AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ತು 6 ತಿಂಗಳ ಬಳಿಕ ಮಲೇಷ್ಯಾದಿಂದ ಹುಟ್ಟೂರು ಪಿರಿಯಾಪಟ್ಟಣಕ್ಕೆ ಬಂತು ಮೃತದೇಹ!

ಮೈಸೂರು: ಆತ ಚೆನ್ನಾಗಿ ದುಡಿಬೇಕು ಅಂತ ಕೆಲಸಕ್ಕಾಗಿ ಮಲೇಷ್ಯಾಗೆ ಹೋಗಿದ್ದ. 35 ಸಾವಿರ ಸಂಬಳದ ಆಸೆ ಹುಸಿಯಾಗಿ 18 ಸಾವಿರ ಸಂಬಳದ ಕೆಲಸ ಸಿಕ್ಕಿತ್ತು. ನೊಂದ ಯುವಕ ವಾಪಸ್ ಮನೆಗೆ ಬರೋದಾಗಿ ತಾಯಿಗೆ ಕರೆ ಮಾಡಿ ಹೇಳಿದ್ದ ಆದ್ರೆ ಹುಟ್ಟೂರಿಗೆ ಬರುವ ಮೊದಲೆ ಅವನ ನಿಗೂಢ ಸಾವಾಗಿತ್ತು. ಡಿಸೆಂಬರ್‌ನಲ್ಲಿ ಮೃತಪಟ್ಟ ಯುವಕನ ಮೃತ ದೇಹ ಇಂದು ಹುಟ್ಟೂರಿಗೆ ತಲುಪಿದೆ. ಸುಮಂತ್(22) ಪಿರಿಯಾಪಟ್ಟಣದ ನಿವಾಸಿ. ಕೆಲಸಕ್ಕಾಗಿ ಮಲೇಷಿಯಾಗೆ ತೆರಳಿದ್ದ. 35 ಸಾವಿರ ರೂ. ಸಂಬಳ ಕೊಡಿಸುವುದಾಗಿ ನಂಬಿಸಿ ಮಧ್ಯವರ್ತಿಯೊಬ್ಬ […]

ಸತ್ತು 6 ತಿಂಗಳ ಬಳಿಕ ಮಲೇಷ್ಯಾದಿಂದ ಹುಟ್ಟೂರು ಪಿರಿಯಾಪಟ್ಟಣಕ್ಕೆ ಬಂತು ಮೃತದೇಹ!
ಆಯೇಷಾ ಬಾನು
| Edited By: |

Updated on:Jul 08, 2020 | 1:09 PM

Share

ಮೈಸೂರು: ಆತ ಚೆನ್ನಾಗಿ ದುಡಿಬೇಕು ಅಂತ ಕೆಲಸಕ್ಕಾಗಿ ಮಲೇಷ್ಯಾಗೆ ಹೋಗಿದ್ದ. 35 ಸಾವಿರ ಸಂಬಳದ ಆಸೆ ಹುಸಿಯಾಗಿ 18 ಸಾವಿರ ಸಂಬಳದ ಕೆಲಸ ಸಿಕ್ಕಿತ್ತು. ನೊಂದ ಯುವಕ ವಾಪಸ್ ಮನೆಗೆ ಬರೋದಾಗಿ ತಾಯಿಗೆ ಕರೆ ಮಾಡಿ ಹೇಳಿದ್ದ ಆದ್ರೆ ಹುಟ್ಟೂರಿಗೆ ಬರುವ ಮೊದಲೆ ಅವನ ನಿಗೂಢ ಸಾವಾಗಿತ್ತು. ಡಿಸೆಂಬರ್‌ನಲ್ಲಿ ಮೃತಪಟ್ಟ ಯುವಕನ ಮೃತ ದೇಹ ಇಂದು ಹುಟ್ಟೂರಿಗೆ ತಲುಪಿದೆ.

ಸುಮಂತ್(22) ಪಿರಿಯಾಪಟ್ಟಣದ ನಿವಾಸಿ. ಕೆಲಸಕ್ಕಾಗಿ ಮಲೇಷಿಯಾಗೆ ತೆರಳಿದ್ದ. 35 ಸಾವಿರ ರೂ. ಸಂಬಳ ಕೊಡಿಸುವುದಾಗಿ ನಂಬಿಸಿ ಮಧ್ಯವರ್ತಿಯೊಬ್ಬ ಆತನನ್ನು ಕರೆದೊಯ್ದಿದ್ದ. ಆದರೆ ಅಲ್ಲಿ ಅವನಿಗೆ ಕೇವಲ 18 ಸಾವಿರ ರೂ. ಕೆಲಸ ಕೊಡಿಸಿ ವಂಚನೆ ಮಾಡಿದ್ದಾನೆ. ಇದರಿಂದ ಮನನೊಂದ ಯುವಕ ವಾಪಸ್ಸು ಬರುವುದಾಗಿ ತಾಯಿಗೆ ಹೇಳಿಕೊಂಡಿದ್ದ.

ಅಷ್ಟರಲ್ಲೇ ಸುಮಂತ್ ಮಲೇಷಿಯಾದಲ್ಲಿ ಡಿಸೆಂಬರ್ ತಿಂಗಳಲ್ಲಿ ನಿಗೂಢವಾಗಿ ಮೃತಪಟ್ಟಿದ್ದ. ಈ ವಿಷಯವನ್ನು ಸುಮಂತ್ ಸಹೋದ್ಯೋಗಿಗಳು ಮನೆಯವರಿಗೆ ಮಾಹಿತಿ ತಿಳಿಸಿದ್ದರು. ಸಾವಿನ ತನಿಖೆ ಹಾಗೂ ಶವ ತರಿಸಿಕೊಳ್ಳಲು ಸಂಸದ ಪ್ರತಾಪ್‌ ಸಿಂಹ‌ಗೆ ಪೋಷಕರು ಮನವಿ ಮಾಡಿದ್ದರು.

ಭಾರತದ ರಾಯಭಾರಿ ಕಚೇರಿಗೆ ಮಾಹಿತಿ ನೀಡಿ ಶವ ತರಿಸುವುದಾಗಿ ಸಂಸದ ಪ್ರತಾಪ್‌ ಸಿಂಹ ಭರವಸೆ ನೀಡಿದ್ದರು. ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ 6 ತಿಂಗಳ ಬಳಿಕ ತಡವಾಗಿ ಸುಮಂತ್ ಮೃತದೇಹ ಹುಟ್ಟೂರಿಗೆ ಆಗಮಿಸಿದೆ. ಕೊನೆಗೂ ಅಂತ್ಯಕ್ರಿಯೆ ನೆರವೇರಿಸಿ ಕುಟುಂಬಸ್ಥರು ಸಮಾಧಾನಪಟ್ಟಿದ್ದಾರೆ.

Published On - 9:06 am, Wed, 8 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ