AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯೂಸಿಕಲ್ ಚೇರ್‌ನಂತಾದ ದೇವನಹಳ್ಳಿ ತಹಶೀಲ್ದಾರ್ ಹುದ್ದೆ.. ನೇಮಕ ವಿಚಾರದಲ್ಲಿ ಬರೀ ಗೊಂದಲ

ಅಜಿತ್ ಕುಮಾರ್ ರೈ ವರ್ಗಾವಣೆ ನಂತರ ಅವರ ಸ್ಥಾನಕ್ಕೆ ಡಿಸೆಂಬರ್​ 11ರಂದು ದೇವನಹಳ್ಳಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಅನಿಲ್ ಕುಮಾರ್ ಅವರನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಅದೇ ದಿನ, ಅದೇ ಸ್ಥಾನಕ್ಕೆ ಯಲಹಂಕ ತಾಲೂಕು ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಕೆ.ಮಂಜುನಾಥ್ ಅವರನ್ನು ಗ್ರೇಡ್​ 1 ತಹಶೀಲ್ದಾರ್​ ಆಗಿ ವರ್ಗಾವಣೆ ಮಾಡಲಾಗಿದೆ.

ಮ್ಯೂಸಿಕಲ್ ಚೇರ್‌ನಂತಾದ ದೇವನಹಳ್ಳಿ ತಹಶೀಲ್ದಾರ್ ಹುದ್ದೆ.. ನೇಮಕ ವಿಚಾರದಲ್ಲಿ ಬರೀ ಗೊಂದಲ
ಪ್ರಾತಿನಿಧಿಕ ಚಿತ್ರ
Skanda
|

Updated on: Dec 16, 2020 | 5:32 PM

Share

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಕುರ್ಚಿ ಮ್ಯೂಸಿಕಲ್​ ಚೇರ್​ನಂತಾಗಿದೆ. ದೇವನಹಳ್ಳಿ ತಹಶೀಲ್ದಾರ್ ಆಗಿದ್ದ ಅಜಿತ್ ಕುಮಾರ್ ರೈ ಡಿಸೆಂಬರ್ 10ರಂದು ಕೆ.ಆರ್.ಪುರಂ ತಹಶೀಲ್ದಾರ್ ಸ್ಥಾನಕ್ಕೆ ವರ್ಗಾವಣೆ ಆಗಿದ್ದಾರೆ. ಆ ನಂತರ ಅವರ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಗೊಂದಲದ ಗೂಡನ್ನೇ ಮೈಮೇಲೆ ಎಳೆದುಕೊಂಡಂತೆ ಕಾಣುತ್ತಿದೆ.

ಅಜಿತ್ ಕುಮಾರ್ ರೈ ವರ್ಗಾವಣೆ ನಂತರ ಅವರ ಸ್ಥಾನಕ್ಕೆ ಡಿಸೆಂಬರ್​ 11ರಂದು ದೇವನಹಳ್ಳಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಅನಿಲ್ ಕುಮಾರ್ ಅವರನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಅನಿಲ್ ವರ್ಗಾವಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅನುಮೋದನೆಯನ್ನೂ ನೀಡಿದ್ದರು. ಆದರೆ, ಅದೇ ದಿನ, ಅದೇ ಸ್ಥಾನಕ್ಕೆ ಯಲಹಂಕ ತಾಲೂಕು ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಕೆ.ಮಂಜುನಾಥ್ ಅವರನ್ನು ಗ್ರೇಡ್​ 1 ತಹಶೀಲ್ದಾರ್​ ಆಗಿ ವರ್ಗಾವಣೆ ಮಾಡಲಾಗಿದೆ.

ಆದರೆ, ಒಂದೇ ಸ್ಥಾನಕ್ಕೆ ಇಬ್ಬರನ್ನು ವರ್ಗಾವಣೆ ಮಾಡಿದ್ದು ಗೊಂದಲಕ್ಕೆ ಕಾರಣವಾಗಿದೆ. ಅದಾಗಿ ಎರಡು ದಿನಕ್ಕೆ ಅಂದರೆ ಡಿಸೆಂಬರ್​ 14 ರಂದು ಸರ್ಕಾರ ಕೆ.ಮಂಜುನಾಥ್ ಅವರ ವರ್ಗಾವಣೆಯನ್ನು ಹಿಂಪಡೆದಿದೆ. ಬಳಿಕ ಆ ಜಾಗಕ್ಕೆ ಪುನಃ ಅನಿಲ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಅದೇನೇ ಆದರೂ ತಹಶೀಲ್ದಾರ್ ಹುದ್ದೆಯ ವಿಚಾರದಲ್ಲಿಯೇ ಈ ಪರಿ ಗೊಂದಲಗಳು ಹುಟ್ಟಿದ್ದು ಮಾತ್ರ ವಿಪರ್ಯಾಸ.

ಅಧಿಕಾರ ಬಿಟ್ಟುಕೊಟ್ರೂ SIM ಬಿಡೆನು: ಖಾಕಿಗಳ ಕಿತ್ತಾಟದಲ್ಲಿ ಜನರ ಕಷ್ಟ ಕೇಳೋರು ಯಾರು?

ಕಚೇರಿಯಲ್ಲಿಯೇ ಸಹೋದ್ಯೋಗಿಗೆ ಕಿಸ್‌ ಕೊಟ್ಟು ವೈರಲ್‌ ಆಗಿದ್ದ ತಹಶೀಲ್ದಾರ್ ಗುರುಬಸವರಾಜ್‌ ಸಸ್ಪೆಂಡ್‌

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್