AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಲ್ಲ ಹೇಳಿಕೆ, ನಟ ಚೇತನ ಚೀಪ್ ಪಬ್ಲಿಸಿಟಿಗೋಸ್ಕರ ಹೇಳಿಕೆಯನ್ನು ನೀಡಿದ್ದಾರೆ: ಪೇಜಾವರ ಶ್ರೀ

ನಟ ಚೇತನ ಚೀಪ್ ಪಬ್ಲಿಸಿಟಿಗೋಸ್ಕರ ಹೇಳಿಕೆ ನೀಡುತ್ತಿದ್ದಾರೆ ಎಂದು ನಟ ಚೇತನ್ ವಿರುದ್ಧ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮದ್ದೂರಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಲ್ಲ ಹೇಳಿಕೆ, ನಟ ಚೇತನ ಚೀಪ್ ಪಬ್ಲಿಸಿಟಿಗೋಸ್ಕರ ಹೇಳಿಕೆಯನ್ನು ನೀಡಿದ್ದಾರೆ:  ಪೇಜಾವರ ಶ್ರೀ
ಪೇಜಾವರ ಶ್ರೀ
TV9 Web
| Updated By: ವಿವೇಕ ಬಿರಾದಾರ|

Updated on:Oct 22, 2022 | 7:21 PM

Share

ಮಂಡ್ಯ: ನಟ ಚೇತನ (Chetan) ಚೀಪ್ ಪಬ್ಲಿಸಿಟಿಗೋಸ್ಕರ ಹೇಳಿಕೆ ನೀಡುತ್ತಿದ್ದಾರೆ ಎಂದು ಚೇತನ್ ವಿರುದ್ಧ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ (Sri Vishwaprasanna Theertha Swamiji) ಮದ್ದೂರಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರ್ದೇಶಕ, ನಟ ರಿಷಬ್​ ಶೆಟ್ಟಿ (Rishab Shetty) ನಿರ್ದೇಶಿಸಿ, ನಟಿಸಿದ ಕಾಂತಾರ (Kantara) ಚಿತ್ರದಲ್ಲಿ ತೋರಿಸಲಾದ ಭೂತಕೋಲ ಆರಾಧನೆ (Bhootkola) ಹಿಂದೂ (Hindu) ಸಂಸ್ಕೃತಿ ಅಲ್ಲ ಎಂದು ಚಿತ್ರ ನಟ, ಚೇತನ್​​ ಹೇಳಿದ್ದರು. ಈ ಕುರಿತು ಚೇತನ್​ ವ್ಯಾಪಕ ಟೀಕೆಗೆ ಗುರಿಯಾಗಿದ್ದರು, ಜೊತೆಗೆ ರಾಜ್ಯದ ವಿವಿಧ ಪೊಲೀಸ್​ ಠಾಣೆಗಳಲ್ಲಿ ಹಿಂದೂ ಕಾರ್ಯಕರ್ತರು ದೂರು ನೀಡಿದ್ದರು.

ಚೇತನ್​ ಹೇಳಿಕೆಯನ್ನು ಖಂಡಿಸಿದ ಪೇಜಾವರ ಶ್ರೀಗಳು, ನಟ ಚೇತನ ಪ್ರಚಾರಕ್ಕಾಗಿ ಈ ರೀತಿಯಾದಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಚೀಪ್ ಪ್ರಬ್ಲಿಸಿಟಿಗೆ ನಿದರ್ಶನವಾಗಿದೆ. ಯಾವುದಕ್ಕು ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಅವರವರ ನಂಬಿಕೆ ಆಚರಣೆಗಳನ್ನು ವಿರೋಧಿಸುವುದು ತಪ್ಪು. ಅದು ಯಾವ ನೆಲೆಯಲ್ಲಿ ಮಾತನಾಡ್ತಿದ್ದಾರೊ ನನಗೆ ಅರ್ಥವಾಗುತ್ತಿಲ್ಲ. ಅವರು ನೋಡುವ ದೃಷ್ಟಿಕೋನದಲ್ಲಿ ಎಲ್ಲಾ ಅಡಗಿರುತ್ತದೆ. ಹಿಂದುತ್ವ ಹಾಗೂ ಬ್ರಾಹ್ಮಣತ್ವ ಬೇರೆ ಬೇರೆ ಅಲ್ಲ. ಹಿಂದುತ್ವ ವಿಶಾಲವಾದದ್ದು ಅದರೊಳಗೆ ಬ್ರಾಹ್ಮಣತ್ವವು ಬರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಟ ಚೇತನ ಹೇಳಿದ್ದೇನು

‘ಕಾಂತಾರ’ ಚಿತ್ರದಲ್ಲಿ ತೋರಿಸಿದ ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುವುದಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ರಿಷಬ್​ ಶೆಟ್ಟಿ ಅವರು ಹೇಳಿರುವುದು ನಿಜವಲ್ಲ ಎಂದು ಚೇತನ್​ ಅಭಿಪ್ರಾಯಪಟ್ಟಿದ್ದರು. ಈ ಕುರಿತು ಈಗ ಚರ್ಚೆ ಶುರುವಾಗಿದೆ.

ಕನ್ನಡದ ‘ಕಾಂತಾರ’ ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಮೂಡಿಬಂದ ಈ ಚಿತ್ರವನ್ನು ರಿಷಬ್​ ಶೆಟ್ಟಿ ಅವರು ನಿರ್ದೇಶಿಸಿದ್ದಾರೆ. ಮುಖ್ಯ ಪಾತ್ರದಲ್ಲೂ ಅವರೇ ನಟಿಸಿದ್ದಾರೆ. ಬೇರೆ ಭಾಷೆಗಳಿಗೆ ಡಬ್​ ಆಗಿ ರಿಲೀಸ್​ ಆಗಿದ್ದು, ಎಲ್ಲರೂ ‘ಕಾಂತಾರ’ ಬಗ್ಗೆಯೇ ಮಾತನಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಟ ಚೇತನ್​ ಅವರು ಬೇರೊಂದು ಆಯಾಮವನ್ನು ಮುಂದಿಟ್ಟಿದ್ದಾರೆ.

ಭೂತಕೋಲ ಬಗ್ಗೆ ಚೇತನ್​ ಹೇಳಿದ್ದೇನು?

‘ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದರು. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ’ ಎಂದು ಚೇತನ್​ ಪೋಸ್ಟ್ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:15 pm, Sat, 22 October 22