ಮಣ್ಣಲ್ಲಿ ಮಣ್ಣಾದ ​​ನಟ ಚಿರಂಜೀವಿ ಸರ್ಜಾ

ಬೆಂಗಳೂರು: ಚಂದನವನದಲ್ಲಿ ಛಾಪು ಮೂಡಿಸಿದ್ದ ನಟ ಚಿರಂಜೀವಿ ಸರ್ಜಾ ಮಣ್ಣಲ್ಲಿ ಮಣ್ಣಾಗಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಗ್ರಾಮದ ಬಳಿ ಸಹೋದರ ಧ್ರುವ ಸರ್ಜಾ ಫಾರ್ಮ್‌ಹೌಸ್​ನಲ್ಲಿ ಚಿರು ಅಂತ್ಯಕ್ರಿಯೆ ನೆರವೇರಿದೆ. ಶೋಕಸಾಗರದಲ್ಲಿ ಚಿರು ಸರ್ಜಾ ಕುಟುಂಬಸ್ಥರು ಮುಳುಗಿದ್ದಾರೆ. ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯಲ್ಲಿ ಚಿರು ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಸೇರಿದಂತೆ ನೂರಾರು ಅಭಿಮಾನಿಗಳು ಭಾಗಿಯಾಗಿದ್ದರು. ಹೃದಯಾಘಾತದಿಂದ ನಿನ್ನೆ ಚಿರಂಜೀವಿ ಸರ್ಜಾ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅಗಲಿದ ನಾಯಕ ನಟನಿಗೆ ಕುಟುಂಬಸ್ಥರು, ಅಭಿಮಾನಿಗಳು, ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಕಂಬನಿ […]

ಮಣ್ಣಲ್ಲಿ ಮಣ್ಣಾದ ​​ನಟ ಚಿರಂಜೀವಿ ಸರ್ಜಾ
ಸಾಧು ಶ್ರೀನಾಥ್​ Edited By:

Updated on: Jun 08, 2020 | 7:43 PM

ಬೆಂಗಳೂರು: ಚಂದನವನದಲ್ಲಿ ಛಾಪು ಮೂಡಿಸಿದ್ದ ನಟ ಚಿರಂಜೀವಿ ಸರ್ಜಾ ಮಣ್ಣಲ್ಲಿ ಮಣ್ಣಾಗಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಗ್ರಾಮದ ಬಳಿ ಸಹೋದರ ಧ್ರುವ ಸರ್ಜಾ ಫಾರ್ಮ್‌ಹೌಸ್​ನಲ್ಲಿ ಚಿರು ಅಂತ್ಯಕ್ರಿಯೆ ನೆರವೇರಿದೆ.

ಶೋಕಸಾಗರದಲ್ಲಿ ಚಿರು ಸರ್ಜಾ ಕುಟುಂಬಸ್ಥರು ಮುಳುಗಿದ್ದಾರೆ. ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯಲ್ಲಿ ಚಿರು ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಸೇರಿದಂತೆ ನೂರಾರು ಅಭಿಮಾನಿಗಳು ಭಾಗಿಯಾಗಿದ್ದರು. ಹೃದಯಾಘಾತದಿಂದ ನಿನ್ನೆ ಚಿರಂಜೀವಿ ಸರ್ಜಾ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅಗಲಿದ ನಾಯಕ ನಟನಿಗೆ ಕುಟುಂಬಸ್ಥರು, ಅಭಿಮಾನಿಗಳು, ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.

 

Published On - 4:44 pm, Mon, 8 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us