AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ತಾನದಲ್ಲಿ ಮೆಗಾ ಸ್ಟಾರ್ ಕುಟುಂಬದ ಏಕೈಕ ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ..

ಮೆಗಾ ಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆ ಮಾಡಿದೆ. ಚಿರು ಸಹೋದರ ನಾಗಬಾಬು ಪುತ್ರಿ‌ ನಿಹಾರಿಕಾ ಕೊನಿಡೆಲಾ ಮೆಹಂದಿ ಕಾರ್ಯಕ್ರಮ ಭರ್ಜರಿಯಾಗಿ ನೆರವೇರಿದೆ. ಕೊರೊನಾದಿಂದ ಮನೆಯಲ್ಲೇ ಇದ್ದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಸ್ತ್ ಎಂಜಾಯ್ ಮಾಡಿದ್ದಾರೆ.

ರಾಜಸ್ತಾನದಲ್ಲಿ ಮೆಗಾ ಸ್ಟಾರ್ ಕುಟುಂಬದ ಏಕೈಕ ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ..
ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ
ಆಯೇಷಾ ಬಾನು
|

Updated on: Dec 09, 2020 | 8:31 AM

Share

ಹೈದರಾಬಾದ್: ಮೆಗಾ ಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆ ಮಾಡಿದೆ. ಚಿರು ಸಹೋದರ ನಾಗಬಾಬು ಪುತ್ರಿ‌ ನಿಹಾರಿಕಾ ಕೊನಿಡೆಲಾ ಮೆಹಂದಿ ಕಾರ್ಯಕ್ರಮ ಭರ್ಜರಿಯಾಗಿ ನೆರವೇರಿದೆ. ಕೊರೊನಾದಿಂದ ಮನೆಯಲ್ಲೇ ಇದ್ದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಸ್ತ್ ಎಂಜಾಯ್ ಮಾಡಿದ್ದಾರೆ.

ರಾಜಸ್ಥಾನದ ಉದಯ್ ಪುರದಲ್ಲಿರುವ ಐಷಾರಾಮಿ ಹೋಟೆಲ್​ನಲ್ಲಿ ತಡರಾತ್ರಿ ಜರುಗಿದ‌ ಮೆಹಂದಿ‌ ಕಾರ್ಯಕ್ರಮದಲ್ಲಿ‌ ಪವನ್‌ ಕಲ್ಯಾಣ್, ಅಲ್ಲು ಅರ್ಜುನ್, ನಿರ್ಮಾಪಕ‌ ಅಲ್ಲು ಅರವಿಂದ, ರಾಮ‌ಚರಣ್ ಸೇರಿದಂತೆ ಅನೇಕ ನಟ-ನಟಿಯರು ಭಾಗಿಯಾಗಿದ್ದರು. ಈ ವೇಳೆ ನಿಹಾರಿಕಾ, ನಾಗಬಾಬು, ಚಿರಂಜಿವಿ ಹಾಗೂ ಕುಟುಂಬಸ್ಥರು, ಹಾಡುಗಳಿಗೆ‌ ನೃತ್ಯ ಮಾಡಿ ಸಂಭ್ರಮಿಸಿದ್ರು.

ಕೊರೊನಾ ಹಿನ್ನೆಲೆಯಲ್ಲಿ ಮದುವೆಯನ್ನು ಸರಳವಾಗಿ ಹಾಗೂ ಖಾಸಗಿಯಾಗಿ ಮಾಡಲು ಕುಟುಂಬಗಳು ನಿರ್ಧರಿಸಿವೆ. ಇಂದು (ಡಿ.09) ರಾಜಸ್ಥಾನದ ಉದಯ್ ಪುರದಲ್ಲಿರುವ ಐಷಾರಾಮಿ ಹೋಟೆಲ್​ನಲ್ಲಿ ವಿವಾಹ ಜರುಗಲಿದೆ.

ನಿಹಾರಿಕಾ ಮದುವೆಯಾಗುತ್ತಿರುವ ಹುಡುಗ ಯಾರು? ಗುಂಟೂರಿನ ಐಜಿಪಿ ಜೆ.ಪ್ರಭಾಕರ್ ರಾವ್ ಪುತ್ರ ಚೈತನ್ಯ ನಿಹಾರಿಕಾಳನ್ನ ವರಿಸಲಿದ್ದಾನೆ. ಚೈತನ್ಯ ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು ಹೈದರಾಬಾದ್​ನ ಪ್ರತಿಷ್ಠಿತ ಕಂಪನಿಯಲ್ಲಿ ಬ್ಯುಸಿನೆಸ್ ಸ್ಟ್ರಾಟಜಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಿಹಾರಿಕಾ ಮತ್ತು ಚೈತನ್ಯ ಅವರದ್ದು ಸಂಪೂರ್ಣ ಅರೆಂಜ್ ಮ್ಯಾರೇಜ್ ಆಗಿದೆ.

ಟಾಲಿವುಡ್‌ ದಿಗ್ಗಜ ನಟರ ಕುಟುಂಬದಲ್ಲಿ ಸಂಭ್ರಮ, ನೆರವೇರಿತು ನಿಹಾರಿಕಾಳ ಎಂಗೇಜ್‌ಮೆಂಟ್‌

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​