50 ದಿನದ ಹಿಂದೆ ಲಂಡನ್​ನಲ್ಲಿ ಟಿಕ್ಕಿ ಆತ್ಮಹತ್ಯೆ, ಸೋಮವಾರ ಹುಬ್ಬಳ್ಳಿಗೆ ಪಾರ್ಥಿವ ಶರೀರ!

ಹುಬ್ಬಳ್ಳಿ: ಲಂಡನ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಹುಬ್ಬಳ್ಳಿ ಮೂಲದ ಟೆಕ್ಕಿಯ ಮೃತದೇಹವನ್ನು 50 ದಿನಗಳ ಬಳಿಕ ಅಂದ್ರೆ ನಾಳೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತಿದೆ. ಮಾ.13 ರಂದು ನವನಗರ ಮೂಲದ ಟೆಕ್ಕಿ ಗದಿಗೆಪ್ಪಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದ. 50 ದಿನಗಳ ಬಳಿಕ ಮಗನ ಪಾರ್ಥಿವ ಶರೀರದ ದರ್ಶನಕ್ಕೆ ಪೋಷಕರು ಹಾತೊರೆಯುತ್ತಿದ್ದಾರೆ. ಮೃತನ ಪತ್ನಿ ಶಿವಲೀಲಾ ಹಾಗೂ ಪುತ್ರ ಶಿವಾನಂದ ಹಾಗೂ ಪತ್ನಿಯ ಸಹೋದರ ಜೊತೆ ಲಂಡನ್​ನಲ್ಲಿ ಗದಿಗೆಪ್ಪಗೌಡ ವಾಸವಿದ್ದರು. ಮಗನ ಅಂತ್ಯ ಸಂಸ್ಕಾರವನ್ನು ಹುಬ್ಬಳ್ಳಿಯಲ್ಲೇ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದು, ಪುತ್ರನ ಪಾರ್ಥಿವ […]

50 ದಿನದ ಹಿಂದೆ ಲಂಡನ್​ನಲ್ಲಿ ಟಿಕ್ಕಿ ಆತ್ಮಹತ್ಯೆ, ಸೋಮವಾರ ಹುಬ್ಬಳ್ಳಿಗೆ ಪಾರ್ಥಿವ ಶರೀರ!
ಸಾಧು ಶ್ರೀನಾಥ್​

Updated on: May 10, 2020 | 3:19 PM

ಹುಬ್ಬಳ್ಳಿ: ಲಂಡನ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಹುಬ್ಬಳ್ಳಿ ಮೂಲದ ಟೆಕ್ಕಿಯ ಮೃತದೇಹವನ್ನು 50 ದಿನಗಳ ಬಳಿಕ ಅಂದ್ರೆ ನಾಳೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತಿದೆ. ಮಾ.13 ರಂದು ನವನಗರ ಮೂಲದ ಟೆಕ್ಕಿ ಗದಿಗೆಪ್ಪಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದ. 50 ದಿನಗಳ ಬಳಿಕ ಮಗನ ಪಾರ್ಥಿವ ಶರೀರದ ದರ್ಶನಕ್ಕೆ ಪೋಷಕರು ಹಾತೊರೆಯುತ್ತಿದ್ದಾರೆ.

ಮೃತನ ಪತ್ನಿ ಶಿವಲೀಲಾ ಹಾಗೂ ಪುತ್ರ ಶಿವಾನಂದ ಹಾಗೂ ಪತ್ನಿಯ ಸಹೋದರ ಜೊತೆ ಲಂಡನ್​ನಲ್ಲಿ ಗದಿಗೆಪ್ಪಗೌಡ ವಾಸವಿದ್ದರು. ಮಗನ ಅಂತ್ಯ ಸಂಸ್ಕಾರವನ್ನು ಹುಬ್ಬಳ್ಳಿಯಲ್ಲೇ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದು, ಪುತ್ರನ ಪಾರ್ಥಿವ ಶರೀರಕ್ಕಾಗಿ ಪೋಷಕರು ಕಾದು ಕುಳಿತಿದ್ದಾರೆ.

ಲಾಕ್​ಡೌನ್ ಹಿನ್ನೆಲೆಯಲ್ಲಿ ಟೆಕ್ಕಿಯ ಪಾರ್ಥಿವ ಶರೀರ ಭಾರತಕ್ಕೆ ತರಲು ವಿಳಂಬವಾಗಿದೆ. ಸೋಮವಾರ ಬೆಳಗಿನ ಜಾವ 3.30ಕ್ಕೆ ಮೃತದೇಹ ಬೆಂಗಳೂರಿಗೆ ಆಗಮಿಸಲಿದೆ. ನಂತರ ಆ್ಯಂಬುಲೆನ್ಸ್ ಮೂಲಕ ಹುಬ್ಬಳ್ಳಿಗೆ ಮೃತದೇಹ ತಲುಪಲಿದೆ.

ಮಗನ ಪಾರ್ಥಿವ ಶರೀರ ಭಾರತಕ್ಕೆ ತರುವಂತೆ 15 ದಿನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಗೆ ಪೋಷಕರು ನೆರವು ಕೋರಿದ್ದರು. ಪೋಷಕರ ಮನವಿಗೆ ಸ್ಪಂದಿಸಿ ಶವ ತರಿಸಲು ಜೋಶಿ ಸಹಕಾರ ನೀಡಿದ್ದರು. ಈ ಸಂಬಂಧ ಕೇಂದ್ರ ಆರೋಗ್ಯ ಇಲಾಖೆ, ಲಂಡನ್‌ ಸರ್ಕಾರದ ಜೊತೆ ಮಾತುಕತೆ ನಡೆಸಿತ್ತು.

 

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us