AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯೂರಿಯಾಸಿಟಿ ಹೆಚ್ಚಿಸಿದ ನೂತನ ಚಿತ್ರ ‘ಆದಿಪುರುಷ್’ ಅವತಾರದಲ್ಲಿ ಬರ್ತಿದ್ದಾರೆ ಪ್ರಭಾಸ್, ರಾಮನಿಗೆ ಸೀತೆ ಯಾರು ಗೊತ್ತಾ?

ಬಾಹುಬಲಿ, ಸಾಹೋ ನಂತರ ಪ್ರಭಾಸ್ ಆದಿಪುರುಷ್ ಸಿನಿಮಾದ ಮೂಲಕ ಮೋಡಿ ಮಾಡೋಕೆ ಭರ್ಜರಿ ಪ್ಲಾನ್ ಮಾಡಿದ್ದಾರೆ. ಅಂದ ಹಾಗೆ ಪ್ರಭಾಸ್ ಜೊತೆ ಸ್ಕ್ರೀನ್ ಶೇರ್ ಮಾಡೋ ಕುರಿತು ಹಲವು ನಟಿಯರ ಹೆಸರು ತಳುಕು ಹಾಕಿಕೊಂಡಿತ್ತು. ಸದ್ಯ ಸೀತೆ ಅವತಾರ ತಾಳೋ ನಾಯಕಿ ಹೆಸರು ಹೊರ ಬಂದಿದೆ.

ಕ್ಯೂರಿಯಾಸಿಟಿ ಹೆಚ್ಚಿಸಿದ ನೂತನ ಚಿತ್ರ ‘ಆದಿಪುರುಷ್’ ಅವತಾರದಲ್ಲಿ ಬರ್ತಿದ್ದಾರೆ ಪ್ರಭಾಸ್, ರಾಮನಿಗೆ ಸೀತೆ ಯಾರು ಗೊತ್ತಾ?
ಆದಿಪುರುಷ್
Follow us
ಆಯೇಷಾ ಬಾನು
|

Updated on:Nov 29, 2020 | 11:04 AM

ಬಾಹುಬಲಿ ಸಿನಿಮಾ ಮೂಲಕ ಪ್ರಭಾಸ್ ಮೋಡಿ ಮಾಡಿದ ನಂತರವಂತೂ ಅವರ ಎಲ್ಲಾ ಸಿನಿಮಾಗಳ ಅಪ್ ಡೇಟ್ಸ್ ಗಳಿಗಾಗಿ ದೊಡ್ಡ ಅಭಿಮಾನಿ ಬಳಗವೇ ಕಾದು ಕೂರುವಂತಹ ಕ್ಯೂರಿಯಾಸಿಟಿ ಸೃಷ್ಟಿಯಾಗಿದೆ. ಸದ್ಯ ಆದಿಪುರುಷ್ ಸಿನಿಮಾದಲ್ಲಿ ನಟಿಸ್ತಿರೋ ಪ್ರಭಾಸ್, ಸಿನಿಮಾಗಾಗಿ ಭರ್ಜರಿ ತಯಾರಿಯಲ್ಲಿ ತೊಡಗಿದ್ದಾರೆ. ಜನವರಿ ನಂತ್ರ ಆದಿಪುರುಷ್ ಸಿನಿಮಾದಲ್ಲಿ ರಾಮನ ಅವತಾರಕ್ಕೆ ಮೇಕಪ್ ಹಾಕೋಕೆ ರೆಡಿಯಾಗಿದ್ದಾರೆ ಎನ್ನಲಾಗ್ತಿದೆ.

ಒಂದು ಕಡೆ ಪ್ರಭಾಸ್ ರಾಮನಾಗೋದು ಜೊತೆಗೆ ಸೈಪ್ ಅಲಿಖಾನ್ ಲಂಕಾಧಿತಿ ರಾವಣನ ಅವತಾರ ತಾಳೋಕೆ ಕೂಡ ರೆಡಿಯಾಗ್ತಿದ್ದಾರೆ. ಇದೆಲ್ಲದರ ಜೊತೆಗೆ ಪ್ರಭಾಸ್ ಜೊತೆ ಸೊಂಟ ಬಳುಕಿಸೋ ನಟಿ ಯಾರು. ಈ ಭಾರಿ ರಾಮನಿಗೆ ಸೀತೆ ಆಗೋದ್ಯಾರು ಅನ್ನೋ ಲೆಕ್ಕಾಚಾರದಲ್ಲಿ ಹಲವು ನಟಿಯರ ಹೆಸರು ಕೇಳಿ ಬಂದಿವೆ. ಮೊದಮೊದಲು ಅನುಷ್ಕಾ ಶೆಟ್ಟಿ, ಅನುಷ್ಕಾ ಶರ್ಮಾ ಹೆಸರಿನ ಜೊತೆಗೆ ಕೀರ್ತಿ ಸುರೇಶ್ ಸ್ಕ್ರೀನ್ ಶೇರ್ ಮಾಡ್ತಾರೆ ಎನ್ನಲಾಗಿತ್ತು.

ರಾಮನಿಗೆ ಸೀತೆ ಆಗಿ ಕಮಾಲ್ ಮಾಡ್ತಾರಾ ಕೃತಿ ಸನೂನ್: ಆದ್ರೀಗ ಅದೆಲ್ಲದಕ್ಕೂ ಬ್ರೇಕ್ ಹಾಕಿರೋ ಚಿತ್ರತಂಡ ಸೀತೆ ಅವತಾರದಲ್ಲಿ ಕಾಣಿಸಿಕೊಳ್ಳೋದು ನಟಿ ಕೃತಿ ಸನೂನ್ ಅನ್ನೋ ಮಾಹಿತಿ ಹೊರ ಹಾಕಿದೆ. ಸದ್ಯ ಕೃತಿ ಕೂಡ ಒಂದೊಳ್ಳೆ ಅವಕಾಶ ಅಂದ್ಕೊಂಡು ಆದಿಪುರುಷ್‌ಗೆ ಗ್ರೀನ್ ಸಿಗ್ನಲ್‌ ನೀಡಿದ್ದಾರಂತೆ. ಓಂ ರಾವುತ್ ಆಕ್ಷನ್ ಕಟ್ ಹೇಳ್ತಿರೋ ಸಿನಿಮಾದಲ್ಲಿ ಕೃತಿ ಸನೂನ್ ಜನವರಿಯಲ್ಲಿ ಆದಿಪುರುಷ್ ಅಡ್ಡಕ್ಕೆ ಎಂಟ್ರಿ ಕೊಡಲಿದ್ದಾರಂತೆ.

ಒಟ್ಟಿನಲ್ಲಿ ಪ್ರಬಾಸ್ ಜೊತೆ ನಾಯಕಿಯಾಗೋದ್ಯಾರು ಅನ್ನೋದಕ್ಕೆ ಸದ್ಯ ಉತ್ತರ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಇನ್ನು ಏನೆಲ್ಲಾ ವಿಶೇಷತೆಗಳಿಂದ ಸಿನಿಮಾ ಸೌಂಡ್ ಮಾಡುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

Published On - 6:55 am, Sun, 29 November 20

ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ