AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯೂಸಿಕಲ್ ಚೇರ್‌ನಂತಾದ ದೇವನಹಳ್ಳಿ ತಹಶೀಲ್ದಾರ್ ಹುದ್ದೆ.. ನೇಮಕ ವಿಚಾರದಲ್ಲಿ ಬರೀ ಗೊಂದಲ

ಅಜಿತ್ ಕುಮಾರ್ ರೈ ವರ್ಗಾವಣೆ ನಂತರ ಅವರ ಸ್ಥಾನಕ್ಕೆ ಡಿಸೆಂಬರ್​ 11ರಂದು ದೇವನಹಳ್ಳಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಅನಿಲ್ ಕುಮಾರ್ ಅವರನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಅದೇ ದಿನ, ಅದೇ ಸ್ಥಾನಕ್ಕೆ ಯಲಹಂಕ ತಾಲೂಕು ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಕೆ.ಮಂಜುನಾಥ್ ಅವರನ್ನು ಗ್ರೇಡ್​ 1 ತಹಶೀಲ್ದಾರ್​ ಆಗಿ ವರ್ಗಾವಣೆ ಮಾಡಲಾಗಿದೆ.

ಮ್ಯೂಸಿಕಲ್ ಚೇರ್‌ನಂತಾದ ದೇವನಹಳ್ಳಿ ತಹಶೀಲ್ದಾರ್ ಹುದ್ದೆ.. ನೇಮಕ ವಿಚಾರದಲ್ಲಿ ಬರೀ ಗೊಂದಲ
ಪ್ರಾತಿನಿಧಿಕ ಚಿತ್ರ
Follow us
Skanda
|

Updated on: Dec 16, 2020 | 5:32 PM

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಕುರ್ಚಿ ಮ್ಯೂಸಿಕಲ್​ ಚೇರ್​ನಂತಾಗಿದೆ. ದೇವನಹಳ್ಳಿ ತಹಶೀಲ್ದಾರ್ ಆಗಿದ್ದ ಅಜಿತ್ ಕುಮಾರ್ ರೈ ಡಿಸೆಂಬರ್ 10ರಂದು ಕೆ.ಆರ್.ಪುರಂ ತಹಶೀಲ್ದಾರ್ ಸ್ಥಾನಕ್ಕೆ ವರ್ಗಾವಣೆ ಆಗಿದ್ದಾರೆ. ಆ ನಂತರ ಅವರ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಗೊಂದಲದ ಗೂಡನ್ನೇ ಮೈಮೇಲೆ ಎಳೆದುಕೊಂಡಂತೆ ಕಾಣುತ್ತಿದೆ.

ಅಜಿತ್ ಕುಮಾರ್ ರೈ ವರ್ಗಾವಣೆ ನಂತರ ಅವರ ಸ್ಥಾನಕ್ಕೆ ಡಿಸೆಂಬರ್​ 11ರಂದು ದೇವನಹಳ್ಳಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಅನಿಲ್ ಕುಮಾರ್ ಅವರನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಅನಿಲ್ ವರ್ಗಾವಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅನುಮೋದನೆಯನ್ನೂ ನೀಡಿದ್ದರು. ಆದರೆ, ಅದೇ ದಿನ, ಅದೇ ಸ್ಥಾನಕ್ಕೆ ಯಲಹಂಕ ತಾಲೂಕು ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಕೆ.ಮಂಜುನಾಥ್ ಅವರನ್ನು ಗ್ರೇಡ್​ 1 ತಹಶೀಲ್ದಾರ್​ ಆಗಿ ವರ್ಗಾವಣೆ ಮಾಡಲಾಗಿದೆ.

ಆದರೆ, ಒಂದೇ ಸ್ಥಾನಕ್ಕೆ ಇಬ್ಬರನ್ನು ವರ್ಗಾವಣೆ ಮಾಡಿದ್ದು ಗೊಂದಲಕ್ಕೆ ಕಾರಣವಾಗಿದೆ. ಅದಾಗಿ ಎರಡು ದಿನಕ್ಕೆ ಅಂದರೆ ಡಿಸೆಂಬರ್​ 14 ರಂದು ಸರ್ಕಾರ ಕೆ.ಮಂಜುನಾಥ್ ಅವರ ವರ್ಗಾವಣೆಯನ್ನು ಹಿಂಪಡೆದಿದೆ. ಬಳಿಕ ಆ ಜಾಗಕ್ಕೆ ಪುನಃ ಅನಿಲ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಅದೇನೇ ಆದರೂ ತಹಶೀಲ್ದಾರ್ ಹುದ್ದೆಯ ವಿಚಾರದಲ್ಲಿಯೇ ಈ ಪರಿ ಗೊಂದಲಗಳು ಹುಟ್ಟಿದ್ದು ಮಾತ್ರ ವಿಪರ್ಯಾಸ.

ಅಧಿಕಾರ ಬಿಟ್ಟುಕೊಟ್ರೂ SIM ಬಿಡೆನು: ಖಾಕಿಗಳ ಕಿತ್ತಾಟದಲ್ಲಿ ಜನರ ಕಷ್ಟ ಕೇಳೋರು ಯಾರು?

ಕಚೇರಿಯಲ್ಲಿಯೇ ಸಹೋದ್ಯೋಗಿಗೆ ಕಿಸ್‌ ಕೊಟ್ಟು ವೈರಲ್‌ ಆಗಿದ್ದ ತಹಶೀಲ್ದಾರ್ ಗುರುಬಸವರಾಜ್‌ ಸಸ್ಪೆಂಡ್‌

ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು