AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟೌನ್​ನಲ್ಲಿ ಮದುವೆ ಗುಸುಗುಸು: ಮೌನ ಮುರಿದ ಆಲಿಯಾ ಭಟ್ ಮದುವೆ ಬಗ್ಗೆ ಹೇಳಿದ್ದೇನು?

ಬಾಲಿವುಡ್​ನಲ್ಲಿ ಸಿನಿಮಾಗಳಿಗಿಂತಾ ಹೆಚ್ಚಾಗಿ ಮದುವೆ ವಿಚಾರ ಸುದ್ದಿಯಾಗ್ತಿದೆ. ಅದ್ರಲ್ಲೂ ಆಲಿಯಾ ಭಟ್​ ಮದುವೆ ವಿಚಾರ ಸದಾ ಸದ್ದು ಮಾಡ್ತಲೇ ಇರುತ್ತೆ. ಈಗ ಮತ್ತೇ ಆಲಿಯಾ ಮದುವೆ ಚರ್ಚೆ ಆಗೋಕೆ ಆಲಿಯಾನೆ ಕಾರಣ. ಆಲಿಯಾ ತಮ್ಮ ಮದುವೆ ಬಗ್ಗೆ ಏನ್​ ಹೇಳಿದ್ದಾರೆ ಅನ್ನೋದನ್ನ ಇಲ್ಲಿ ಓದಿ.

ಬಿಟೌನ್​ನಲ್ಲಿ ಮದುವೆ ಗುಸುಗುಸು: ಮೌನ ಮುರಿದ ಆಲಿಯಾ ಭಟ್ ಮದುವೆ ಬಗ್ಗೆ ಹೇಳಿದ್ದೇನು?
ಆಯೇಷಾ ಬಾನು
|

Updated on:Dec 24, 2020 | 7:09 AM

Share

ಲಾಕ್​ಡೌನ್ ಬಳಿಕಾ ಆಲಿಯಾ ಭಟ್ ಸಿನಿಮಾ ಶೂಟಿಂಗ್​ನಲ್ಲಿ ಬ್ಯೂಸಿಯಾಗಿದ್ದಾರೆ. ರಾಜಮೌಳಿ ನಿರ್ದೇಶನದ ಆರ್​ಆರ್​ಆರ್ ಸಿನಿಮಾದ ಒಂದು ಶೆಡ್ಯೂಲ್ ಮುಗಿಸಿ ಬಂದಿದ್ದಾರೆ. ಆದ್ರೆ, ಈ ಸುದ್ದಿಯ ಬದಲು ಆಲಿಯಾ ಮದುವೆ ಸುದ್ದಿ ಬಿಟೌನ್​ನಲ್ಲಿ ಜೋರಾಗಿದೆ. ಪದೇಪದೆ ಆಲಿಯಾ ಮದುವೆ ಬಗ್ಗೆ ಜನ ಮಾತಾಡೋಕೆ ಕಾರಣ, ಆಲಿಯಾ ಮತ್ತು ರಣ್​ಬೀರ್ ಕಪೂರ್​ ನಡುವೆ ಇರೋ ಲವ್ವಿ-ಡವ್ವಿ.

ಶೂಟಿಂಗ್ ಮುಗಿಸಿ ಮರಳಿದ ಆಲಿಯಾ, ಮದುವೆ ಯಾವಾಗ ಅನ್ನೋ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಮದುವೆ ಯಾವಾಗ ಅನ್ನೋದನ್ನ ಹೇಳೋ ಬದಲಿಗೆ, ಮದುವೆ ಯಾಕಾಗಬೇಕು ಅಂದಿದ್ದಾರೆ. ಪತ್ರಿಕೆಯೊಂದಕ್ಕೆ ನೀಡಿರೋ ಸಂದರ್ಶನದಲ್ಲಿ ಆಲಿಯಾ ಭಟ್, ನನಗಿನ್ನೂ 25 ವರ್ಷ ವಯಸ್ಸು ಈಗಲೇ ಯಾಕೆ ಮದುವೆ ಆಗಬೇಕು. ಯಾಕೆ ಎಲ್ಲರೂ ನನ್ನ ಮದುವೆ ಬಗ್ಗೆ ಮಾತಾಡುತ್ತಾರೆ. ಅದಕ್ಕಿನ್ನೂ ಸಮಯ ಇದೆ ಅಂತಾ ಉತ್ತರಿಸಿದ್ದಾರೆ.

ಮದುವೆ ಬಗ್ಗೆ ಮಾತ್ನಾಡಿರೋ ಆಲಿಯಾ ಟ್ರೋಲ್​ಗೂ ತುತ್ತಾಗಿದ್ದಾರೆ. ಆಲಿಯಾ ತನಗೆ 25 ವರ್ಷ ವಯಸ್ಸು ಅಂತ ಹೇಳಿಕೊಂಡಿದ್ದಾರೆ. ಆಕೆಯ ವಯಸ್ಸು 27 ಆದ್ರೆ 25 ಅಂತ ಹೇಳಿಕೊಂಡಿದ್ದು, ನಿಜವಾದ ವಯಸ್ಸನ್ನ ಮುಚ್ಚಿಟ್ಟಿದ್ದಾರೆ ಅಂತ ನೆಟ್ಟಿಗರು ಆಲಿಯಾಗೆ ತಿವಿಯುತ್ತಿದ್ದಾರೆ.

ಮತ್ತೊಂದು ಕಡೆ ಆಲಿಯಾ ಭಟ್, ರಣ್​ಬೀರ್ ಜೊತೆಗೆ ಲಿವ್​ಇನ್ ರಿಲೇಷನ್​ಶಿಪ್​ನಲ್ಲಿ ಇದ್ದಾರೆ. ಹೀಗಾಗಿಯೇ ಮದುವೆ ಬಗ್ಗೆ ಮಾತನಾಡುತ್ತಿಲ್ಲ ಅನ್ನೋ ಗುಸುಗುಸು ಬಿಟೌನ್​ನಲ್ಲಿ ಹರಡಿದೆ.

Published On - 7:08 am, Thu, 24 December 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ