಿದೆ.

Ram Temple Construction Fund ರಾಮ ಮಂದಿರ ನಿರ್ಮಾಣ ನಿಧಿ ಅಭಿಯಾನ: RSSಗೆ ಸಾಥ್ ನೀಡಿದ ಸುಮಲತಾ

Follow Us
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?