AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟೌನ್​ನಲ್ಲಿ ಮದುವೆ ಗುಸುಗುಸು: ಮೌನ ಮುರಿದ ಆಲಿಯಾ ಭಟ್ ಮದುವೆ ಬಗ್ಗೆ ಹೇಳಿದ್ದೇನು?

ಬಾಲಿವುಡ್​ನಲ್ಲಿ ಸಿನಿಮಾಗಳಿಗಿಂತಾ ಹೆಚ್ಚಾಗಿ ಮದುವೆ ವಿಚಾರ ಸುದ್ದಿಯಾಗ್ತಿದೆ. ಅದ್ರಲ್ಲೂ ಆಲಿಯಾ ಭಟ್​ ಮದುವೆ ವಿಚಾರ ಸದಾ ಸದ್ದು ಮಾಡ್ತಲೇ ಇರುತ್ತೆ. ಈಗ ಮತ್ತೇ ಆಲಿಯಾ ಮದುವೆ ಚರ್ಚೆ ಆಗೋಕೆ ಆಲಿಯಾನೆ ಕಾರಣ. ಆಲಿಯಾ ತಮ್ಮ ಮದುವೆ ಬಗ್ಗೆ ಏನ್​ ಹೇಳಿದ್ದಾರೆ ಅನ್ನೋದನ್ನ ಇಲ್ಲಿ ಓದಿ.

ಬಿಟೌನ್​ನಲ್ಲಿ ಮದುವೆ ಗುಸುಗುಸು: ಮೌನ ಮುರಿದ ಆಲಿಯಾ ಭಟ್ ಮದುವೆ ಬಗ್ಗೆ ಹೇಳಿದ್ದೇನು?
ಆಯೇಷಾ ಬಾನು
|

Updated on:Dec 24, 2020 | 7:09 AM

Share

ಲಾಕ್​ಡೌನ್ ಬಳಿಕಾ ಆಲಿಯಾ ಭಟ್ ಸಿನಿಮಾ ಶೂಟಿಂಗ್​ನಲ್ಲಿ ಬ್ಯೂಸಿಯಾಗಿದ್ದಾರೆ. ರಾಜಮೌಳಿ ನಿರ್ದೇಶನದ ಆರ್​ಆರ್​ಆರ್ ಸಿನಿಮಾದ ಒಂದು ಶೆಡ್ಯೂಲ್ ಮುಗಿಸಿ ಬಂದಿದ್ದಾರೆ. ಆದ್ರೆ, ಈ ಸುದ್ದಿಯ ಬದಲು ಆಲಿಯಾ ಮದುವೆ ಸುದ್ದಿ ಬಿಟೌನ್​ನಲ್ಲಿ ಜೋರಾಗಿದೆ. ಪದೇಪದೆ ಆಲಿಯಾ ಮದುವೆ ಬಗ್ಗೆ ಜನ ಮಾತಾಡೋಕೆ ಕಾರಣ, ಆಲಿಯಾ ಮತ್ತು ರಣ್​ಬೀರ್ ಕಪೂರ್​ ನಡುವೆ ಇರೋ ಲವ್ವಿ-ಡವ್ವಿ.

ಶೂಟಿಂಗ್ ಮುಗಿಸಿ ಮರಳಿದ ಆಲಿಯಾ, ಮದುವೆ ಯಾವಾಗ ಅನ್ನೋ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಮದುವೆ ಯಾವಾಗ ಅನ್ನೋದನ್ನ ಹೇಳೋ ಬದಲಿಗೆ, ಮದುವೆ ಯಾಕಾಗಬೇಕು ಅಂದಿದ್ದಾರೆ. ಪತ್ರಿಕೆಯೊಂದಕ್ಕೆ ನೀಡಿರೋ ಸಂದರ್ಶನದಲ್ಲಿ ಆಲಿಯಾ ಭಟ್, ನನಗಿನ್ನೂ 25 ವರ್ಷ ವಯಸ್ಸು ಈಗಲೇ ಯಾಕೆ ಮದುವೆ ಆಗಬೇಕು. ಯಾಕೆ ಎಲ್ಲರೂ ನನ್ನ ಮದುವೆ ಬಗ್ಗೆ ಮಾತಾಡುತ್ತಾರೆ. ಅದಕ್ಕಿನ್ನೂ ಸಮಯ ಇದೆ ಅಂತಾ ಉತ್ತರಿಸಿದ್ದಾರೆ.

ಮದುವೆ ಬಗ್ಗೆ ಮಾತ್ನಾಡಿರೋ ಆಲಿಯಾ ಟ್ರೋಲ್​ಗೂ ತುತ್ತಾಗಿದ್ದಾರೆ. ಆಲಿಯಾ ತನಗೆ 25 ವರ್ಷ ವಯಸ್ಸು ಅಂತ ಹೇಳಿಕೊಂಡಿದ್ದಾರೆ. ಆಕೆಯ ವಯಸ್ಸು 27 ಆದ್ರೆ 25 ಅಂತ ಹೇಳಿಕೊಂಡಿದ್ದು, ನಿಜವಾದ ವಯಸ್ಸನ್ನ ಮುಚ್ಚಿಟ್ಟಿದ್ದಾರೆ ಅಂತ ನೆಟ್ಟಿಗರು ಆಲಿಯಾಗೆ ತಿವಿಯುತ್ತಿದ್ದಾರೆ.

ಮತ್ತೊಂದು ಕಡೆ ಆಲಿಯಾ ಭಟ್, ರಣ್​ಬೀರ್ ಜೊತೆಗೆ ಲಿವ್​ಇನ್ ರಿಲೇಷನ್​ಶಿಪ್​ನಲ್ಲಿ ಇದ್ದಾರೆ. ಹೀಗಾಗಿಯೇ ಮದುವೆ ಬಗ್ಗೆ ಮಾತನಾಡುತ್ತಿಲ್ಲ ಅನ್ನೋ ಗುಸುಗುಸು ಬಿಟೌನ್​ನಲ್ಲಿ ಹರಡಿದೆ.

Published On - 7:08 am, Thu, 24 December 20

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ