AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟೌನ್​ನಲ್ಲಿ ಮದುವೆ ಗುಸುಗುಸು: ಮೌನ ಮುರಿದ ಆಲಿಯಾ ಭಟ್ ಮದುವೆ ಬಗ್ಗೆ ಹೇಳಿದ್ದೇನು?

ಬಾಲಿವುಡ್​ನಲ್ಲಿ ಸಿನಿಮಾಗಳಿಗಿಂತಾ ಹೆಚ್ಚಾಗಿ ಮದುವೆ ವಿಚಾರ ಸುದ್ದಿಯಾಗ್ತಿದೆ. ಅದ್ರಲ್ಲೂ ಆಲಿಯಾ ಭಟ್​ ಮದುವೆ ವಿಚಾರ ಸದಾ ಸದ್ದು ಮಾಡ್ತಲೇ ಇರುತ್ತೆ. ಈಗ ಮತ್ತೇ ಆಲಿಯಾ ಮದುವೆ ಚರ್ಚೆ ಆಗೋಕೆ ಆಲಿಯಾನೆ ಕಾರಣ. ಆಲಿಯಾ ತಮ್ಮ ಮದುವೆ ಬಗ್ಗೆ ಏನ್​ ಹೇಳಿದ್ದಾರೆ ಅನ್ನೋದನ್ನ ಇಲ್ಲಿ ಓದಿ.

ಬಿಟೌನ್​ನಲ್ಲಿ ಮದುವೆ ಗುಸುಗುಸು: ಮೌನ ಮುರಿದ ಆಲಿಯಾ ಭಟ್ ಮದುವೆ ಬಗ್ಗೆ ಹೇಳಿದ್ದೇನು?
ಆಯೇಷಾ ಬಾನು
|

Updated on:Dec 24, 2020 | 7:09 AM

Share

ಲಾಕ್​ಡೌನ್ ಬಳಿಕಾ ಆಲಿಯಾ ಭಟ್ ಸಿನಿಮಾ ಶೂಟಿಂಗ್​ನಲ್ಲಿ ಬ್ಯೂಸಿಯಾಗಿದ್ದಾರೆ. ರಾಜಮೌಳಿ ನಿರ್ದೇಶನದ ಆರ್​ಆರ್​ಆರ್ ಸಿನಿಮಾದ ಒಂದು ಶೆಡ್ಯೂಲ್ ಮುಗಿಸಿ ಬಂದಿದ್ದಾರೆ. ಆದ್ರೆ, ಈ ಸುದ್ದಿಯ ಬದಲು ಆಲಿಯಾ ಮದುವೆ ಸುದ್ದಿ ಬಿಟೌನ್​ನಲ್ಲಿ ಜೋರಾಗಿದೆ. ಪದೇಪದೆ ಆಲಿಯಾ ಮದುವೆ ಬಗ್ಗೆ ಜನ ಮಾತಾಡೋಕೆ ಕಾರಣ, ಆಲಿಯಾ ಮತ್ತು ರಣ್​ಬೀರ್ ಕಪೂರ್​ ನಡುವೆ ಇರೋ ಲವ್ವಿ-ಡವ್ವಿ.

ಶೂಟಿಂಗ್ ಮುಗಿಸಿ ಮರಳಿದ ಆಲಿಯಾ, ಮದುವೆ ಯಾವಾಗ ಅನ್ನೋ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಮದುವೆ ಯಾವಾಗ ಅನ್ನೋದನ್ನ ಹೇಳೋ ಬದಲಿಗೆ, ಮದುವೆ ಯಾಕಾಗಬೇಕು ಅಂದಿದ್ದಾರೆ. ಪತ್ರಿಕೆಯೊಂದಕ್ಕೆ ನೀಡಿರೋ ಸಂದರ್ಶನದಲ್ಲಿ ಆಲಿಯಾ ಭಟ್, ನನಗಿನ್ನೂ 25 ವರ್ಷ ವಯಸ್ಸು ಈಗಲೇ ಯಾಕೆ ಮದುವೆ ಆಗಬೇಕು. ಯಾಕೆ ಎಲ್ಲರೂ ನನ್ನ ಮದುವೆ ಬಗ್ಗೆ ಮಾತಾಡುತ್ತಾರೆ. ಅದಕ್ಕಿನ್ನೂ ಸಮಯ ಇದೆ ಅಂತಾ ಉತ್ತರಿಸಿದ್ದಾರೆ.

ಮದುವೆ ಬಗ್ಗೆ ಮಾತ್ನಾಡಿರೋ ಆಲಿಯಾ ಟ್ರೋಲ್​ಗೂ ತುತ್ತಾಗಿದ್ದಾರೆ. ಆಲಿಯಾ ತನಗೆ 25 ವರ್ಷ ವಯಸ್ಸು ಅಂತ ಹೇಳಿಕೊಂಡಿದ್ದಾರೆ. ಆಕೆಯ ವಯಸ್ಸು 27 ಆದ್ರೆ 25 ಅಂತ ಹೇಳಿಕೊಂಡಿದ್ದು, ನಿಜವಾದ ವಯಸ್ಸನ್ನ ಮುಚ್ಚಿಟ್ಟಿದ್ದಾರೆ ಅಂತ ನೆಟ್ಟಿಗರು ಆಲಿಯಾಗೆ ತಿವಿಯುತ್ತಿದ್ದಾರೆ.

ಮತ್ತೊಂದು ಕಡೆ ಆಲಿಯಾ ಭಟ್, ರಣ್​ಬೀರ್ ಜೊತೆಗೆ ಲಿವ್​ಇನ್ ರಿಲೇಷನ್​ಶಿಪ್​ನಲ್ಲಿ ಇದ್ದಾರೆ. ಹೀಗಾಗಿಯೇ ಮದುವೆ ಬಗ್ಗೆ ಮಾತನಾಡುತ್ತಿಲ್ಲ ಅನ್ನೋ ಗುಸುಗುಸು ಬಿಟೌನ್​ನಲ್ಲಿ ಹರಡಿದೆ.

Published On - 7:08 am, Thu, 24 December 20

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?