AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 5ಕ್ಕೆ ಬರ್ತಿದೆ ಶರಣ್ ನಟನೆಯ ಹಾರರ್ ಸಿನಿಮಾ ‘ಛೂ‌ ಮಂತರ್’

‘ಛೂ ಮಂತರ್’ ಸಿನಿಮಾ ರಿಲೀಸ್​ಗೆ ಒಂದು ತಿಂಗಳು ಬಾಕಿ ಇದೆ. ಹೀಗಾಗಿ, ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡುವ ಕೆಲಸವನ್ನು ತಂಡ ಮಾಡುತ್ತಿದೆ. ಟೀಸರ್ ನೋಡಿದವರಿಗೆ ಸಿನಿಮಾದ ಗುಣಮಟ್ಟದ ಬಗ್ಗೆ ನಿರೀಕ್ಷೆ ಮೂಡುವಂತಾಗಿದೆ. ಶೀಘ್ರವೇ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ.

ಏಪ್ರಿಲ್ 5ಕ್ಕೆ ಬರ್ತಿದೆ ಶರಣ್ ನಟನೆಯ ಹಾರರ್ ಸಿನಿಮಾ ‘ಛೂ‌ ಮಂತರ್’
ಶರಣ್
ರಾಜೇಶ್ ದುಗ್ಗುಮನೆ
|

Updated on: Mar 02, 2024 | 1:15 PM

Share

ನಟ ಶರಣ್ (Sharan) ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರ ನಟನೆಯ ‘ಅವಾತರ ಪುರುಷ 2’ ಸಿನಿಮಾ ಮಾರ್ಚ್​ 22ರಂದು ರಿಲೀಸ್ ಆಗಲಿದೆ ಎಂದು ಘೋಷಣೆ ಆಗಿದೆ. ಈ ಚಿತ್ರದಲ್ಲಿ ಮಾಟ ಮಂತ್ರದ ಬಗ್ಗೆ ಇದೆ. ಅದೇ ರೀತಿ, ಹಾರರ್ ಕಥೆ ಹೊಂದಿರುವ ‘ಛೂ‌ ಮಂತರ್’ ಸಿನಿಮಾ ಕೂಡ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ರಿಲೀಸ್ ದಿನಾಂಕವನ್ನು ತಂಡ ತಿಳಿಸಿದೆ. ಏಪ್ರಿಲ್ 5ಕ್ಕೆ ಈ ಚಿತ್ರ ಬಿಡುಗಡೆ ಆಗಲಿದೆ. ಈ ಮೂಲಕ ಶರಣ್ ಸಿನಿಮಾ ಬ್ಯಾಕ್​ ಟು ಬ್ಯಾಕ್ ರಿಲೀಸ್ ಆಗುತ್ತಿದೆ.

ತರುಣ್ ಸ್ಟುಡಿಯೋಸ್ ಬ್ಯಾನರ್​ ಅಡಿಯಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ‘ಛೂ ಮಂತರ್’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ‘ಕರ್ವ’ ಹೆಸರಿನ ಹಾಹರ್ ಸಿನಿಮಾ ಮಾಡಿ ಫೇಮಸ್ ಆದವರು ನವನೀತ್. ಅವರು ಶರಣ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಹಾಸ್ಯ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಂಡು ಫೇಮಸ್ ಆಗಿರೋ ಶರಣ್ ಅವರು ಹೊಸ ರೀತಿಯ ಪ್ರಯೋಗಕ್ಕೆ ಮುಂದಾಗಿದ್ದಾರೆ. ಈಗಾಗಲೇ ಸಿನಿಮಾದ ಟೀಸರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

‘ಛೂ ಮಂತರ್’ ಸಿನಿಮಾ ರಿಲೀಸ್​ಗೆ ಒಂದು ತಿಂಗಳು ಬಾಕಿ ಇದೆ. ಹೀಗಾಗಿ, ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡುವ ಕೆಲಸವನ್ನು ತಂಡ ಮಾಡುತ್ತಿದೆ. ಟೀಸರ್ ನೋಡಿದವರಿಗೆ ಸಿನಿಮಾದ ಗುಣಮಟ್ಟದ ಬಗ್ಗೆ ನಿರೀಕ್ಷೆ ಮೂಡುವಂತಾಗಿದೆ. ಶೀಘ್ರವೇ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ.

ಇದನ್ನೂ ಓದಿ: ‘ಛೂ ಮಂತರ್’ ಸಿನಿಮಾ ಸೆಟ್​​ನಲ್ಲಿ ಶರಣ್​ಗೆ ಹಾರರ್ ಅನುಭವ

‘ಛೂ ಮಂತರ್’ ಪಕ್ಕಾ ಹಾರರ್ ಸಿನಿಮಾ. ಇತರ ಹಾರರ್ ಚಿತ್ರಗಳಿಗಿಂತ ಈ ಸಿನಿಮಾ ಭಿನ್ನವಾಗಿದೆ ಎಂಬುದು ತಂಡದ ಅಭಿಪ್ರಾಯ. ಮೇಕಿಂಗ್ ವಿಚಾರದಲ್ಲೂ ಗುಣಮಟ್ಟ ಕಾಪಾಡಿಕೊಳ್ಳಲಾಗಿದೆ. ಶರಣ್ ಪಾತ್ರ ಈ ಹಿಂದಿನ ಸಿನಿಮಾಗಳಿಗಿಂತ ಭಿನ್ನವಾಗಿದೆ. ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಸಿನಿಮಾದಲ್ಲಿ ಇವರ ಕಾಂಬಿನೇಷನ್ ಇದೆ. ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರದ ಟ್ರೇಲರ್ ರಿಲೀಸ್ ದಿನಾಂಕವನ್ನು ತಂಡ ಶೀಘ್ರವೇ ತಿಳಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ