AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿ ಮರೀಚಿಕೆ.. ಪ್ರಾಣಿಗಳು ಸಂಕಷ್ಟದಲ್ಲಿ..

ಕೋಟೆನಾಡು ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಬಯಲಯಸೀಮೆಯ ಏಕೈಕ ಪ್ರಾಣಿ ಸಂಗ್ರಹಾಲಯ. ಆದ್ರೆ, ಸರ್ಕಾರದ ನಿರ್ಲಕ್ಷದಿಂದಾಗಿ ಪ್ರಾಣಿ ಸಂಗ್ರಹಾಲಯದ ಅಭಿವೃದ್ಧಿ ನೆನೆಗುದಿಗೆ ಬಿದ್ದಿದೆ. ಹಾಗೇ ಪ್ರಾಣಿಗಳು ಸಹ ಸಂಕಟಕ್ಕೆ ಸಿಲುಕುವ ದುಸ್ಥಿತಿ ಎದುರಾಗಿದೆ. ಚಿತ್ರದುರ್ಗ ನಗರದ ಬಳಿಯ ಜೋಗಿಮಟ್ಟಿ ತಪ್ಪಲಲ್ಲಿರುವ ಆಡುಮಲ್ಲೇಶ್ವರ ಕಿರು ಪ್ರಾಣಿ ಸಂಗ್ರಹಾಲಯವು ಸಾಕಷ್ಟು ವರ್ಷಗಳ ಹಿಂದೆಯೇ ನಿರ್ಮಾಣ ಆಗಿದ್ದು, ಈ ಭಾಗದ ಜನರಿಗೆ ಕಾಡುಪ್ರಾಣಿಗಳನ್ನು ನೋಡುವ ಭಾಗ್ಯ ಕರುಣಿಸಿದೆ. ಈ ಪ್ರಾಣಿ ಸಂಗ್ರಹಾಲಯ ವಿಸ್ತೀರ್ಣಗೊಳಿಸಿ ಅಭಿವೃದ್ಧಿಗೊಳಿಸುವ ಯೋಜನೆಗೆ ಮೂರು ವರ್ಷಗಳ ಹಿಂದೆಯೇ ಚಾಲನೆ […]

ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿ ಮರೀಚಿಕೆ.. ಪ್ರಾಣಿಗಳು ಸಂಕಷ್ಟದಲ್ಲಿ..
ಆಯೇಷಾ ಬಾನು
|

Updated on: Nov 17, 2020 | 7:41 AM

Share

ಕೋಟೆನಾಡು ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಬಯಲಯಸೀಮೆಯ ಏಕೈಕ ಪ್ರಾಣಿ ಸಂಗ್ರಹಾಲಯ. ಆದ್ರೆ, ಸರ್ಕಾರದ ನಿರ್ಲಕ್ಷದಿಂದಾಗಿ ಪ್ರಾಣಿ ಸಂಗ್ರಹಾಲಯದ ಅಭಿವೃದ್ಧಿ ನೆನೆಗುದಿಗೆ ಬಿದ್ದಿದೆ. ಹಾಗೇ ಪ್ರಾಣಿಗಳು ಸಹ ಸಂಕಟಕ್ಕೆ ಸಿಲುಕುವ ದುಸ್ಥಿತಿ ಎದುರಾಗಿದೆ.

ಚಿತ್ರದುರ್ಗ ನಗರದ ಬಳಿಯ ಜೋಗಿಮಟ್ಟಿ ತಪ್ಪಲಲ್ಲಿರುವ ಆಡುಮಲ್ಲೇಶ್ವರ ಕಿರು ಪ್ರಾಣಿ ಸಂಗ್ರಹಾಲಯವು ಸಾಕಷ್ಟು ವರ್ಷಗಳ ಹಿಂದೆಯೇ ನಿರ್ಮಾಣ ಆಗಿದ್ದು, ಈ ಭಾಗದ ಜನರಿಗೆ ಕಾಡುಪ್ರಾಣಿಗಳನ್ನು ನೋಡುವ ಭಾಗ್ಯ ಕರುಣಿಸಿದೆ. ಈ ಪ್ರಾಣಿ ಸಂಗ್ರಹಾಲಯ ವಿಸ್ತೀರ್ಣಗೊಳಿಸಿ ಅಭಿವೃದ್ಧಿಗೊಳಿಸುವ ಯೋಜನೆಗೆ ಮೂರು ವರ್ಷಗಳ ಹಿಂದೆಯೇ ಚಾಲನೆ ಸಿಕ್ಕಿದೆ. ಆದ್ರೆ, ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿ ಯೋಜನೆ ಮಾತ್ರ ಪೂರ್ಣಗೊಂಡಿಲ್ಲ. ನಿನ್ನೆ ಪ್ರಾಣಿ ಸಂಗ್ರಹಾಲಯವನ್ನ ವೀಕ್ಷಿಸಿದ ಬಸವಮೂರ್ತಿ ಮಾದಾರ ಚನ್ನಯ್ಯಶ್ರೀಗಳು ಪ್ರಾಣಿ ಸಂಗ್ರಹಾಲಯದತ್ತ ಹೆಚ್ಚಿನ ಗಮನಹರಿಸಿ ಅಭಿವೃದ್ಧಿ ಪಡಿಸಬೇಕುಂದು ಒತ್ತಾಯಿಸಿದರು.

ಇನ್ನು ಈಗಾಗಲೇ 60 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಎಂಟೂವರೆ ಹೆಕ್ಟೇರ್ ಪ್ರದೇಶಕ್ಕೆ ಹೆಚ್ಚಿಸಲಾಗಿದೆ. ಕರಡಿ, ಚಿರತೆಗೆ ದೊಡ್ಡ ಮನೆಗಳನ್ನು ನಿರ್ಮಿಸಲಾಗಿದೆ. ಆದ್ರೆ, ಇನ್ನುಳಿದ ಅಭಿವೃದ್ಧಿಗೆ ಐದು ಕೋಟಿಯಷ್ಟು ಹಣ ಬಿಡುಗಡೆ ಆಗಬೇಕಿದೆ. ಅನುದಾನ ಬಿಡುಗಡೆ ಆದ ಬಳಿಕ ಆಡುಮಲ್ಲೇಶ್ವರ ಝೂ ಮತ್ತಷ್ಟು ಅಭಿವೃದ್ಧಿ ಕಾಣಲಿದೆ.

ಒಟ್ಟಾರೆಯಾಗಿ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯದತ್ತ ಸರ್ಕಾರ ಗಮನಹರಿಸಿ ಶೀಘ್ರ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕಿದೆ. ಆ ಮೂಲಕ ಬಯಲು ಸೀಮೆಯ ಏಕೈಕ ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕಿದೆ.

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು