AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ತಾನದಲ್ಲಿ ಮೆಗಾ ಸ್ಟಾರ್ ಕುಟುಂಬದ ಏಕೈಕ ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ..

ಮೆಗಾ ಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆ ಮಾಡಿದೆ. ಚಿರು ಸಹೋದರ ನಾಗಬಾಬು ಪುತ್ರಿ‌ ನಿಹಾರಿಕಾ ಕೊನಿಡೆಲಾ ಮೆಹಂದಿ ಕಾರ್ಯಕ್ರಮ ಭರ್ಜರಿಯಾಗಿ ನೆರವೇರಿದೆ. ಕೊರೊನಾದಿಂದ ಮನೆಯಲ್ಲೇ ಇದ್ದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಸ್ತ್ ಎಂಜಾಯ್ ಮಾಡಿದ್ದಾರೆ.

ರಾಜಸ್ತಾನದಲ್ಲಿ ಮೆಗಾ ಸ್ಟಾರ್ ಕುಟುಂಬದ ಏಕೈಕ ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ..
ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 09, 2020 | 8:31 AM

Share

ಹೈದರಾಬಾದ್: ಮೆಗಾ ಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆ ಮಾಡಿದೆ. ಚಿರು ಸಹೋದರ ನಾಗಬಾಬು ಪುತ್ರಿ‌ ನಿಹಾರಿಕಾ ಕೊನಿಡೆಲಾ ಮೆಹಂದಿ ಕಾರ್ಯಕ್ರಮ ಭರ್ಜರಿಯಾಗಿ ನೆರವೇರಿದೆ. ಕೊರೊನಾದಿಂದ ಮನೆಯಲ್ಲೇ ಇದ್ದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಸ್ತ್ ಎಂಜಾಯ್ ಮಾಡಿದ್ದಾರೆ.

ರಾಜಸ್ಥಾನದ ಉದಯ್ ಪುರದಲ್ಲಿರುವ ಐಷಾರಾಮಿ ಹೋಟೆಲ್​ನಲ್ಲಿ ತಡರಾತ್ರಿ ಜರುಗಿದ‌ ಮೆಹಂದಿ‌ ಕಾರ್ಯಕ್ರಮದಲ್ಲಿ‌ ಪವನ್‌ ಕಲ್ಯಾಣ್, ಅಲ್ಲು ಅರ್ಜುನ್, ನಿರ್ಮಾಪಕ‌ ಅಲ್ಲು ಅರವಿಂದ, ರಾಮ‌ಚರಣ್ ಸೇರಿದಂತೆ ಅನೇಕ ನಟ-ನಟಿಯರು ಭಾಗಿಯಾಗಿದ್ದರು. ಈ ವೇಳೆ ನಿಹಾರಿಕಾ, ನಾಗಬಾಬು, ಚಿರಂಜಿವಿ ಹಾಗೂ ಕುಟುಂಬಸ್ಥರು, ಹಾಡುಗಳಿಗೆ‌ ನೃತ್ಯ ಮಾಡಿ ಸಂಭ್ರಮಿಸಿದ್ರು.

ಕೊರೊನಾ ಹಿನ್ನೆಲೆಯಲ್ಲಿ ಮದುವೆಯನ್ನು ಸರಳವಾಗಿ ಹಾಗೂ ಖಾಸಗಿಯಾಗಿ ಮಾಡಲು ಕುಟುಂಬಗಳು ನಿರ್ಧರಿಸಿವೆ. ಇಂದು (ಡಿ.09) ರಾಜಸ್ಥಾನದ ಉದಯ್ ಪುರದಲ್ಲಿರುವ ಐಷಾರಾಮಿ ಹೋಟೆಲ್​ನಲ್ಲಿ ವಿವಾಹ ಜರುಗಲಿದೆ.

ನಿಹಾರಿಕಾ ಮದುವೆಯಾಗುತ್ತಿರುವ ಹುಡುಗ ಯಾರು? ಗುಂಟೂರಿನ ಐಜಿಪಿ ಜೆ.ಪ್ರಭಾಕರ್ ರಾವ್ ಪುತ್ರ ಚೈತನ್ಯ ನಿಹಾರಿಕಾಳನ್ನ ವರಿಸಲಿದ್ದಾನೆ. ಚೈತನ್ಯ ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು ಹೈದರಾಬಾದ್​ನ ಪ್ರತಿಷ್ಠಿತ ಕಂಪನಿಯಲ್ಲಿ ಬ್ಯುಸಿನೆಸ್ ಸ್ಟ್ರಾಟಜಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಿಹಾರಿಕಾ ಮತ್ತು ಚೈತನ್ಯ ಅವರದ್ದು ಸಂಪೂರ್ಣ ಅರೆಂಜ್ ಮ್ಯಾರೇಜ್ ಆಗಿದೆ.

ಟಾಲಿವುಡ್‌ ದಿಗ್ಗಜ ನಟರ ಕುಟುಂಬದಲ್ಲಿ ಸಂಭ್ರಮ, ನೆರವೇರಿತು ನಿಹಾರಿಕಾಳ ಎಂಗೇಜ್‌ಮೆಂಟ್‌

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ