AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯೂಸಿಕಲ್ ಚೇರ್‌ನಂತಾದ ದೇವನಹಳ್ಳಿ ತಹಶೀಲ್ದಾರ್ ಹುದ್ದೆ.. ನೇಮಕ ವಿಚಾರದಲ್ಲಿ ಬರೀ ಗೊಂದಲ

ಅಜಿತ್ ಕುಮಾರ್ ರೈ ವರ್ಗಾವಣೆ ನಂತರ ಅವರ ಸ್ಥಾನಕ್ಕೆ ಡಿಸೆಂಬರ್​ 11ರಂದು ದೇವನಹಳ್ಳಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಅನಿಲ್ ಕುಮಾರ್ ಅವರನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಅದೇ ದಿನ, ಅದೇ ಸ್ಥಾನಕ್ಕೆ ಯಲಹಂಕ ತಾಲೂಕು ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಕೆ.ಮಂಜುನಾಥ್ ಅವರನ್ನು ಗ್ರೇಡ್​ 1 ತಹಶೀಲ್ದಾರ್​ ಆಗಿ ವರ್ಗಾವಣೆ ಮಾಡಲಾಗಿದೆ.

ಮ್ಯೂಸಿಕಲ್ ಚೇರ್‌ನಂತಾದ ದೇವನಹಳ್ಳಿ ತಹಶೀಲ್ದಾರ್ ಹುದ್ದೆ.. ನೇಮಕ ವಿಚಾರದಲ್ಲಿ ಬರೀ ಗೊಂದಲ
ಪ್ರಾತಿನಿಧಿಕ ಚಿತ್ರ
Skanda
|

Updated on: Dec 16, 2020 | 5:32 PM

Share

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಕುರ್ಚಿ ಮ್ಯೂಸಿಕಲ್​ ಚೇರ್​ನಂತಾಗಿದೆ. ದೇವನಹಳ್ಳಿ ತಹಶೀಲ್ದಾರ್ ಆಗಿದ್ದ ಅಜಿತ್ ಕುಮಾರ್ ರೈ ಡಿಸೆಂಬರ್ 10ರಂದು ಕೆ.ಆರ್.ಪುರಂ ತಹಶೀಲ್ದಾರ್ ಸ್ಥಾನಕ್ಕೆ ವರ್ಗಾವಣೆ ಆಗಿದ್ದಾರೆ. ಆ ನಂತರ ಅವರ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಗೊಂದಲದ ಗೂಡನ್ನೇ ಮೈಮೇಲೆ ಎಳೆದುಕೊಂಡಂತೆ ಕಾಣುತ್ತಿದೆ.

ಅಜಿತ್ ಕುಮಾರ್ ರೈ ವರ್ಗಾವಣೆ ನಂತರ ಅವರ ಸ್ಥಾನಕ್ಕೆ ಡಿಸೆಂಬರ್​ 11ರಂದು ದೇವನಹಳ್ಳಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಅನಿಲ್ ಕುಮಾರ್ ಅವರನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಅನಿಲ್ ವರ್ಗಾವಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅನುಮೋದನೆಯನ್ನೂ ನೀಡಿದ್ದರು. ಆದರೆ, ಅದೇ ದಿನ, ಅದೇ ಸ್ಥಾನಕ್ಕೆ ಯಲಹಂಕ ತಾಲೂಕು ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಕೆ.ಮಂಜುನಾಥ್ ಅವರನ್ನು ಗ್ರೇಡ್​ 1 ತಹಶೀಲ್ದಾರ್​ ಆಗಿ ವರ್ಗಾವಣೆ ಮಾಡಲಾಗಿದೆ.

ಆದರೆ, ಒಂದೇ ಸ್ಥಾನಕ್ಕೆ ಇಬ್ಬರನ್ನು ವರ್ಗಾವಣೆ ಮಾಡಿದ್ದು ಗೊಂದಲಕ್ಕೆ ಕಾರಣವಾಗಿದೆ. ಅದಾಗಿ ಎರಡು ದಿನಕ್ಕೆ ಅಂದರೆ ಡಿಸೆಂಬರ್​ 14 ರಂದು ಸರ್ಕಾರ ಕೆ.ಮಂಜುನಾಥ್ ಅವರ ವರ್ಗಾವಣೆಯನ್ನು ಹಿಂಪಡೆದಿದೆ. ಬಳಿಕ ಆ ಜಾಗಕ್ಕೆ ಪುನಃ ಅನಿಲ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಅದೇನೇ ಆದರೂ ತಹಶೀಲ್ದಾರ್ ಹುದ್ದೆಯ ವಿಚಾರದಲ್ಲಿಯೇ ಈ ಪರಿ ಗೊಂದಲಗಳು ಹುಟ್ಟಿದ್ದು ಮಾತ್ರ ವಿಪರ್ಯಾಸ.

ಅಧಿಕಾರ ಬಿಟ್ಟುಕೊಟ್ರೂ SIM ಬಿಡೆನು: ಖಾಕಿಗಳ ಕಿತ್ತಾಟದಲ್ಲಿ ಜನರ ಕಷ್ಟ ಕೇಳೋರು ಯಾರು?

ಕಚೇರಿಯಲ್ಲಿಯೇ ಸಹೋದ್ಯೋಗಿಗೆ ಕಿಸ್‌ ಕೊಟ್ಟು ವೈರಲ್‌ ಆಗಿದ್ದ ತಹಶೀಲ್ದಾರ್ ಗುರುಬಸವರಾಜ್‌ ಸಸ್ಪೆಂಡ್‌

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ