AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯೂರಿಯಾಸಿಟಿ ಹೆಚ್ಚಿಸಿದ ನೂತನ ಚಿತ್ರ ‘ಆದಿಪುರುಷ್’ ಅವತಾರದಲ್ಲಿ ಬರ್ತಿದ್ದಾರೆ ಪ್ರಭಾಸ್, ರಾಮನಿಗೆ ಸೀತೆ ಯಾರು ಗೊತ್ತಾ?

ಬಾಹುಬಲಿ, ಸಾಹೋ ನಂತರ ಪ್ರಭಾಸ್ ಆದಿಪುರುಷ್ ಸಿನಿಮಾದ ಮೂಲಕ ಮೋಡಿ ಮಾಡೋಕೆ ಭರ್ಜರಿ ಪ್ಲಾನ್ ಮಾಡಿದ್ದಾರೆ. ಅಂದ ಹಾಗೆ ಪ್ರಭಾಸ್ ಜೊತೆ ಸ್ಕ್ರೀನ್ ಶೇರ್ ಮಾಡೋ ಕುರಿತು ಹಲವು ನಟಿಯರ ಹೆಸರು ತಳುಕು ಹಾಕಿಕೊಂಡಿತ್ತು. ಸದ್ಯ ಸೀತೆ ಅವತಾರ ತಾಳೋ ನಾಯಕಿ ಹೆಸರು ಹೊರ ಬಂದಿದೆ.

ಕ್ಯೂರಿಯಾಸಿಟಿ ಹೆಚ್ಚಿಸಿದ ನೂತನ ಚಿತ್ರ ‘ಆದಿಪುರುಷ್’ ಅವತಾರದಲ್ಲಿ ಬರ್ತಿದ್ದಾರೆ ಪ್ರಭಾಸ್, ರಾಮನಿಗೆ ಸೀತೆ ಯಾರು ಗೊತ್ತಾ?
ಆದಿಪುರುಷ್
ಆಯೇಷಾ ಬಾನು
|

Updated on:Nov 29, 2020 | 11:04 AM

Share

ಬಾಹುಬಲಿ ಸಿನಿಮಾ ಮೂಲಕ ಪ್ರಭಾಸ್ ಮೋಡಿ ಮಾಡಿದ ನಂತರವಂತೂ ಅವರ ಎಲ್ಲಾ ಸಿನಿಮಾಗಳ ಅಪ್ ಡೇಟ್ಸ್ ಗಳಿಗಾಗಿ ದೊಡ್ಡ ಅಭಿಮಾನಿ ಬಳಗವೇ ಕಾದು ಕೂರುವಂತಹ ಕ್ಯೂರಿಯಾಸಿಟಿ ಸೃಷ್ಟಿಯಾಗಿದೆ. ಸದ್ಯ ಆದಿಪುರುಷ್ ಸಿನಿಮಾದಲ್ಲಿ ನಟಿಸ್ತಿರೋ ಪ್ರಭಾಸ್, ಸಿನಿಮಾಗಾಗಿ ಭರ್ಜರಿ ತಯಾರಿಯಲ್ಲಿ ತೊಡಗಿದ್ದಾರೆ. ಜನವರಿ ನಂತ್ರ ಆದಿಪುರುಷ್ ಸಿನಿಮಾದಲ್ಲಿ ರಾಮನ ಅವತಾರಕ್ಕೆ ಮೇಕಪ್ ಹಾಕೋಕೆ ರೆಡಿಯಾಗಿದ್ದಾರೆ ಎನ್ನಲಾಗ್ತಿದೆ.

ಒಂದು ಕಡೆ ಪ್ರಭಾಸ್ ರಾಮನಾಗೋದು ಜೊತೆಗೆ ಸೈಪ್ ಅಲಿಖಾನ್ ಲಂಕಾಧಿತಿ ರಾವಣನ ಅವತಾರ ತಾಳೋಕೆ ಕೂಡ ರೆಡಿಯಾಗ್ತಿದ್ದಾರೆ. ಇದೆಲ್ಲದರ ಜೊತೆಗೆ ಪ್ರಭಾಸ್ ಜೊತೆ ಸೊಂಟ ಬಳುಕಿಸೋ ನಟಿ ಯಾರು. ಈ ಭಾರಿ ರಾಮನಿಗೆ ಸೀತೆ ಆಗೋದ್ಯಾರು ಅನ್ನೋ ಲೆಕ್ಕಾಚಾರದಲ್ಲಿ ಹಲವು ನಟಿಯರ ಹೆಸರು ಕೇಳಿ ಬಂದಿವೆ. ಮೊದಮೊದಲು ಅನುಷ್ಕಾ ಶೆಟ್ಟಿ, ಅನುಷ್ಕಾ ಶರ್ಮಾ ಹೆಸರಿನ ಜೊತೆಗೆ ಕೀರ್ತಿ ಸುರೇಶ್ ಸ್ಕ್ರೀನ್ ಶೇರ್ ಮಾಡ್ತಾರೆ ಎನ್ನಲಾಗಿತ್ತು.

ರಾಮನಿಗೆ ಸೀತೆ ಆಗಿ ಕಮಾಲ್ ಮಾಡ್ತಾರಾ ಕೃತಿ ಸನೂನ್: ಆದ್ರೀಗ ಅದೆಲ್ಲದಕ್ಕೂ ಬ್ರೇಕ್ ಹಾಕಿರೋ ಚಿತ್ರತಂಡ ಸೀತೆ ಅವತಾರದಲ್ಲಿ ಕಾಣಿಸಿಕೊಳ್ಳೋದು ನಟಿ ಕೃತಿ ಸನೂನ್ ಅನ್ನೋ ಮಾಹಿತಿ ಹೊರ ಹಾಕಿದೆ. ಸದ್ಯ ಕೃತಿ ಕೂಡ ಒಂದೊಳ್ಳೆ ಅವಕಾಶ ಅಂದ್ಕೊಂಡು ಆದಿಪುರುಷ್‌ಗೆ ಗ್ರೀನ್ ಸಿಗ್ನಲ್‌ ನೀಡಿದ್ದಾರಂತೆ. ಓಂ ರಾವುತ್ ಆಕ್ಷನ್ ಕಟ್ ಹೇಳ್ತಿರೋ ಸಿನಿಮಾದಲ್ಲಿ ಕೃತಿ ಸನೂನ್ ಜನವರಿಯಲ್ಲಿ ಆದಿಪುರುಷ್ ಅಡ್ಡಕ್ಕೆ ಎಂಟ್ರಿ ಕೊಡಲಿದ್ದಾರಂತೆ.

ಒಟ್ಟಿನಲ್ಲಿ ಪ್ರಬಾಸ್ ಜೊತೆ ನಾಯಕಿಯಾಗೋದ್ಯಾರು ಅನ್ನೋದಕ್ಕೆ ಸದ್ಯ ಉತ್ತರ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಇನ್ನು ಏನೆಲ್ಲಾ ವಿಶೇಷತೆಗಳಿಂದ ಸಿನಿಮಾ ಸೌಂಡ್ ಮಾಡುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

Published On - 6:55 am, Sun, 29 November 20

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ