AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಣ ನೀಡಿ: ಅಭಿಮಾನಿಗಳ ಬಳಿ ಅಕ್ಷಯ್​ ಕುಮಾರ್ ಮನವಿ

ಅಳಿಲಿನಂತೆ ನಾನೂ ಕೂಡ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನನ್ನ ಅಳಿಲು ಸೇವೆ ನೀಡುತ್ತಿದ್ದೇನೆ. ನಿಮ್ಮ ಕೈಲಾದಷ್ಟು ಹಣ ನೀಡಿ ಎಂದು ಅಭಿಮಾನಿಗಳ ಬಳಿ ಅಕ್ಷಯ್​ ಕೋರಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಣ ನೀಡಿ: ಅಭಿಮಾನಿಗಳ ಬಳಿ ಅಕ್ಷಯ್​ ಕುಮಾರ್ ಮನವಿ
ಅಕ್ಷಯ್​ ಕುಮಾರ್
ರಾಜೇಶ್ ದುಗ್ಗುಮನೆ
| Edited By: |

Updated on: Jan 17, 2021 | 7:02 PM

Share

ಮುಂಬೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಅಡಿಗಲ್ಲು ಹಾಕಿದ್ದರು. ಸದ್ಯ, ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಇತ್ತ,  ರಾಮ ಮಂದಿರ ನಿರ್ಮಾಣಕ್ಕೆ ಧನ ಸಹಾಯ ಮಾಡುವಂತೆ ನಟ ಅಕ್ಷಯ್​ ಕುಮಾರ್ ಅಭಿಮಾನಿಗಳ ಬಳಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಅಕ್ಷಯ್​ ಕುಮಾರ್​ ಟ್ವಿಟರ್​ನಲ್ಲಿ ವಿಡಿಯೋ ಒಂದನ್ನು ಮಾಡಿ ಹಾಕಿದ್ದಾರೆ. ನಿನ್ನೆ ರಾತ್ರಿ ನನ್ನ ಮಗಳಿಗೆ ಕಥೆಯೊಂದನ್ನು ಹೇಳಿದ್ದೆ ಎಂದು ಅಕ್ಷಯ್​ ಕುಮಾರ್ ಮಾತು ಆರಂಭಿಸಿದ್ದಾರೆ. ಒಂದು ಕಡೆ ವಾನರ ಸೇನೆ. ಮತ್ತೊಂದು ಕಡೆಯಲ್ಲಿ ಲಂಕೆ. ಇಬ್ಬರ ನಡುವೆ ಮಹಾ ಸಾಗರ. ವಾನರ ಸೇನೆ ದೊಡ್ಡದೊಡ್ಡ ಕಲ್ಲುಗಳನ್ನು ಎತ್ತಿಕೊಂಡು ಸಮುದ್ರಕ್ಕೆ ಹಾಕುತ್ತಿತ್ತು. ಶ್ರೀ ರಾಮ ಚಂದ್ರ ದಂಡೆಯಲ್ಲಿ ನಿಂತು ಎಲ್ಲವನ್ನೂ ನೋಡುತ್ತಿದ್ದರು. ಈ ವೇಳೆ ರಾಮನ ಕಣ್ಣಿಗೆ ಒಂದು ಅಳಿಲು ಬಿದ್ದಿತ್ತು.

ಈ ಅಳಿಲು ನೀರಿಗೆ ತೆರಳುತ್ತಿತ್ತು. ಮತ್ತೆ ದಡಕ್ಕೆ ಬಂದು ಮರಳಿನಲ್ಲಿ ಹೊರಳಾಡುತ್ತಿತ್ತು. ರಾಮ ಸೇತುವೆಗೆ ಹಾಕಿದ ಕಲ್ಲುಗಳ ಮೇಲೆ ಓಡಾಡಿ ಮರಳನ್ನು ಕೆಡವುತ್ತಿತ್ತು. ಇದರಿಂದ ಅಚ್ಚರಿಗೊಂಡ ರಾಮ, ಅಳಿಲಿನ ಬಳಿ ತೆರಳಿ ಏನು ಮಾಡುತ್ತಿದ್ದೀಯಾ ಎಂದು ಪ್ರಶ್ನೆ ಮಾಡಿದ್ದ. ಆಗ ಅಳಿಲು ತನ್ನ ಚಿಕ್ಕ ಸೇವೆಯ ಬಗ್ಗೆ ಹೇಳಿಕೊಂಡಿತ್ತು. ಅದೇ ರೀತಿ ನಾನು ಕೂಡ ಅಯೋಧ್ಯೆ ನಿರ್ಮಾಣಕ್ಕೆ ನನ್ನ ಅಳಿಲು ಸೇವೆ ನೀಡುತ್ತಿದ್ದೇನೆ. ನಿಮ್ಮ ಕೈಲಾದಷ್ಟು ಹಣ ನೀಡಿ ಎಂದು ಅಭಿಮಾನಿಗಳ ಬಳಿ ಅಕ್ಷಯ್​ ಕೋರಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ದೇಶದ 5,25,000 ಗ್ರಾಮಗಳಲ್ಲಿ ಹಣ ಸಂಗ್ರಹ ಮಾಡುವ ಕಾರ್ಯ ಆರಂಭಗೊಂಡಿದೆ. ಜನವರಿ 15ರಿಂದ ಫೆಬ್ರವರಿ 27ರ ವರೆಗೆ ಹಣ ಸಂಗ್ರಹಣೆ ಕಾರ್ಯ ನಡೆಯಲಿದೆ.

Ram Temple Construction Fund ರಾಮ ಮಂದಿರ ನಿರ್ಮಾಣ ನಿಧಿ ಅಭಿಯಾನ: RSSಗೆ ಸಾಥ್ ನೀಡಿದ ಸುಮಲತಾ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?