AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯೂಸಿಕಲ್ ಚೇರ್‌ನಂತಾದ ದೇವನಹಳ್ಳಿ ತಹಶೀಲ್ದಾರ್ ಹುದ್ದೆ.. ನೇಮಕ ವಿಚಾರದಲ್ಲಿ ಬರೀ ಗೊಂದಲ

ಅಜಿತ್ ಕುಮಾರ್ ರೈ ವರ್ಗಾವಣೆ ನಂತರ ಅವರ ಸ್ಥಾನಕ್ಕೆ ಡಿಸೆಂಬರ್​ 11ರಂದು ದೇವನಹಳ್ಳಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಅನಿಲ್ ಕುಮಾರ್ ಅವರನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಅದೇ ದಿನ, ಅದೇ ಸ್ಥಾನಕ್ಕೆ ಯಲಹಂಕ ತಾಲೂಕು ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಕೆ.ಮಂಜುನಾಥ್ ಅವರನ್ನು ಗ್ರೇಡ್​ 1 ತಹಶೀಲ್ದಾರ್​ ಆಗಿ ವರ್ಗಾವಣೆ ಮಾಡಲಾಗಿದೆ.

ಮ್ಯೂಸಿಕಲ್ ಚೇರ್‌ನಂತಾದ ದೇವನಹಳ್ಳಿ ತಹಶೀಲ್ದಾರ್ ಹುದ್ದೆ.. ನೇಮಕ ವಿಚಾರದಲ್ಲಿ ಬರೀ ಗೊಂದಲ
ಪ್ರಾತಿನಿಧಿಕ ಚಿತ್ರ
Skanda
|

Updated on: Dec 16, 2020 | 5:32 PM

Share

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಕುರ್ಚಿ ಮ್ಯೂಸಿಕಲ್​ ಚೇರ್​ನಂತಾಗಿದೆ. ದೇವನಹಳ್ಳಿ ತಹಶೀಲ್ದಾರ್ ಆಗಿದ್ದ ಅಜಿತ್ ಕುಮಾರ್ ರೈ ಡಿಸೆಂಬರ್ 10ರಂದು ಕೆ.ಆರ್.ಪುರಂ ತಹಶೀಲ್ದಾರ್ ಸ್ಥಾನಕ್ಕೆ ವರ್ಗಾವಣೆ ಆಗಿದ್ದಾರೆ. ಆ ನಂತರ ಅವರ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಗೊಂದಲದ ಗೂಡನ್ನೇ ಮೈಮೇಲೆ ಎಳೆದುಕೊಂಡಂತೆ ಕಾಣುತ್ತಿದೆ.

ಅಜಿತ್ ಕುಮಾರ್ ರೈ ವರ್ಗಾವಣೆ ನಂತರ ಅವರ ಸ್ಥಾನಕ್ಕೆ ಡಿಸೆಂಬರ್​ 11ರಂದು ದೇವನಹಳ್ಳಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಅನಿಲ್ ಕುಮಾರ್ ಅವರನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಅನಿಲ್ ವರ್ಗಾವಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅನುಮೋದನೆಯನ್ನೂ ನೀಡಿದ್ದರು. ಆದರೆ, ಅದೇ ದಿನ, ಅದೇ ಸ್ಥಾನಕ್ಕೆ ಯಲಹಂಕ ತಾಲೂಕು ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಕೆ.ಮಂಜುನಾಥ್ ಅವರನ್ನು ಗ್ರೇಡ್​ 1 ತಹಶೀಲ್ದಾರ್​ ಆಗಿ ವರ್ಗಾವಣೆ ಮಾಡಲಾಗಿದೆ.

ಆದರೆ, ಒಂದೇ ಸ್ಥಾನಕ್ಕೆ ಇಬ್ಬರನ್ನು ವರ್ಗಾವಣೆ ಮಾಡಿದ್ದು ಗೊಂದಲಕ್ಕೆ ಕಾರಣವಾಗಿದೆ. ಅದಾಗಿ ಎರಡು ದಿನಕ್ಕೆ ಅಂದರೆ ಡಿಸೆಂಬರ್​ 14 ರಂದು ಸರ್ಕಾರ ಕೆ.ಮಂಜುನಾಥ್ ಅವರ ವರ್ಗಾವಣೆಯನ್ನು ಹಿಂಪಡೆದಿದೆ. ಬಳಿಕ ಆ ಜಾಗಕ್ಕೆ ಪುನಃ ಅನಿಲ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಅದೇನೇ ಆದರೂ ತಹಶೀಲ್ದಾರ್ ಹುದ್ದೆಯ ವಿಚಾರದಲ್ಲಿಯೇ ಈ ಪರಿ ಗೊಂದಲಗಳು ಹುಟ್ಟಿದ್ದು ಮಾತ್ರ ವಿಪರ್ಯಾಸ.

ಅಧಿಕಾರ ಬಿಟ್ಟುಕೊಟ್ರೂ SIM ಬಿಡೆನು: ಖಾಕಿಗಳ ಕಿತ್ತಾಟದಲ್ಲಿ ಜನರ ಕಷ್ಟ ಕೇಳೋರು ಯಾರು?

ಕಚೇರಿಯಲ್ಲಿಯೇ ಸಹೋದ್ಯೋಗಿಗೆ ಕಿಸ್‌ ಕೊಟ್ಟು ವೈರಲ್‌ ಆಗಿದ್ದ ತಹಶೀಲ್ದಾರ್ ಗುರುಬಸವರಾಜ್‌ ಸಸ್ಪೆಂಡ್‌

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ